AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIIMA Awards : ಕನ್ನಡದಿಂದ ಮೂರು ಚಿತ್ರಗಳು ನಾಮಿನೇಟ್​; ನೆಚ್ಚಿನ ಚಿತ್ರಕ್ಕೆ ನೀವೂ ವೋಟ್ ಮಾಡಬಹುದು

ಸಂತೋಷ್ ಆನಂದ್​ರಾಮ್ ನಿರ್ದೇಶನದ, ಪುನೀತ್ ರಾಜ್​ಕುಮಾರ್ ಅಭಿನಯದ ‘ಯುವರತ್ನ’ ಚಿತ್ರ ಏಳು ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡಿದೆ. ಇದು ಪುನೀತ್​ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ.

SIIMA Awards : ಕನ್ನಡದಿಂದ ಮೂರು ಚಿತ್ರಗಳು ನಾಮಿನೇಟ್​; ನೆಚ್ಚಿನ ಚಿತ್ರಕ್ಕೆ ನೀವೂ ವೋಟ್ ಮಾಡಬಹುದು
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 17, 2022 | 2:53 PM

Share

ಪ್ರತಿಷ್ಠಿತ ‘ದಕ್ಷಿಣ ಭಾರತದ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ’ ಅಥವಾ ‘ಸೈಮಾ 2021’ನೇ (SIIMA 2021) ಸಾಲಿನ ನಾಮನಿರ್ದೇಶನ ಪಟ್ಟಿ ಬಿಡುಗಡೆ ಆಗಿದೆ. ದಕ್ಷಿಣ ಭಾರತದ ವಿವಿಧ ಸಿನಿಮಾಗಳು ಇಲ್ಲಿ ನಾಮನಿರ್ದೇಶನಗೊಂಡಿವೆ. ಕನ್ನಡದಿಂದ ಮೂರು ಚಿತ್ರಗಳು ನಾಮಿನೇಟ್ ಆಗಿವೆ. ತೆಲುಗಿನಲ್ಲಿ ತೆರೆಗೆ ಬಂದ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ (Pushpa Movie) ಬರೋಬ್ಬರಿ 12 ವಿಭಾಗಗಳಲ್ಲಿ ನಾಮಿನೇಷನ್ ಪಡೆದುಕೊಂಡಿದೆ. ಈ ಮೂಲಕ ಅತಿ ಹೆಚ್ಚು ವಿಭಾಗಗಳಲ್ಲಿ ನಾಮನಿರ್ದೇಶನಗೊಂಡ ಸಿನಿಮಾ ಎಂಬ ಹೆಗ್ಗಳಿಕೆಗೆ ಈ ಚಿತ್ರ ಭಾಗಿ ಆಗಿದೆ.

ಕನ್ನಡದಿಂದ ಮೂರು ಚಿತ್ರಗಳು

ಇದನ್ನೂ ಓದಿ
Image
Prashanth Neel: ಕಿಚ್ಚ ಸುದೀಪ್​, ‘ವಿಕ್ರಾಂತ್ ರೋಣ’ ತಂಡಕ್ಕೆ ವಿಶ್ ಮಾಡಿದ ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್​
Image
Vikrant Rona Twitter Review: ‘ಇದು ಬೆಸ್ಟ್​​ 3ಡಿ ಅನುಭವ’: ವಿಕ್ರಾಂತ್​ ರೋಣ ನೋಡಿ ಮೆಚ್ಚಿದ ಫ್ಯಾನ್ಸ್​
Image
Vikrant Rona: ತ್ರಿನೇತ್ರ ಚಿತ್ರಮಂದಿರದಲ್ಲಿ 3ಡಿ ಸಮಸ್ಯೆ; ‘ವಿಕ್ರಾಂತ್​ ರೋಣ’ ನೋಡಲು ಬಂದ ಫ್ಯಾನ್ಸ್​ ಆಕ್ರೋಶ
Image
Priya Sudeep: ಅಭಿಮಾನಿಗಳ ಜತೆ ಕುಳಿತು ‘ವಿಕ್ರಾಂತ್​ ರೋಣ’ ಫಸ್ಟ್​ ಶೋ ನೋಡಿದ ಸುದೀಪ್​ ಪತ್ನಿ ಪ್ರಿಯಾ

