AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮಂಥ ಹೆಂಡತಿ ಯಾರಿಗೂ ಸಿಗಬಾರದು’; ಪ್ರಿಯಾಮಣಿಗೆ ನೇರವಾಗಿ ಶಾಪ ಹಾಕಿದ ಜನರು

‘ಸ್ನೇಹಿತನಿಗಾಗಿ ನೀವು ಶ್ರೀಕಾಂತ್​ಗೆ ಯಾಕೆ ಮೋಸ ಮಾಡಿದ್ರಿ? ಮಾಡಿದ ತಪ್ಪಿಗಾಗಿ ನೀವು ಜೀವನದಲ್ಲಿ ಖುಷಿಯಾಗಿ ಇರಲು ಸಾಧ್ಯವೇ ಇಲ್ಲ’ ಎಂದು ಜನರು ‘ದಿ ಫ್ಯಾಮಿಲಿ ಮ್ಯಾನ್​ 2’ ನಟಿ ಪ್ರಿಯಾಮಣಿಗೆ ಶಾಪ ಹಾಕುತ್ತಿದ್ದಾರೆ.

‘ನಿಮ್ಮಂಥ ಹೆಂಡತಿ ಯಾರಿಗೂ ಸಿಗಬಾರದು’; ಪ್ರಿಯಾಮಣಿಗೆ ನೇರವಾಗಿ ಶಾಪ ಹಾಕಿದ ಜನರು
ಪ್ರಿಯಾಮಣಿ
TV9 Web
| Updated By: ಮದನ್​ ಕುಮಾರ್​|

Updated on: Jul 17, 2021 | 2:24 PM

Share

ಸಿನಿಮಾ ಕಲಾವಿದರಿಗೆ ಪ್ರೇಕ್ಷಕರಿಂದ ಹಲವು ಬಗೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ಕೆಲವೊಮ್ಮೆ ಅದು ಸ್ವಲ್ಪ ವಿಚಿತ್ರವಾಗಿಯೂ ಇರುತ್ತದೆ. ಅದೇ ರೀತಿ ನಟಿ ಪ್ರಿಯಾಮಣಿ ಅವರಿಗೆ ಇತ್ತೀಚೆಗೆ ಅಭಿಮಾನಿಗಳಿಂದ ಬಗೆಬಗೆಯ ಕಮೆಂಟ್​​ಗಳು ಬರುತ್ತಿವೆ. ಜೂನ್​ ತಿಂಗಳ ಆರಂಭದಲ್ಲಿ ಬಿಡುಗಡೆಯಾದ ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಪ್ರಿಯಾಮಣಿಗೆ ಹೆಚ್ಚು ಖ್ಯಾತಿ ತಂದು ಕೊಟ್ಟಿದೆ. ಇದರಲ್ಲಿ ಅವರು ನಿಭಾಯಿಸಿದ ಸುಚಿ ಅಥವಾ ಸುಚಿತ್ರಾ ಐಯ್ಯರ್​​ ಎಂಬ ಪಾತ್ರ ಕೂಡ ಭಾರಿ ಚರ್ಚೆಗೆ ಒಳಗಾಗಿದೆ. ಈಗ ಪ್ರಿಯಾಮಣಿ ಏನೇ ಪೋಸ್ಟ್ ಮಾಡಿದರೂ ಅದಕ್ಕೆ ಕಮೆಂಟ್​ ಮಾಡುವ ಪ್ರೇಕ್ಷಕರು ‘ದಿ ಫ್ಯಾಮಿಲಿ ಮ್ಯಾನ್ 2’ ಪಾತ್ರವನ್ನು ಎಳೆದು ತರುತ್ತಿದ್ದಾರೆ.

