Bomman and Bellie: ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಂಡ ಮಾವುತರಿಗೆ ತಮಿಳುನಾಡು ಸಿಎಂ ಬಂಪರ್​ ಕೊಡುಗೆ

|

Updated on: Mar 16, 2023 | 1:33 PM

The Elephant Whisperers: ಬೊಮ್ಮನ್​ ಮತ್ತು ಬೆಳ್ಳಿ ದಂಪತಿಯನ್ನು ಸಿಎಂ ಎಂ.ಕೆ. ಸ್ಟಾಲಿನ್​ ಸನ್ಮಾನಿಸಿರುವುದಕ್ಕೆ ಕಾರ್ತಿಕಿ​ ಗೋನ್ಸಾಲ್ವಿಸ್​​ ಸಂತಸ ವ್ಯಕ್ತಪಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Bomman and Bellie: ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಂಡ ಮಾವುತರಿಗೆ ತಮಿಳುನಾಡು ಸಿಎಂ ಬಂಪರ್​ ಕೊಡುಗೆ
ಎಂ.ಕೆ. ಸ್ಟಾಲಿನ್, ಬೊಮ್ಮನ್, ಬೆಳ್ಳಿ
Follow us on

ಈ ಬಾರಿಯ ಆಸ್ಕರ್ ಅವಾರ್ಡ್ಸ್​ನಲ್ಲಿ ಭಾರತದ ಸಿನಿಮಾಗಳು ಮೋಡಿ ಮಾಡಿವೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಮತ್ತು ‘ದಿ ಎಲಿಫೆಂಟ್​ ವಿಸ್ಪರರ್ಸ್​’ (The Elephant Whisperers) ಸಾಕ್ಷ್ಯಚಿತ್ರಕ್ಕೆ ಆಸ್ಕರ್​ ಪ್ರಶಸ್ತಿ ಸಿಕ್ಕಿದೆ. ಆನೆ ಮತ್ತು ಮಾವುತರ ನಡುವಿನ ಭಾವನಾತ್ಮಕ ಸಂಬಂಧದ ಕುರಿತು ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರ ಮೂಡಿಬಂದಿದೆ. ನೆಟ್​ಫ್ಲಿಕ್ಸ್​ನಲ್ಲಿ ವೀಕ್ಷಣೆಗೆ ಲಭ್ಯವಾಗಿರುವ ಈ ಡಾಕ್ಯುಮೆಂಟರಿಯಲ್ಲಿ ಬೊಮ್ಮನ್​ ಮತ್ತು ಬೆಳ್ಳಿ (Bomman and Bellie) ಎಂಬ ದಂಪತಿ ಕಾಣಿಸಿಕೊಂಡಿದ್ದಾರೆ. ಅವರಿಬ್ಬರ ರಿಯಲ್​ ಲೈಫ್​ ಘಟನೆಗಳನ್ನು ಈ ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ. ಈಗ ಈ ಮಾವುತರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin)​ ಸನ್ಮಾನಿಸಿದ್ದಾರೆ. ಅಲ್ಲದೇ ಮಾವುತರಿಗೆ ಆರ್ಥಿಕ ಸಹಾಯ ಮಾಡಿದ್ದಾರೆ.

ಬೊಮ್ಮನ್​ ಮತ್ತು ಬೆಳ್ಳಿ ದಂಪತಿಗೆ ತಲಾ ಒಂದು ಲಕ್ಷ ರೂಪಾಯಿ ನೀಡಲಾಗಿದೆ. ಅಲ್ಲದೇ 2 ಆನೆ ಶಿಬಿರದಲ್ಲಿ ಇರುವ 91 ಮಾವುತರಿಗೂ ಕೂಡ ತಲಾ ಒಂದು ಲಕ್ಷ ರೂಪಾಯಿ ಹಣ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಈ ಧನ ಸಹಾಯ ಮಾಡಲಾಗುತ್ತಿದೆ. ಅಲ್ಲದೇ, ಮಾವುತರಿಗೆ ಮನೆ ಕಟ್ಟಿಕೊಡಲು 9.1 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ ಎಂದು ವರದಿ ಆಗಿದೆ.

