AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಹೆಸರು ಬದಲಾಯಿಸಿಕೊಂಡ ನಟಿ ಸಮಂತಾ ಅಕ್ಕಿನೇನಿ; ಹೊಸ ಹೆಸರು ಏನು?

ಅಕ್ಕಿನೇನಿ ನಾಗ ಚೈತನ್ಯ ಜೊತೆ ಮದುವೆಯಾದ ಬಳಿಕ ಸಮಂತಾ ರುತ್​ ಪ್ರಭು ತಮ್ಮ ಹೆಸರನ್ನು ಸಮಂತಾ ಅಕ್ಕಿನೇನಿ ಎಂದು ಬದಲಾಯಿಸಿಕೊಂಡಿದ್ದರು. ಆದರೆ ಈಗ ಅದರ ಬದಲಿಗೆ ಕೇವಲ ‘ಎಸ್​’ ಅಕ್ಷರವನ್ನು ಇಟ್ಟುಕೊಂಡಿರುವುದು ನಿಜಕ್ಕೂ ಕೌತುಕ ಮೂಡಿಸಿದೆ.

ರಾತ್ರೋರಾತ್ರಿ ಹೆಸರು ಬದಲಾಯಿಸಿಕೊಂಡ ನಟಿ ಸಮಂತಾ ಅಕ್ಕಿನೇನಿ; ಹೊಸ ಹೆಸರು ಏನು?
ಸಮಂತಾ ಅಕ್ಕಿನೇನಿ
TV9 Web
| Edited By: |

Updated on: Jul 31, 2021 | 8:22 AM

Share

ಖ್ಯಾತ ನಟಿ ಸಮಂತಾ ಅಕ್ಕಿನೇನಿ (Samantha Akkineni) ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಮದುವೆ ಬಳಿಕವೂ ಅವರ ಬೇಡಿಕೆ ಕಿಂಚಿತ್ತೂ ತಗ್ಗಿಲ್ಲ. ಬಹುಭಾಷಾ ಕಲಾವಿದೆಯಾಗಿ ಅವರು ಧೂಳೆಬ್ಬಿಸುತ್ತಿದ್ದಾರೆ. ಈ ವರ್ಷ ಬಿಡುಗಡೆಯಾದ ‘ದಿ ಫ್ಯಾಮಿಲಿ ಮ್ಯಾನ್​ 2’ (The Family Man 2) ಯಶಸ್ಸಿನಿಂದಾಗಿ ಸಮಂತಾ ಖ್ಯಾತಿ ದುಪ್ಪಟ್ಟಾಗಿದೆ. ಈ ನಡುವೆ ಅವರ ಹೆಸರು ಬದಲಾವಣೆಯ ಕಾರಣಕ್ಕಾಗಿ ಸುದ್ದಿ ಆಗುತ್ತಿದ್ದಾರೆ. ಹೌದು, ರಾತ್ರೋರಾತ್ರಿ ಸಮಂತಾ ಹೆಸರು ಬದಲಾಯಿಸಿಕೊಂಡಿದ್ದಾರೆ. ಇದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಸ್ವತಃ ಸಮಂತಾ ಕಡೆಯಿಂದಲೇ ಇದಕ್ಕೆ ಸ್ಪಷ್ಟನೆ ಸಿಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಅಂದಹಾಗೆ, ಸಮಂತಾ ಹೆಸರು ಬದಲಾಯಿಸಿಕೊಂಡಿರುವುದು ಸೋಶಿಯಲ್​ ಮೀಡಿಯಾದಲ್ಲಿ. ಟ್ವಿಟರ್​ ಮತ್ತು ಇನ್​ಸ್ಟಾಗ್ರಾಮ್​ನಲ್ಲಿ ಸಮಂತಾ ಅಕ್ಕಿನೇನಿ ಎಂದಿದ್ದ ತಮ್ಮ Display Name ಅನ್ನು ಕೇವಲ S ಎಂದು ಬದಲಾಯಿಸಿಕೊಂಡಿದ್ದಾರೆ. ಯಾವುದೇ ಸೂಚನೆ ನೀಡದೇ ಅವರು ಹೀಗೆ ಏಕಾಏಕಿ ಹೆಸರು ಬದಲಾಯಿಸಿಕೊಂಡಿದ್ದು ಯಾಕೆ ಎಂಬ ಪ್ರಶ್ನೆ ಈಗ ಎಲ್ಲರ ಮನದಲ್ಲೂ ಮೂಡಿದೆ.

