AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖತ್​ ಬೇಡಿಕೆ ಇದ್ದರೂ ಸಮಂತಾ ಯಾಕಿನ್ನೂ ಬಾಲಿವುಡ್​ಗೆ ಕಾಲಿಟ್ಟಿಲ್ಲ? ನಾಗಾರ್ಜುನ ಸೊಸೆಗೆ ಕಾಡುತ್ತಿದೆ ಭಯ

Samantha Akkineni: ಹಿಂದಿ ಸಿನಿಮಾಗಳಲ್ಲಿ ನಟಿಸಬೇಕು ಎಂಬ ಆಸೆ ಸಮಂತಾಗೆ ಖಂಡಿತವಾಗಿ ಇದೆ. ಯಾರ ಜೊತೆ ನಟಿಸಲು ಬಯಸುತ್ತೀರಿ ಎಂದು ಕೇಳಿದ್ದಕ್ಕೆ ರಣಬೀರ್​ ಕಪೂರ್ ಹೆಸರನ್ನು ಹೇಳಿದ್ದಾರೆ ಸಮಂತಾ.

ಸಖತ್​ ಬೇಡಿಕೆ ಇದ್ದರೂ ಸಮಂತಾ ಯಾಕಿನ್ನೂ ಬಾಲಿವುಡ್​ಗೆ ಕಾಲಿಟ್ಟಿಲ್ಲ? ನಾಗಾರ್ಜುನ ಸೊಸೆಗೆ ಕಾಡುತ್ತಿದೆ ಭಯ
ಸಮಂತಾ ಅಕ್ಕಿನೇನಿ
ಮದನ್​ ಕುಮಾರ್​
|

Updated on: May 25, 2021 | 11:29 AM

Share

ನಟಿ ಸಮಂತಾ ಅಕ್ಕಿನೇನಿ ಅವರು ದಕ್ಷಿಣ ಭಾರತದಲ್ಲಿ ಸ್ಟಾರ್​ ಕಲಾವಿದೆಯಾಗಿ ಮೆರೆಯುತ್ತಿದ್ದಾರೆ. ತಮಿಳು ಮತ್ತು ತೆಲುಗಿನಲ್ಲಿ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ನಟ ನಾಗಚೈತನ್ಯ ಜೊತೆ ಮದುವೆ ಆದ ಬಳಿಕವೂ ಅವರು ಸಿನಿಮಾದಲ್ಲಿ ಸಕ್ರಿಯರಾಗಿದ್ದಾರೆ. ಮೊದಲಿಗಿಂತಲೂ ಒಳ್ಳೊಳ್ಳೆಯ ಪಾತ್ರಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರು ವೆಬ್​ ಸಿರೀಸ್​ ಲೋಕಕ್ಕೂ ಕಾಲಿಟ್ಟಿದ್ದಾರೆ. ಸಮಂತಾ ನಟನೆಯ ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಜೂ.4ರಂದು ಅಮೇಜಾನ್​ ಪ್ರೈಮ್​ನಲ್ಲಿ ಪ್ರಸಾರ ಆಗಲಿದೆ. ಇಷ್ಟೆಲ್ಲ ಚಾರ್ಮ್​ ಇರುವ ಸಮಂತಾ ಇನ್ನೂ ಯಾಕೆ ಬಾಲಿವುಡ್​ ಕದ ತಟ್ಟಿಲ್ಲ? ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

ಮನೋಜ್ ಬಾಜಪೇಯ್​ ಜೊತೆ ನಟಿಸಿರುವ ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಪ್ರಚಾರದ ಸಲುವಾಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹಲವು ವಿಚಾರಗಳ ಬಗ್ಗೆ ಸಮಂತಾ ಮಾತನಾಡಿದ್ದಾರೆ. ತಾವು ಈವರೆಗೂ ಬಾಲಿವುಡ್​ಗೆ ಕಾಲಿಡದೇ ಇರಲು ಒಂದು ಭಯವೇ ಕಾರಣ ಎಂದು ಅವರು ಹೇಳಿದ್ದಾರೆ. ‘ಬಾಲಿವುಡ್​ನಲ್ಲಿ ತುಂಬ ಪ್ರತಿಭಾವಂತ ಕಲಾವಿದರಿದ್ದಾರೆ. ಹಾಗಾಗಿ ನನಗೆ ಹೆದರಿಕೆ ಆಗುತ್ತದೆ’ ಎಂದು ಅವರು ಹೇಳಿರುವುದು ಅಚ್ಚರಿ ಮೂಡಿಸಿದೆ.

ಹಿಂದಿ ಸಿನಿಮಾಗಳಲ್ಲಿ ನಟಿಸಬೇಕು ಎಂಬ ಆಸೆ ಸಮಂತಾಗೆ ಖಂಡಿತವಾಗಿ ಇದೆ. ಯಾರ ಜೊತೆ ನಟಿಸಲು ಬಯಸುತ್ತೀರಿ ಎಂದು ಕೇಳಿದ್ದಕ್ಕೆ ರಣಬೀರ್​ ಕಪೂರ್ ಹೆಸರನ್ನು ಹೇಳಿದ್ದಾರೆ ಸಮಂತಾ. ಆದಷ್ಟು ಬೇಗ ಅವರು ಹಿಂದಿ ಸಿನಿಮಾದಲ್ಲಿ ನಟಿಸುವಂತಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಈಗ ‘ದಿ ಫ್ಯಾಮಿಲಿ ಮ್ಯಾನ್​ 2’ ಮೂಲಕ ಹಿಂದಿ ಪ್ರೇಕ್ಷಕರಿಗೆ ಸಮಂತಾ ಹತ್ತಿರ ಆಗುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ ಕಂಡು ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿದೆ. ರಾಜ್​ ಮತ್ತು ಡಿಕೆ ಈ ವೆಬ್​ ಸಿರೀಸ್​ಗೆ ನಿರ್ದೇಶನ ಮಾಡಿದ್ದಾರೆ. ಉಗ್ರಗಾಮಿ ಪಾತ್ರದಲ್ಲಿ ಸಮಂತಾ ಕಾಣಿಸಿಕೊಂಡಿರುವುದು ವಿಶೇಷ. ಇದರಲ್ಲಿ ತಮಿಳರನ್ನು ಉಗ್ರಗಾಮಿಗಳ ರೀತಿಯಲ್ಲಿ ತೋರಿಸಲಾಗಿದೆ ಎಂಬ ಕಾರಣಕ್ಕೆ ತಮಿಳುನಾಡಿನಾದ್ಯಂತ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಬ್ಯಾನ್​ ಮಾಡಬೇಕು ಎಂಬ ಒತ್ತಾಯ ಕೂಡ ಕೇಳಿಬರುತ್ತಿದೆ.

ಇದನ್ನೂ ಓದಿ:

ತೆರೆಮೇಲೆ ಒಂದಾಗುತ್ತಿದ್ದಾರೆ ಗಂಡ-ಹೆಂಡತಿ; ಶೀಘ್ರವೇ ಸೆಟ್ಟೇರಲಿದೆ ನಾಗಚೈತನ್ಯ-ಸಮಂತಾ ಸಿನಿಮಾ?

ತಮಿಳರ ಕೋಪಕ್ಕೆ ಕಾರಣವಾದ ಸಮಂತಾ; ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​​ನಲ್ಲಿ ಅವರು ಮಾಡಿದ ತಪ್ಪೇನು?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್