AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂಗಲಾನ್’ ಟ್ರೇಲರ್ ಕನ್ನಡದಲ್ಲೂ ಬಂತು; ಕೆಜಿಎಫ್ ಕಥೆಯಲ್ಲಿ ಚಿಯಾನ್ ವಿಕ್ರಮ್ ಅಬ್ಬರ

ಚಿಯಾನ್​ ವಿಕ್ರಮ್​ ನಟನೆಯ ‘ತಂಗಲಾನ್’ ಸಿನಿಮಾದಲ್ಲಿ ಕೋಲಾರ ಚಿನ್ನದ ಗಣಿಯ ಕಥೆಯನ್ನು ತೋರಿಸಲಾಗುತ್ತಿದೆ. ಕರುನಾಡಿನ ಕಥೆ ಇರುವ ಈ ಸಿನಿಮಾ ತಮಿಳು, ಕನ್ನಡ, ತೆಲುಗು, ಹಿಂದಿ ಮುಂತಾದ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಈಗ ಟ್ರೇಲರ್​ ಅನಾವರಣ ಮಾಡಲಾಗಿದೆ. ‘ತಂಗಲಾನ್’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿಸುವಲ್ಲಿ ಈ ಟ್ರೇಲರ್​ ಯಶಸ್ವಿ ಆಗಿದೆ.

‘ತಂಗಲಾನ್’ ಟ್ರೇಲರ್ ಕನ್ನಡದಲ್ಲೂ ಬಂತು; ಕೆಜಿಎಫ್ ಕಥೆಯಲ್ಲಿ ಚಿಯಾನ್ ವಿಕ್ರಮ್ ಅಬ್ಬರ
ಚಿಯಾನ್​ ವಿಕ್ರಮ್​
ಮದನ್​ ಕುಮಾರ್​
|

Updated on: Jul 10, 2024 | 10:27 PM

Share

ನಟ ಚಿಯಾನ್​ ವಿಕ್ರಮ್​ ಅವರು ಪ್ರತಿ ಸಿನಿಮಾದಲ್ಲೂ ಗೆಟಪ್​ ಬದಲಾಯಿಸಿಕೊಂಡು ಗಮನ ಸೆಳೆಯುತ್ತಾರೆ. ಈಗ ಅವರು ನಟಿಸಿರುವ ‘ತಂಗಲಾನ್​’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಇದರಲ್ಲಿ ಅವರ ಗೆಟಪ್​ ನೋಡಿದರೆ ಸಿನಿಮಾ ಬಗ್ಗೆ ನಿರೀಕ್ಷೆ ಡಬಲ್​ ಆಗುತ್ತದೆ. ಬುಡಕಟ್ಟು ಜನಾಂಗದ ವ್ಯಕ್ತಿಯ ಪಾತ್ರದಲ್ಲಿ ವಿಕ್ರಮ್​ ಅವರು ನಟಿಸಿದ್ದಾರೆ. ಬ್ರಿಟಿಷರ ಕಾಲದ ಕಹಾನಿ ಈ ಸಿನಿಮಾದಲ್ಲಿ ಇದೆ. ತಮಿಳಿನ ಈ ಸಿನಿಮಾ ಕನ್ನಡಕ್ಕೂ ಡಬ್​ ಆಗಿ ಬಿಡುಗಡೆ ಆಗಲಿದೆ. ಕನ್ನಡ ವರ್ಷನ್​ ಟ್ರೇಲರ್​ ಕೂಡ ಬಿಡುಗಡೆ ಆಗಿದೆ. ಪ. ರಂಜಿತ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

‘ತಂಗಲಾನ್​’ ಟ್ರೇಲರ್​ನಲ್ಲಿ ಬೇರೊಂದು ಲೋಕವೇ ಅನಾವರಣ ಆಗಿದೆ. ಆ ನೆಲೆಯಲ್ಲಿ ಬಂಗಾರ ಇದೆ ಎಂಬುದು ಬ್ರಿಟಿಷರಿಗೆ ತಿಳಿಯುತ್ತದೆ. ಬುಡಕಟ್ಟು ಜನರ ಸಹಾಯ ಪಡೆದು ಚಿನ್ನ ತೆಗೆಯಲು ಬ್ರಿಟಿಷರು ಮುಂದಾಗುತ್ತಾರೆ. ಆದರೆ ಅಲ್ಲಿ ಚಿನ್ನ ಹುಡುಕುವುದು ಸಾವಿಗೆ ಸಮ ಎಂಬ ಎಚ್ಚರಿಕೆ ಕೂಡ ಎದುರಾಗುತ್ತದೆ. ಹಾಗಿದ್ದರೂ ಚಿನ್ನದ ಬೇಟೆ ಮುಂದುವರಿಯುತ್ತದೆ. ಆಗ ಎದುರಾಗುವ ಸಂಘರ್ಷ ಭಯಾನಕವಾಗಿರುತ್ತದೆ. ಹೀಗೆ.. ಕಥೆಯ ಎಳೆಯನ್ನು ‘ತಂಗಲಾನ್​’ ಟ್ರೇಲರ್​ನಲ್ಲಿ ಬಿಟ್ಟುಕೊಡಲಾಗಿದೆ.

‘ತಂಗಲಾನ್​’ ಟ್ರೇಲರ್​:

ಕೆ.ಇ. ಜ್ಞಾನವೇಲ್​ ರಾಜಾ ಅವರು ‘ತಂಗಲಾನ್​’ ಸಿನಿಮಾವನ್ನು ನಿರ್ಮಿಸಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಜಿ. ವಿ. ಪ್ರಕಾಶ್​ ಕುಮಾರ್​ ಸಂಗೀತ ನೀಡಿದ್ದಾರೆ. ಮಾಳವಿಕಾ ಮೋಹನನ್ ಅವರು ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಪಾರ್ವತಿ ತಿರುವತ್ತು ಕೂಡ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಕನ್ನಡದ ಟ್ರೇಲರ್​ ನೋಡಿ ಪ್ರೇಕ್ಷಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸಿನಿಮಾ ಮೇಲಿನ ಕೌತುಕ ಜಾಸ್ತಿ ಆಗಿದೆ.

ಇದನ್ನೂ ಓದಿ: ಕೆಜಿಎಫ್​ನಲ್ಲಿ ಈಗಲೂ ಚಿನ್ನ ಇದೆಯೇ?: ಕೋಲಾರದ ಚಿನ್ನದ ಗಣಿ ಮುಚ್ಚಲು ಏನು ಕಾರಣ..?

ಚಿಯಾನ್​ ವಿಕ್ರಮ್​ ಅವರ ವೃತ್ತಿಜೀವನದಲ್ಲಿ ‘ತಂಗಲಾನ್​’ ಸಿನಿಮಾ ಸಖತ್ ಭಿನ್ನವಾಗಿರಲಿದೆ. ಈ ಚಿತ್ರದ ಟ್ರೇಲರ್​ನಲ್ಲಿ ಅವರು ಅಬ್ಬರಿಸಿದ್ದಾರೆ. ಮೈನವಿರೇಳಿಸುವ ಆ್ಯಕ್ಷನ್​ ಸನ್ನಿವೇಶಗಳು ಈ ಸಿನಿಮಾದಲ್ಲಿ ಇವೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಆಗಸ್ಟ್​ 15ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಅಂದಹಾಗೆ, ಈ ಸಿನಿಮಾದಲ್ಲಿ ಇರುವುದು ಕರ್ನಾಟಕದ ಕೋಲಾರದ ಕಥೆ. ಕೋಲಾರ ಚಿನ್ನದ ಗಣಿಯ (ಕೆಜಿಎಫ್​) ರಿಯಲ್ ಕಥೆಯನ್ನು ಈ ಸಿನಿಮಾ ತೆರೆದಿಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