ಇದನ್ನೂ ಓದಿ
Oscar 2023 Winners List: ಈ ವರ್ಷ ಆಸ್ಕರ್ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ
Oscar 2023: ಆಸ್ಕರ್ ಗೆದ್ದು ಬೀಗಿದ ‘ನಾಟು ನಾಟು..’ ಹಾಡು; ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ
The Elephant Whisperers: ಭಾರತಕ್ಕೆ ಆಸ್ಕರ್​: ‘ದಿ ಎಲಿಫೆಂಟ್​ ವಿಸ್ಪರರ್ಸ್​’ಗೆ ಅಕಾಡೆಮಿ ಪ್ರಶಸ್ತಿ 
Ram Charan: ‘ಭಾರತೀಯರಿಗೆ ಆಸ್ಕರ್​ ಪ್ರಶಸ್ತಿ ಅಂದ್ರೆ ಒಲಂಪಿಕ್ಸ್​ ಗೋಲ್ಡ್​ ಮೆಡಲ್​ ಇದ್ದಂಗೆ’: ರಾಮ್​ ಚರಣ್​

The Elephant Whisperers: ಭಾರತಕ್ಕೆ ಆಸ್ಕರ್​: ‘ದಿ ಎಲಿಫೆಂಟ್​ ವಿಸ್ಪರರ್ಸ್​’ಗೆ ಅಕಾಡೆಮಿ ಪ್ರಶಸ್ತಿ 

ಕಾರ್ತಿಕಿ​ ಗೋನ್ಸಾಲ್ವಿಸ್​​ ಅವರು ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಅವರಿಗೆ ಆಸ್ಕರ್​ ಪ್ರಶಸ್ತಿ ಸಿಕ್ಕಿರುವುದು ವಿಶೇಷ. ಬೊಮ್ಮನ್​ ಮತ್ತು ಬೆಳ್ಳಿ ದಂಪತಿಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರು ಸನ್ಮಾನಿಸಿರುವುದಕ್ಕೆ ಕಾರ್ತಿಕಿ​ ಗೋನ್ಸಾಲ್ವಿಸ್​ ಸಂತಸ ವ್ಯಕ್ತಪಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆಸ್ಕರ್ ಮುಡಿಗೇರಿಸಿಕೊಂಡ ರಘುವನ್ನು ನೋಡಲು ತೆಪ್ಪಕಾಡು ಆನೆ ಶಿಬಿರದಲ್ಲಿ ಜನಸಾಗರ

ಅನಾಥ ಆನೆ ಮರಿಗಳನ್ನು ಬೊಮ್ಮನ್​ ಮತ್ತು ಬೆಳ್ಳಿ ಸಾಕುತ್ತಾರೆ. ಆದರೆ ಆನೆಗಳು ದೊಡ್ಡದಾದ ಬಳಿಕ ಅವುಗಳನ್ನು ಬೇರೆ ಶಿಬಿರಕ್ಕೆ ಸ್ಥಳಾಂತರ ಮಾಡಲಾಗುತ್ತದೆ. ಸ್ವಂತ ಮಕ್ಕಳಂತೆ ಸಾಕಿದ ಆನೆಗಳನ್ನು ದೂರ ಮಾಡುವ ಸಂದರ್ಭ ಬೊಮ್ಮನ್​ ಮತ್ತು ಬೆಳ್ಳಿಗೆ ತುಂಬ ಭಾವುಕವಾಗಿರುತ್ತದೆ. ಈ ಎಲ್ಲ ಅಂಶಗಳನ್ನು ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರದಲ್ಲಿ ಕಟ್ಟಿಕೊಡಲಾಗಿದೆ.

ಆಸ್ಕರ್​ ಪ್ರಶಸ್ತಿ ಪಡೆದ ಭಾರತದ ಮೊದಲ ಸಾಕ್ಷ್ಯಚಿತ್ರ ಎಂಬ ಖ್ಯಾತಿಗೆ ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಪಾತ್ರವಾಗಿದೆ. ಈ ಸಾಧನೆ ಮಾಡಿದ್ದಕ್ಕಾಗಿ ಅನೇಕರು ಈ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ಟ್ವಿಟರ್​ ಮೂಲಕ ಅಭಿನಂದಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.