2017ಕ್ಕಿಂತ ಮೊದಲು ಸಮಂತಾ ರುತ್​ ಪ್ರಭು ಎಂದು ಅವರನ್ನು ಕರೆಯಲಾಗುತ್ತಿತ್ತು. ನಟ ಅಕ್ಕಿನೇನಿ ನಾಗ ಚೈತನ್ಯ ಜೊತೆ ಮದುವೆಯಾದ ಬಳಿಕ ಸಮಂತಾ ತಮ್ಮ ಹೆಸರನ್ನು ಸಮಂತಾ ಅಕ್ಕಿನೇನಿ ಎಂದು ಬದಲಾಯಿಸಿಕೊಂಡರು. ಸೋಶಿಯಲ್​ ಮೀಡಿಯಾ ಖಾತೆಗಳಲ್ಲೂ ಸಮಂತಾ ಅಕ್ಕಿನೇನಿ ಎಂದೇ ಗುರುತಿಸಿಕೊಳ್ಳಲು ಆರಂಭಿಸಿದ್ದರು. ಆದರೆ ಈಗ ಅದರ ಬದಲಿಗೆ ಕೇವಲ ‘ಎಸ್​’ ಅಕ್ಷರವನ್ನು ಇಟ್ಟುಕೊಂಡಿರುವುದು ನಿಜಕ್ಕೂ ಕೌತುಕ ಮೂಡಿಸಿದೆ.

ಕೆಲವೊಮ್ಮೆ ಸೆಲೆಬ್ರಿಟಿಗಳು ಯಾವುದಾದರೂ ಬ್ರ್ಯಾಂಡ್​ ಅಥವಾ ಸಿನಿಮಾದ ಪ್ರಚಾರಕ್ಕಾಗಿ ಸೋಶಿಯಲ್​ ಮೀಡಿಯಾದಲ್ಲಿ ಈ ರೀತಿ ಹೆಸರು ಬದಲಾಯಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಈ ಹಿಂದೆ ಅನೇಕ ನಟ-ನಟಿಯರು ಇಂಥ ಪ್ರಯೋಗ ಮಾಡಿದ್ದರು. ಸಮಂತಾ ಕೂಡ ಅಂಥದ್ದೇ ಕಾರಣಕ್ಕಾಗಿ Display Name ಬದಲಾಯಿಸಿಕೊಂಡಿರಬಹುದೇ ಎಂಬ ಅನುಮಾನ ಮೂಡುತ್ತಿದೆ. ಆದರೆ ಇದೆಲ್ಲದಕ್ಕೂ ಸ್ವತಃ ಸಮಂತಾ ಕಡೆಯಿಂದಲೇ ಸೂಕ್ತ ಉತ್ತರ ಸಿಗಬೇಕಿದೆ. ಫೇಸ್​ಬುಕ್​ನಲ್ಲಿ ಅವರು ಇನ್ನೂ ಈ ಬದಲಾವಣೆ ಮಾಡಿಕೊಂಡಿಲ್ಲ.

ಸದ್ಯ ಸಮಂತಾ ಕೈಯಲ್ಲಿ ಹಲವು ಆಫರ್​ಗಳಿವೆ. ವಿಜಯ್​ ಸೇತುಪತಿ, ನಯನತಾರ ಜೊತೆಗಿನ ಹೊಸ ತಮಿಳು ಸಿನಿಮಾದಲ್ಲಿ ಸಮಂತಾ ನಟಿಸುತ್ತಿದ್ದಾರೆ. ಆ ಚಿತ್ರಕ್ಕೆ ನಯನತಾರ ಬಾಯ್​ಫ್ರೆಂಡ್​ ವಿಘ್ನೇಶ್​ ಶಿವನ್​ ನಿರ್ದೇಶನ ಮಾಡುತ್ತಿದ್ದಾರೆ. ಬಹುನಿರೀಕ್ಷಿತ ‘ಶಾಕುಂತಲಂ’ ಸಿನಿಮಾದಲ್ಲಿ ಅವರು ಶಕುಂತಲೆಯ ಪಾತ್ರ ಮಾಡುತ್ತಿದ್ದಾರೆ.

ಇದನ್ನೂ ಓದಿ:

‘ದಿ ಫ್ಯಾಮಿಲಿ ಮ್ಯಾನ್ 2’ ವಿವಾದದ ಬೆನ್ನಲ್ಲೇ ನಟಿ ಸಮಂತಾ ಅಕ್ಕಿನೇನಿಗೆ ಬಂತು ಎಚ್ಚರಿಕೆಯ ಸಂದೇಶ

ಚಿತ್ರರಂಗಕ್ಕೆ ಕಾಲಿಡುತ್ತಿದ್ದಾಳೆ ಅಲ್ಲು ಅರ್ಜುನ್​ ಮಗಳು; ಸಮಂತಾ ಜೊತೆ ಅಲ್ಲು ಅರ್ಹಾ ನಟನೆ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್