AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೊಲೀಸರು ನಮ್ಮ ಧ್ವನಿ ಹಕ್ಕುತ್ತಿದ್ದಾರೆ’; ಬೆಂಗಾಲ್ ಫೈಲ್ಸ್​ಗೆ ಅಡ್ಡಿ ಮಾಡಿದ್ದಕ್ಕೆ ವಿವೇಕ್ ಅಗ್ನಿಹೋತ್ರಿ ಬೇಸರ

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಬೆಂಗಾಲ್ ಫೈಲ್ಸ್’ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಭಾರಿ ಗದ್ದಲ ಮತ್ತು ಪೊಲೀಸ್ ಹಸ್ತಕ್ಷೇಪ ಉಂಟಾಯಿತು. ಟ್ರೈಲರ್ ಬಿಡುಗಡೆ ವಿಳಂಬವಾಗಿದ್ದು, ಪೊಲೀಸರು ಕಾರ್ಯಕ್ರಮವನ್ನು ನಿಲ್ಲಿಸಿದರು. ಅಗ್ನಿಹೋತ್ರಿ ಅವರು ಪೊಲೀಸರ ಮೇಲೆ ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಆರೋಪ ಹೊರಿಸಿದ್ದಾರೆ. ಸೆಪ್ಟೆಂಬರ್ 5 ರಂದು ಚಿತ್ರ ಬಿಡುಗಡೆಯಾಗಲಿದೆ.

‘ಪೊಲೀಸರು ನಮ್ಮ ಧ್ವನಿ ಹಕ್ಕುತ್ತಿದ್ದಾರೆ’; ಬೆಂಗಾಲ್ ಫೈಲ್ಸ್​ಗೆ ಅಡ್ಡಿ ಮಾಡಿದ್ದಕ್ಕೆ ವಿವೇಕ್ ಅಗ್ನಿಹೋತ್ರಿ ಬೇಸರ
ವಿವೇಕ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Aug 18, 2025 | 10:56 AM

Share

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಬೆಂಗಾಲ್ ಫೈಲ್ಸ್’ ಚಿತ್ರ (The Bengal Files Movie ) ಘೋಷಣೆಯಾದಾಗಿನಿಂದಲೂ ವಿವಾದದಲ್ಲಿದೆ. ಆಗಸ್ಟ್ 16 ರಂದು ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಭಾರಿ ಗದ್ದಲ ನಡೆಯಿತು. ಈ ಮೊದಲು, ಟ್ರೇಲರ್ ಮಧ್ಯಾಹ್ನ 12 ಗಂಟೆಗೆ ಬಿಡುಗಡೆಯಾಗಬೇಕಿತ್ತು, ಆದರೆ ನಂತರ ಅದು ವಿಳಂಬವಾಯಿತು. ಸುಮಾರು ಒಂದು ಗಂಟೆ ಕಾಯ್ದ ನಂತರ, ಕಾರ್ಯಕ್ರಮ ಪ್ರಾರಂಭವಾಯಿತು. ಆ ಸಮಯದಲ್ಲಿ, ಪೊಲೀಸರು ಅಲ್ಲಿಗೆ ಬಂದು ಕಾರ್ಯಕ್ರಮವನ್ನು ನಿಲ್ಲಿಸಲು ಆದೇಶಿಸಿದರು. ಈ ಇಡೀ ಘಟನೆಯ ಬಗ್ಗೆ ವಿವೇಕ್ ಅಗ್ನಿಹೋತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ನಮ್ಮ ಧ್ವನಿಯನ್ನು ಹತ್ತಿಕ್ಕುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

‘ನಾನು ನಿಮಗೆ ಒಂದು ಬಹಳ ಮುಖ್ಯವಾದ ಮಾಹಿತಿಯನ್ನು ತಿಳಿಸಲು ಬಯಸುತ್ತೇನೆ. ಆ ಜನರು ಇಲ್ಲಿಗೆ ಬಂದು ಇಲ್ಲಿನ ಎಲ್ಲಾ ವಯರ್​ಗಳನ್ನು ಕತ್ತರಿಸಿ ಹಾಕಿದ್ದಾರೆಂದು ನನಗೆ ಈಗಷ್ಟೇ ತಿಳಿದುಬಂದಿದೆ. ನೀವು ಈ ರೀತಿಯ ಘಟನೆಯನ್ನು ಮೊದಲು ನೋಡಿದ್ದೀರಾ? ಯಾರೋ ಖಾಸಗಿ ಹೋಟೆಲ್‌ಗೆ ಬಂದು ಅದರ ವಯರ್​ ಕತ್ತರಿಸುತ್ತಾರೆ. ಇದು ಯಾರ ಆದೇಶದ ಮೇರೆಗೆ ನಡೆಯುತ್ತಿದೆ ಎಂದು ನನಗೆ ತಿಳಿದಿಲ್ಲ. ಇದು ಏಕೆ ನಡೆಯುತ್ತಿದೆ ಎಂದು ನನಗೂ ತಿಳಿದಿಲ್ಲ’ ಎಂದಿದ್ದಾರೆ ಅವರು.

