AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಚಿತ್ರಕ್ಕೂ ಹಣ ಹಾಕಿ’; ಫ್ಯಾಮಿಲಿ ಮ್ಯಾನ್​ ಹಿಟ್​ ಆದರೂ ಈ ನಟನಿಗೆ ಸಿಗುತ್ತಿಲ್ಲ ಆಫರ್​

‘ದಿ ಫ್ಯಾಮಿಲಿ ಮ್ಯಾನ್’​ ಹಾಗೂ ‘ದಿ ಫ್ಯಾಮಿಲಿ ಮ್ಯಾನ್​ 2’ ಎರಡರಲ್ಲೂ ಶರದ್ ನಟಿಸಿದ್ದಾರೆ. ಕೆಲವೇ ಹೊತ್ತು ಇವರು ಸ್ಕ್ರೀನ್​ ಮೇಲೆ ಕಾಣಿಸಿಕೊಂಡರೂ, ಇವರು ಮಾಡಿರುವ ಅರವಿಂದ್ ಪಾತ್ರಕ್ಕೆ ಸಾಕಷ್ಟು ಪ್ರಾಮುಖ್ಯತೆ ಇದೆ.

‘ನನ್ನ ಚಿತ್ರಕ್ಕೂ ಹಣ ಹಾಕಿ’; ಫ್ಯಾಮಿಲಿ ಮ್ಯಾನ್​ ಹಿಟ್​ ಆದರೂ ಈ ನಟನಿಗೆ ಸಿಗುತ್ತಿಲ್ಲ ಆಫರ್​
ದಿ ಫ್ಯಾಮಿಲಿ ಮ್ಯಾನ್​ 2 ದೃಶ್ಯ
ರಾಜೇಶ್ ದುಗ್ಗುಮನೆ
|

Updated on: Jun 18, 2021 | 8:15 PM

Share

‘ದಿ ಫ್ಯಾಮಿಲಿ ಮ್ಯಾನ್​ 2’ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಈ ವೆಬ್​ ಸೀರಿಸ್​ನಲ್ಲಿ ನಟಿಸಿದ ಶರದ್​ ಕೇಲ್ಕರ್​ (ಪಾತ್ರದ ಹೆಸರು ಅರವಿಂದ್​) ಪ್ರಿಯಾಮಣಿ (ಸುಚಿತ್ರಾ) ಸಹೋದ್ಯೋಗಿ ಆಗಿ ಕಾಣಿಸಿಕೊಂಡಿದ್ದರು. ಅಲ್ಲದೆ, ಇಡೀ ವೆಬ್​ ಸೀರಿಸ್​ಗೆ ಇವರಿಬ್ಬರ ಗೆಳೆತನ ಸಾಕಷ್ಟು ಮಹತ್ವ ಪಡೆದುಕೊಳ್ಳುತ್ತದೆ. ಈ ವೆಬ್​ ಸೀರಿಸ್​ ಹಿಟ್​ ಆದರೂ ಶರದ್​ಗೆ ಅವಕಾಶಗಳು ಸಿಗುತ್ತಿಲ್ಲ ಎನ್ನುವ ಬೇಸರ ಇದೆಯಂತೆ.  

‘ನಾನು ಯಾವುದೇ ವೆಬ್​ ಸೀರಿಸ್​ಗೆ ಸಹಿ ಹಾಕಿಲ್ಲ. ನಿರ್ಮಾಪಕರು ಸಿನಿಮಾ ಮಾಡುತ್ತಾರೆ ಎಂದರೆ ಸಾಕಷ್ಟು ಬಾರಿ ಯೋಚಿಸುತ್ತಾರೆ. ನನ್ನ ಇಟ್ಟುಕೊಂಡು ಸಿನಿಮಾ ಮಾಡೋಕೆ ಯಾರೂ ಮುಂದೆ ಬರುತ್ತಿಲ್ಲ. ಇದು ನಿಜಕ್ಕೂ ಬೇಸರದ ಸಂಗತಿ. ನಿರ್ಮಾಪಕರು ನನ್ನ ಸಿನಿಮಾಗೂ ಹಣ ಹಾಕಲಿ ಎಂದು ನಾನು ಕೋರಿಕೊಳ್ಳುತ್ತೇನೆ’ ಎಂದಿದ್ದಾರೆ ಅವರು.

‘ನನ್ನ ವಯಸ್ಸು 44. ನನ್ನ ಕೆರಿಯರ್​ನಲ್ಲಿ ನಾನು ಪೋಷಕ ಪಾತ್ರಗಳನ್ನು ಮಾತ್ರ ಮಾಡಿದ್ದೇನೆ. ನನಗೆ ನಟನಾಗಿ ಕಾಣಿಸಿಕೊಳ್ಳಬೇಕು ಎನ್ನುವ ಆಸೆ ಇದೆ. ಆದರೆ, ಈವರೆಗೆ ಅದು ಸಾಧ್ಯವಾಗಿಲ್ಲ. ದಯವಿಟ್ಟು ನನಗೂ ಒಂದು ಅವಕಾಶ ಕೊಡಿ’ ಎಂದು ಶರದ್​ ಮನವಿ ಮಾಡಿಕೊಂಡಿದ್ದಾರೆ.

ರಾಷ್ಟ್ರ ಪ್ರಶಸ್ತಿ ವಿಜೇತ ಅಭಿಜೀತ್​ ವಾರಾಂಗ್​ ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾ ‘ದೇಜಾ ವು’ದಲ್ಲಿ ಶರದ್​ ನಟಿಸುತ್ತಿದ್ದಾರೆ. ಸೈಕಲಾಜಿಕಲ್​ ಥ್ರಿಲ್ಲರ್​ ಶೈಲಿಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ಇದರ ಜತೆಗೆ ‘ಬುಜ್​: ದಿ ಪ್ರೈಡ್​ ಆಫ್​ ಇಂಡಿಯಾ’ದಲ್ಲಿಯೂ ಶರದ್​ ಕಾಣಿಸಿಕೊಂಡಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್’​ ಹಾಗೂ ‘ದಿ ಫ್ಯಾಮಿಲಿ ಮ್ಯಾನ್​ 2’ ಎರಡರಲ್ಲೂ ಶರದ್ ನಟಿಸಿದ್ದಾರೆ. ಕೆಲವೇ ಹೊತ್ತು ಇವರು ಸ್ಕ್ರೀನ್​ ಮೇಲೆ ಕಾಣಿಸಿಕೊಂಡರೂ, ಇವರು ಮಾಡಿರುವ ಅರವಿಂದ್ ಪಾತ್ರಕ್ಕೆ ಸಾಕಷ್ಟು ಪ್ರಾಮುಖ್ಯತೆ ಇದೆ. ಆದಾಗ್ಯೂ, ಶರದ್​​ಗೆ ಆಫರ್​ಗಳ ಕೊರತೆ ಇದೆ.

ಇದನ್ನೂ ಓದಿ: ‘ಶ್ರೀಕಾಂತ್​ ತಿವಾರಿಯಂತೆ ದೈಹಿಕ ಅಂತರ ಕಾಯ್ದುಕೊಳ್ಳಿ’- ಕೊವಿಡ್​ ನಿಯಂತ್ರಣಕ್ಕೆ ದಿ ಫ್ಯಾಮಿಲಿ ಮ್ಯಾನ್​  ಪೋಸ್ಟ್​ ಹಂಚಿಕೊಂಡ ಕೇಂದ್ರ ಸರ್ಕಾರ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್