AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖತ್​ ಬೇಡಿಕೆ ಇದ್ದರೂ ಸಮಂತಾ ಯಾಕಿನ್ನೂ ಬಾಲಿವುಡ್​ಗೆ ಕಾಲಿಟ್ಟಿಲ್ಲ? ನಾಗಾರ್ಜುನ ಸೊಸೆಗೆ ಕಾಡುತ್ತಿದೆ ಭಯ

Samantha Akkineni: ಹಿಂದಿ ಸಿನಿಮಾಗಳಲ್ಲಿ ನಟಿಸಬೇಕು ಎಂಬ ಆಸೆ ಸಮಂತಾಗೆ ಖಂಡಿತವಾಗಿ ಇದೆ. ಯಾರ ಜೊತೆ ನಟಿಸಲು ಬಯಸುತ್ತೀರಿ ಎಂದು ಕೇಳಿದ್ದಕ್ಕೆ ರಣಬೀರ್​ ಕಪೂರ್ ಹೆಸರನ್ನು ಹೇಳಿದ್ದಾರೆ ಸಮಂತಾ.

ಸಖತ್​ ಬೇಡಿಕೆ ಇದ್ದರೂ ಸಮಂತಾ ಯಾಕಿನ್ನೂ ಬಾಲಿವುಡ್​ಗೆ ಕಾಲಿಟ್ಟಿಲ್ಲ? ನಾಗಾರ್ಜುನ ಸೊಸೆಗೆ ಕಾಡುತ್ತಿದೆ ಭಯ
ಸಮಂತಾ ಅಕ್ಕಿನೇನಿ
ಮದನ್​ ಕುಮಾರ್​
|

Updated on: May 25, 2021 | 11:29 AM

Share

ನಟಿ ಸಮಂತಾ ಅಕ್ಕಿನೇನಿ ಅವರು ದಕ್ಷಿಣ ಭಾರತದಲ್ಲಿ ಸ್ಟಾರ್​ ಕಲಾವಿದೆಯಾಗಿ ಮೆರೆಯುತ್ತಿದ್ದಾರೆ. ತಮಿಳು ಮತ್ತು ತೆಲುಗಿನಲ್ಲಿ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ನಟ ನಾಗಚೈತನ್ಯ ಜೊತೆ ಮದುವೆ ಆದ ಬಳಿಕವೂ ಅವರು ಸಿನಿಮಾದಲ್ಲಿ ಸಕ್ರಿಯರಾಗಿದ್ದಾರೆ. ಮೊದಲಿಗಿಂತಲೂ ಒಳ್ಳೊಳ್ಳೆಯ ಪಾತ್ರಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರು ವೆಬ್​ ಸಿರೀಸ್​ ಲೋಕಕ್ಕೂ ಕಾಲಿಟ್ಟಿದ್ದಾರೆ. ಸಮಂತಾ ನಟನೆಯ ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಜೂ.4ರಂದು ಅಮೇಜಾನ್​ ಪ್ರೈಮ್​ನಲ್ಲಿ ಪ್ರಸಾರ ಆಗಲಿದೆ. ಇಷ್ಟೆಲ್ಲ ಚಾರ್ಮ್​ ಇರುವ ಸಮಂತಾ ಇನ್ನೂ ಯಾಕೆ ಬಾಲಿವುಡ್​ ಕದ ತಟ್ಟಿಲ್ಲ? ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

ಮನೋಜ್ ಬಾಜಪೇಯ್​ ಜೊತೆ ನಟಿಸಿರುವ ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಪ್ರಚಾರದ ಸಲುವಾಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹಲವು ವಿಚಾರಗಳ ಬಗ್ಗೆ ಸಮಂತಾ ಮಾತನಾಡಿದ್ದಾರೆ. ತಾವು ಈವರೆಗೂ ಬಾಲಿವುಡ್​ಗೆ ಕಾಲಿಡದೇ ಇರಲು ಒಂದು ಭಯವೇ ಕಾರಣ ಎಂದು ಅವರು ಹೇಳಿದ್ದಾರೆ. ‘ಬಾಲಿವುಡ್​ನಲ್ಲಿ ತುಂಬ ಪ್ರತಿಭಾವಂತ ಕಲಾವಿದರಿದ್ದಾರೆ. ಹಾಗಾಗಿ ನನಗೆ ಹೆದರಿಕೆ ಆಗುತ್ತದೆ’ ಎಂದು ಅವರು ಹೇಳಿರುವುದು ಅಚ್ಚರಿ ಮೂಡಿಸಿದೆ.

ಹಿಂದಿ ಸಿನಿಮಾಗಳಲ್ಲಿ ನಟಿಸಬೇಕು ಎಂಬ ಆಸೆ ಸಮಂತಾಗೆ ಖಂಡಿತವಾಗಿ ಇದೆ. ಯಾರ ಜೊತೆ ನಟಿಸಲು ಬಯಸುತ್ತೀರಿ ಎಂದು ಕೇಳಿದ್ದಕ್ಕೆ ರಣಬೀರ್​ ಕಪೂರ್ ಹೆಸರನ್ನು ಹೇಳಿದ್ದಾರೆ ಸಮಂತಾ. ಆದಷ್ಟು ಬೇಗ ಅವರು ಹಿಂದಿ ಸಿನಿಮಾದಲ್ಲಿ ನಟಿಸುವಂತಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಈಗ ‘ದಿ ಫ್ಯಾಮಿಲಿ ಮ್ಯಾನ್​ 2’ ಮೂಲಕ ಹಿಂದಿ ಪ್ರೇಕ್ಷಕರಿಗೆ ಸಮಂತಾ ಹತ್ತಿರ ಆಗುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ ಕಂಡು ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿದೆ. ರಾಜ್​ ಮತ್ತು ಡಿಕೆ ಈ ವೆಬ್​ ಸಿರೀಸ್​ಗೆ ನಿರ್ದೇಶನ ಮಾಡಿದ್ದಾರೆ. ಉಗ್ರಗಾಮಿ ಪಾತ್ರದಲ್ಲಿ ಸಮಂತಾ ಕಾಣಿಸಿಕೊಂಡಿರುವುದು ವಿಶೇಷ. ಇದರಲ್ಲಿ ತಮಿಳರನ್ನು ಉಗ್ರಗಾಮಿಗಳ ರೀತಿಯಲ್ಲಿ ತೋರಿಸಲಾಗಿದೆ ಎಂಬ ಕಾರಣಕ್ಕೆ ತಮಿಳುನಾಡಿನಾದ್ಯಂತ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಬ್ಯಾನ್​ ಮಾಡಬೇಕು ಎಂಬ ಒತ್ತಾಯ ಕೂಡ ಕೇಳಿಬರುತ್ತಿದೆ.

ಇದನ್ನೂ ಓದಿ:

ತೆರೆಮೇಲೆ ಒಂದಾಗುತ್ತಿದ್ದಾರೆ ಗಂಡ-ಹೆಂಡತಿ; ಶೀಘ್ರವೇ ಸೆಟ್ಟೇರಲಿದೆ ನಾಗಚೈತನ್ಯ-ಸಮಂತಾ ಸಿನಿಮಾ?

ತಮಿಳರ ಕೋಪಕ್ಕೆ ಕಾರಣವಾದ ಸಮಂತಾ; ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​​ನಲ್ಲಿ ಅವರು ಮಾಡಿದ ತಪ್ಪೇನು?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