‘ದಿ ಬೆಂಗಾಲ್ ಫೈಲ್ಸ್’ ಒಂದು ಸಿನಿಮಾ. ಇದನ್ನು ನೋಡಿದ ನಂತರ ಪ್ರತಿಯೊಬ್ಬ ಬೆಂಗಾಳಿಯೂ ಭಾರತದ ಸತ್ಯದ ಬಗ್ಗೆ ಹೆಮ್ಮೆಯಿಂದ ತಿಳಿದುಕೊಳ್ಳುತ್ತಾರೆ. ಜನರು ಈ ಸತ್ಯವನ್ನು ತಿಳಿದುಕೊಳ್ಳಬಾರದು ಎಂದು ಭಾವಿಸುವ ಜನರು ಯಾರು’ ಎಂದು ಅಗ್ನಿಹೋತ್ರಿ ಕೇಳಿದರು.

ಇದನ್ನೂ ಓದಿ
Image
ಬಿಗ್ ಬಾಸ್​ಗೆ ಎಂಟ್ರಿ ಕೊಡಲಿದೆ ಸೆನ್ಸೇಷನ್ ಸೃಷ್ಟಿಸಿದ ಜೋಡಿ
Image
ಬಜೆಟ್​ಗಿಂತ 21 ಪಟ್ಟು ಹೆಚ್ಚು ಕಲೆಕ್ಷನ್ ಮಾಡಿದ ‘ಸು ಫ್ರಮ್ ಸೋ’
Image
ಮಿಶ್ರ ಪ್ರತಿಕ್ರಿಯೆ ನಡುವೆಯೂ ದಾಖಲೆಯ ಕಲೆಕ್ಷನ್ ಮಾಡಿದ ಕೂಲಿ, ವಾರ್ 2
Image
ಬಸ್ ಓಡಿಸಿದ ಬಾಲಯ್ಯ; ಮುಖದಲ್ಲಿರೋ ಭಯ ನೋಡಿದ್ರೆ ಯಾರೂ ಕೂರೋ ಧೈರ್ಯ ಮಾಡಲ್ಲ

‘ನಮ್ಮ ಹಿಂದೆ ಯಾರಿದ್ದಾರೆ ಎಂಬುದಕ್ಕೆ ಎಲ್ಲರಿಗೂ ಉತ್ತರ ತಿಳಿದಿದೆ. ನಮ್ಮ ವಿರುದ್ಧ ಅನೇಕ ಎಫ್‌ಐಆರ್‌ಗಳು ದಾಖಲಾಗಿವೆ. ಇದಕ್ಕೆ ತಡೆ ನೀಡುವಂತೆ ನಾವು ಪ್ರತಿದಿನ ವಕೀಲರೊಂದಿಗೆ ಹೋರಾಡುತ್ತಿದ್ದೇವೆ. ನಾವು ಇಲ್ಲಿಗೆ ಬಂದಾಗ, ಟ್ರೇಲರ್ ಬಿಡುಗಡೆಯನ್ನು ನಿಷೇಧಿಸಲಾಗುತ್ತಿದೆ ಎಂದು ನಮಗೆ ತಿಳಿಯಿತು. ಇದು ಖಾಸಗಿ ಹೋಟೆಲ್, ನಾವು ಹಿಂದೆಂದೂ ಇಂತಹ ಘಟನೆಯನ್ನು ನೋಡಿರಲಿಲ್ಲ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಹೊಸ ಸಿನಿಮಾದ ಟೈಟಲ್ ಬದಲಿಸಿದ ವಿವೇಕ್ ಅಗ್ನಿಹೋತ್ರಿ; ‘ದೆಹಲಿ ಫೈಲ್ಸ್’ ಈಗ ‘ಬೆಂಗಾಲ್ ಫೈಲ್ಸ್​’

‘ದಿ ಬೆಂಗಾಲ್ ಫೈಲ್ಸ್’ ಚಿತ್ರವನ್ನು ವಿವೇಕ್ ಅಗ್ನಿಹೋತ್ರಿ ಬರೆದು ನಿರ್ದೇಶಿಸಿದ್ದಾರೆ. ಅಭಿಷೇಕ್ ಅಗರ್ವಾಲ್ ಮತ್ತು ಪಲ್ಲವಿ ಜೋಶಿ ಇದನ್ನು ನಿರ್ಮಿಸುತ್ತಿದ್ದಾರೆ. ಇದರಲ್ಲಿ ಮಿಥುನ್ ಚಕ್ರವರ್ತಿ, ಅನುಪಮ್ ಖೇರ್, ದರ್ಶನ್ ಕುಮಾರ್ ಮತ್ತು ಪಲ್ಲವಿ ಜೋಶಿ ನಟಿಸಿದ್ದಾರೆ. ಈ ಚಿತ್ರ ಸೆಪ್ಟೆಂಬರ್ 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದಕ್ಕೂ ಮೊದಲು, ವಿವೇಕ್ ಅಗ್ನಿಹೋತ್ರಿ ಅವರ ‘ದಿ ಕಾಶ್ಮೀರ್ ಫೈಲ್ಸ್’ ಮತ್ತು ‘ದಿ ತಾಷ್ಕೆಂಟ್ ಫೈಲ್ಸ್’ ಚಿತ್ರಗಳು ಪ್ರೇಕ್ಷಕರಿಗೆ ಬಿಡುಗಡೆಯಾಗಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