ಈ ವೆಬ್​ ಸರಣಿಯಲ್ಲಿ ಮನೋಜ್​ ಭಾಜಪೇಯ್​ ಮತ್ತು ಪ್ರಿಯಾಮಣಿ ಅವರು ಶ್ರೀಕಾಂತ್​ ತಿವಾರಿ-ಸುಚಿತ್ರಾ ಐಯ್ಯರ್​​ ಎಂಬ ಗಂಡ-ಹೆಂಡತಿಯ ಪಾತ್ರವನ್ನು ಮಾಡಿದ್ದಾರೆ. ಸುಚಿ ತನ್ನ ಸ್ನೇಹಿತನ ಜೊತೆಗೆ ಹೊಂದಿರುವ ಆಪ್ತತೆಯ ಕಾರಣದಿಂದ ಶ್ರೀಕಾಂತ್​ ತಿವಾರಿಯ ಸಂಸಾರದಲ್ಲಿ ಬಿರುಕು ಉಂಟಾಗುತ್ತದೆ. ಅದು ಪ್ರೇಕ್ಷಕರಿಗೆ ಇಷ್ಟ ಆಗಿಲ್ಲ. ಈ ವಿಚಾರವನ್ನು ತುಂಬ ಗಂಭೀರವಾಗಿ ಪರಿಗಣಿಸಿರುವ ಒಂದು ವರ್ಗದ ನೆಟ್ಟಿಗರು ಪ್ರಿಯಾಮಣಿಗೆ ಕಟುವಾಗಿ ಕಮೆಂಟ್​ ಮಾಡುತ್ತಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಿಯಾಮಣಿ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ‘ದೇವರು ಬೇಕಾದರೆ ಸ್ವಲ್ಪ ಬಡತನ ಕೊಡಲಿ, ಆದರೆ ನಿಮ್ಮಂಥ ಹೆಂಡತಿಯನ್ನು ಕೊಡುವುದು ಬೇಡ’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಅಷ್ಟೇ ಅಲ್ಲ, ಇನ್ನೂ ಹಲವಾರು ಪ್ರಶ್ನೆಗಳನ್ನು ಪ್ರಿಯಾಮಣಿಗೆ ಜನರು ಕೇಳುತ್ತಿದ್ದಾರೆ. ‘ನೀವು ಶ್ರೀಕಾಂತ್​ಗೆ ಈ ರೀತಿ ಮಾಡಬಾರದಾಗಿತ್ತು. ಸ್ನೇಹಿತನಿಗಾಗಿ ನೀವು ಶ್ರೀಕಾಂತ್​ಗೆ ಯಾಕೆ ಮೋಸ ಮಾಡಿದ್ರಿ? ಮಾಡಿದ ತಪ್ಪಿಗಾಗಿ ನೀವು ಜೀವನದಲ್ಲಿ ಖುಷಿಯಾಗಿ ಇರಲು ಸಾಧ್ಯವೇ ಇಲ್ಲ’ ಎಂದೆಲ್ಲ ಜನರು ಕಟುವಾಗಿ ಕಮೆಂಟ್​ ಮಾಡಿದ್ದಾರೆ.

ಇದು ಪ್ರಿಯಾಮಣಿಗೆ ಸ್ವಲ್ಪ ಬೇಸರ ತರಿಸಿದೆ ಕೂಡ. ‘ಇದು ರೀಲ್​ ಅಷ್ಟೇ. ರಿಯಲ್​ ಅಲ್ಲ. ನಾನು ನಟಿ ಮಾತ್ರ. ನಿಜಜೀವನದಲ್ಲಿ ನಾನು ಆ ರೀತಿ ಮಹಿಳೆ ಅಲ್ಲ ಎಂದು ಎಲ್ಲರಿಗೂ ನಾನು ವಿವರಣೆ ನೀಡುತ್ತ ಕುಳಿತುಕೊಳ್ಳಲು ಸಾಧ್ಯವಿಲ್ಲ. ನಿಮಗೆ ಆ ಪಾತ್ರ ಇಷ್ಟ ಆಗಿಲ್ಲ ಎಂದರೆ ಓಕೆ. ಅದು ನಿಮ್ಮ ಅಭಿಪ್ರಾಯ. ಆದರೆ ಅದನ್ನು ಕಲಾವಿದರ ಪರ್ಸನಲ್ ಜೀವನಕ್ಕೆ ಯಾಕೆ ಕನೆಕ್ಟ್​ ಮಾಡುತ್ತೀರಿ?’ ಎಂದು ಪ್ರಿಯಾಮಣಿ ಮರುಪ್ರಶ್ನೆ ಹಾಕಿದ್ದಾರೆ.

ಇದನ್ನೂ ಓದಿ:

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ನ ಮುಖ್ಯವಾದ ಸೀಕ್ರೆಟ್​ ಬಗ್ಗೆ ಮನೋಜ್​ ಬಾಜಪೇಯ್​ ಹೇಳಿದ್ದೇನು?

‘ದಿ ಫ್ಯಾಮಿಲಿ ಮ್ಯಾನ್​ 3’ ಕಥೆ ಬಹಿರಂಗ; ನಿರ್ದೇಶಕರು ಬಾಯ್ಬಿಟ್ಟ ಸೀಕ್ರೆಟ್​ ಇಲ್ಲಿದೆ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