AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಚಿತ್ರಕ್ಕೂ ಹಣ ಹಾಕಿ’; ಫ್ಯಾಮಿಲಿ ಮ್ಯಾನ್​ ಹಿಟ್​ ಆದರೂ ಈ ನಟನಿಗೆ ಸಿಗುತ್ತಿಲ್ಲ ಆಫರ್​

‘ದಿ ಫ್ಯಾಮಿಲಿ ಮ್ಯಾನ್’​ ಹಾಗೂ ‘ದಿ ಫ್ಯಾಮಿಲಿ ಮ್ಯಾನ್​ 2’ ಎರಡರಲ್ಲೂ ಶರದ್ ನಟಿಸಿದ್ದಾರೆ. ಕೆಲವೇ ಹೊತ್ತು ಇವರು ಸ್ಕ್ರೀನ್​ ಮೇಲೆ ಕಾಣಿಸಿಕೊಂಡರೂ, ಇವರು ಮಾಡಿರುವ ಅರವಿಂದ್ ಪಾತ್ರಕ್ಕೆ ಸಾಕಷ್ಟು ಪ್ರಾಮುಖ್ಯತೆ ಇದೆ.

‘ನನ್ನ ಚಿತ್ರಕ್ಕೂ ಹಣ ಹಾಕಿ’; ಫ್ಯಾಮಿಲಿ ಮ್ಯಾನ್​ ಹಿಟ್​ ಆದರೂ ಈ ನಟನಿಗೆ ಸಿಗುತ್ತಿಲ್ಲ ಆಫರ್​
ದಿ ಫ್ಯಾಮಿಲಿ ಮ್ಯಾನ್​ 2 ದೃಶ್ಯ
ರಾಜೇಶ್ ದುಗ್ಗುಮನೆ
|

Updated on: Jun 18, 2021 | 8:15 PM

Share

‘ದಿ ಫ್ಯಾಮಿಲಿ ಮ್ಯಾನ್​ 2’ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಈ ವೆಬ್​ ಸೀರಿಸ್​ನಲ್ಲಿ ನಟಿಸಿದ ಶರದ್​ ಕೇಲ್ಕರ್​ (ಪಾತ್ರದ ಹೆಸರು ಅರವಿಂದ್​) ಪ್ರಿಯಾಮಣಿ (ಸುಚಿತ್ರಾ) ಸಹೋದ್ಯೋಗಿ ಆಗಿ ಕಾಣಿಸಿಕೊಂಡಿದ್ದರು. ಅಲ್ಲದೆ, ಇಡೀ ವೆಬ್​ ಸೀರಿಸ್​ಗೆ ಇವರಿಬ್ಬರ ಗೆಳೆತನ ಸಾಕಷ್ಟು ಮಹತ್ವ ಪಡೆದುಕೊಳ್ಳುತ್ತದೆ. ಈ ವೆಬ್​ ಸೀರಿಸ್​ ಹಿಟ್​ ಆದರೂ ಶರದ್​ಗೆ ಅವಕಾಶಗಳು ಸಿಗುತ್ತಿಲ್ಲ ಎನ್ನುವ ಬೇಸರ ಇದೆಯಂತೆ.  

‘ನಾನು ಯಾವುದೇ ವೆಬ್​ ಸೀರಿಸ್​ಗೆ ಸಹಿ ಹಾಕಿಲ್ಲ. ನಿರ್ಮಾಪಕರು ಸಿನಿಮಾ ಮಾಡುತ್ತಾರೆ ಎಂದರೆ ಸಾಕಷ್ಟು ಬಾರಿ ಯೋಚಿಸುತ್ತಾರೆ. ನನ್ನ ಇಟ್ಟುಕೊಂಡು ಸಿನಿಮಾ ಮಾಡೋಕೆ ಯಾರೂ ಮುಂದೆ ಬರುತ್ತಿಲ್ಲ. ಇದು ನಿಜಕ್ಕೂ ಬೇಸರದ ಸಂಗತಿ. ನಿರ್ಮಾಪಕರು ನನ್ನ ಸಿನಿಮಾಗೂ ಹಣ ಹಾಕಲಿ ಎಂದು ನಾನು ಕೋರಿಕೊಳ್ಳುತ್ತೇನೆ’ ಎಂದಿದ್ದಾರೆ ಅವರು.

‘ನನ್ನ ವಯಸ್ಸು 44. ನನ್ನ ಕೆರಿಯರ್​ನಲ್ಲಿ ನಾನು ಪೋಷಕ ಪಾತ್ರಗಳನ್ನು ಮಾತ್ರ ಮಾಡಿದ್ದೇನೆ. ನನಗೆ ನಟನಾಗಿ ಕಾಣಿಸಿಕೊಳ್ಳಬೇಕು ಎನ್ನುವ ಆಸೆ ಇದೆ. ಆದರೆ, ಈವರೆಗೆ ಅದು ಸಾಧ್ಯವಾಗಿಲ್ಲ. ದಯವಿಟ್ಟು ನನಗೂ ಒಂದು ಅವಕಾಶ ಕೊಡಿ’ ಎಂದು ಶರದ್​ ಮನವಿ ಮಾಡಿಕೊಂಡಿದ್ದಾರೆ.

ರಾಷ್ಟ್ರ ಪ್ರಶಸ್ತಿ ವಿಜೇತ ಅಭಿಜೀತ್​ ವಾರಾಂಗ್​ ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾ ‘ದೇಜಾ ವು’ದಲ್ಲಿ ಶರದ್​ ನಟಿಸುತ್ತಿದ್ದಾರೆ. ಸೈಕಲಾಜಿಕಲ್​ ಥ್ರಿಲ್ಲರ್​ ಶೈಲಿಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ಇದರ ಜತೆಗೆ ‘ಬುಜ್​: ದಿ ಪ್ರೈಡ್​ ಆಫ್​ ಇಂಡಿಯಾ’ದಲ್ಲಿಯೂ ಶರದ್​ ಕಾಣಿಸಿಕೊಂಡಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್’​ ಹಾಗೂ ‘ದಿ ಫ್ಯಾಮಿಲಿ ಮ್ಯಾನ್​ 2’ ಎರಡರಲ್ಲೂ ಶರದ್ ನಟಿಸಿದ್ದಾರೆ. ಕೆಲವೇ ಹೊತ್ತು ಇವರು ಸ್ಕ್ರೀನ್​ ಮೇಲೆ ಕಾಣಿಸಿಕೊಂಡರೂ, ಇವರು ಮಾಡಿರುವ ಅರವಿಂದ್ ಪಾತ್ರಕ್ಕೆ ಸಾಕಷ್ಟು ಪ್ರಾಮುಖ್ಯತೆ ಇದೆ. ಆದಾಗ್ಯೂ, ಶರದ್​​ಗೆ ಆಫರ್​ಗಳ ಕೊರತೆ ಇದೆ.

ಇದನ್ನೂ ಓದಿ: ‘ಶ್ರೀಕಾಂತ್​ ತಿವಾರಿಯಂತೆ ದೈಹಿಕ ಅಂತರ ಕಾಯ್ದುಕೊಳ್ಳಿ’- ಕೊವಿಡ್​ ನಿಯಂತ್ರಣಕ್ಕೆ ದಿ ಫ್ಯಾಮಿಲಿ ಮ್ಯಾನ್​  ಪೋಸ್ಟ್​ ಹಂಚಿಕೊಂಡ ಕೇಂದ್ರ ಸರ್ಕಾರ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