ಸ್ಯಾಂಡಲ್​ವುಡ್​ನಿಂದ ಮೂರು ಸಿನಿಮಾಗಳು ಸೈಮಾಗೆ ನಾಮ ನಿರ್ದೇಶನಗೊಂಡಿವೆ. ತರುಣ್ ಸುಧೀರ್ ನಿರ್ದೇಶನದ ‘ರಾಬರ್ಟ್​’ ಸಿನಿಮಾ 10 ವಿಭಾಗದಲ್ಲಿ ನಾಮಿನೇಟ್ ಆಗಿದೆ. ರಾಜ್​ ಬಿ. ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೂ ಮನ್ನಣೆ ಸಿಕ್ಕಿದೆ. 2021ರಲ್ಲಿ ತೆರೆಗೆ ಬಂದ ಈ ಚಿತ್ರ 8 ವಿಭಾಗದಲ್ಲಿ ನಾಮನಿರ್ದೇಶನಗೊಂಡಿರುವುದು ವಿಶೇಷ. ಸಂತೋಷ್ ಆನಂದ್​ರಾಮ್ ನಿರ್ದೇಶನದ, ಪುನೀತ್ ರಾಜ್​ಕುಮಾರ್ ಅಭಿನಯದ ‘ಯುವರತ್ನ’ ಚಿತ್ರ ಏಳು ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡಿದೆ. ಇದು ಪುನೀತ್​ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ.

ತೆಲುಗಿನಲ್ಲಿ ಪುಷ್ಪ ಚಿತ್ರದ ಮೇಲುಗೈ

‘ಪುಷ್ಪ’ ಚಿತ್ರ 2021ರ ಅಂತ್ಯಕ್ಕೆ ತೆರೆಗೆ ಬಂತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತು. ಈ ಚಿತ್ರ 12 ಕ್ಯಾಟಗರಿಯಲ್ಲಿ ನಾಮಿನೇಟ್ ಆಗಿದೆ. ಬಾಲಯ್ಯ ಅವರ ‘ಅಖಂಡ’ ಸಿನಿಮಾಗೂ ಮನ್ನಣೆ ಸಿಕ್ಕಿದ್ದು, 10 ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ. ಕೃತಿ ಶೆಟ್ಟಿ ನಟನೆಯ ‘ಉಪ್ಪೇನ’ ಚಿತ್ರ 8 ವಿಭಾಗದಲ್ಲಿ ಆಯ್ಕೆ ಆಗಿದೆ.

ಉಳಿದಂತೆ ತಮಿಳಿನಲ್ಲಿ ‘ಕರ್ಣನ್​’, ‘ಡಾನ್​’, ‘ಡಾಕ್ಟರ್’, ‘ಮಾಸ್ಟರ್’ ಚಿತ್ರಗಳು ವಿವಿಧ ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡಿದೆ. ಮಲಯಾಳಂನಲ್ಲಿ ‘ಮಿನ್ನಲ್​ ಮುರಳಿ’, ‘ಕುರುಪ್’, ‘ಮಲಿಕ್’, ‘ಜೋಜಿ’ ಚಿತ್ರಗಳು ನಾಮ ನಿರ್ದೇಶನಗೊಂಡಿವೆ.

ವೋಟಿಂಗ್ ಹೇಗೆ?

ಸೈಮಾ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡ ಚಿತ್ರಗಳಿಗೆ ನೀವು ವೋಟ್ ಮಾಡಬಹುದು. ಸೈಮಾ ವೆಬ್​ಸೈಟ್​ಗೆ ತೆರಳಿ ವೋಟ್ ಮಾಡಬೇಕು ಅಥವಾ ಸೈಮಾ ಫೇಸ್​ಬುಕ್ ಪೇಜ್ ಮೂಲಕವೂ ವೋಟ್ ಮಾಡಬಹುದಾಗಿದೆ.

Published On - 2:48 pm, Wed, 17 August 22

ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್