ವೀಕ್ಷಕರು ಕಣ್ತುಂಬಿಕೊಳ್ಳುವ ಮೊದಲೇ ಬ್ಯಾನ್​ ಆಗಲಿದೆ ‘ದಿ ಫ್ಯಾಮಿಲಿ ಮ್ಯಾನ್​-2’?

The Family Man Season 2: 2019ರಲ್ಲಿ ಬಿಡುಗಡೆ ಆಗಿದ್ದ ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸಿರೀಸ್​ ಸಿಕ್ಕಾಪಟ್ಟೆ ಹಿಟ್​ ಆಗಿತ್ತು. ಮನೋಜ್​ ಬಾಜಪೇಯ್​, ಪ್ರಿಯಾಮಣಿ ಮುಂತಾದವರು ಮುಖ್ಯಭೂಮಿಕೆ ನಿಭಾಯಿಸಿದ್ದರು.

ವೀಕ್ಷಕರು ಕಣ್ತುಂಬಿಕೊಳ್ಳುವ ಮೊದಲೇ ಬ್ಯಾನ್​ ಆಗಲಿದೆ ‘ದಿ ಫ್ಯಾಮಿಲಿ ಮ್ಯಾನ್​-2’?
ದಿ ಫ್ಯಾಮಿಲಿ ಮ್ಯಾನ್ 2 - ಸಮಂತಾ ಅಕ್ಕಿನೇನಿ
Follow us
|

Updated on:May 24, 2021 | 10:14 PM

‘ದಿ ಫ್ಯಾಮಿಲಿ ಮ್ಯಾನ್​-2’ ವೆಬ್​ ಸೀರಿಸ್​ ಟ್ರೇಲರ್​ ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ವಿವಾದ ಹೊತ್ತಿಸಿತ್ತು. ಈ ವೆಬ್​ ಸೀರಿಸ್​ನಲ್ಲಿ ತಮಿಳರನ್ನು ಉಗ್ರಗಾಮಿಗಳಂತೆ ತೋರಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ಕೂಡ ನಡೆದಿದ್ದವು. ಈಗ ಈ ವೆಬ್​ ಸೀರಿಸ್​ಗೆ ಬ್ಯಾನ್​ ಆಗುವ ಭಯ ಕಾಡಿದೆ.

2019ರಲ್ಲಿ ಬಿಡುಗಡೆ ಆಗಿದ್ದ ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸಿರೀಸ್​ ಸಿಕ್ಕಾಪಟ್ಟೆ ಹಿಟ್​ ಆಗಿತ್ತು. ಮನೋಜ್​ ಬಾಜಪೇಯ್​, ಪ್ರಿಯಾಮಣಿ ಮುಂತಾದವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ‘ದಿ ಫ್ಯಾಮಿಲಿ ಮ್ಯಾನ್​ 2’ಗಾಗಿ ಎಲ್ಲರೂ ಕಾದಿದ್ದರು. ಆದರೆ, ಸಿನಿಮಾ ಟ್ರೇಲರ್​ ತಮಿಳಿಯನ್ನರ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳು ಜನರನ್ನು ಉಗ್ರಗಾಮಿಗಳ ರೀತಿಯಲ್ಲಿ ತೋರಿಸಲಾಗಿದೆ ಎನ್ನುವ ಆರೋಪ ಮಾಡಲಾಗಿದೆ. ಹೀಗಾಗಿ, ಅಮೇಜಾನ್​ ಪ್ರೈಮ್​ ಟ್ರೇಲರ್ ಎಡಿಟ್​ ಮಾಡುವ ಕೆಲಸವನ್ನು ಕೂಡ ಮಾಡಿದೆ.

ಈಗ ರಾಜ್ಯಸಭಾ ಸದಸ್ಯ ವೈಕೊ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಕಾಶ್​ ಜಾವ್ಡೇಕರ್​ಗೆ ಪತ್ರ ಬರೆದಿದ್ದು, ಈ ವೆಬ್​ ಸೀರಿಸ್​ ಮೇಲೆ ನಿಷೇಧ ಹೇರುವಂತೆ ಒತ್ತಾಯಿಸಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್​-2 ಟ್ರೇಲರ್​ ತಮಿಳಿಯನ್ನರನ್ನು ಉಗ್ರರು ಹಾಗೂ ಪಾಕಿಸ್ತಾನದ ಐಎಸ್​ಐ​ ಏಜೆಂಟ್​ಗಳು ಎಂದು ಬಿಂಬಿಸಿದೆ. ತಮಿಳು ಈಲಂ ಯೋಧರು ಮಾಡಿದ ತ್ಯಾಗಗಳನ್ನು ಸಹ ಭಯೋತ್ಪಾದಕ ಕೃತ್ಯವೆಂದು ತಪ್ಪಾಗಿ ತೋರಿಸಲಾಗಿದೆ. ಈ ಎಲ್ಲಾ ಚಿತ್ರಣಗಳು ತಮಿಳು ಜನರ ಭಾವನೆ ಮತ್ತು ಸಂಸ್ಕೃತಿಯನ್ನು ನೋಯಿಸಿವೆ ಎಂದು’ ಪತ್ರದಲ್ಲಿ ಹೇಳಲಾಗಿದ್ದು, ಈ ವೆಬ್​ ಸೀರಿಸ್​ ಬ್ಯಾನ್​ ಮಾಡುವಂತೆ ಒತ್ತಾಯಿಸಿದ್ದಾರೆ. ಒಂದೊಮ್ಮೆ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಇದನ್ನು ಗಂಭೀರವಾಗಿ ಪರಿಗಣಿಸಿದರೆ ದಿ ಫ್ಯಾಮಿಲಿ ಮ್ಯಾನ್​-2ಗೆ ಸಂಕಷ್ಟ ಗ್ಯಾರಂಟಿ.

‘ದಿ ಫ್ಯಾಮಿಲಿ ಮ್ಯಾನ್​ ಸೀಸನ್​-2’ ಜೂನ್​ 4ರಂದು ಅಮೇಜಾನ್​ ಪ್ರೈಮ್​ನಲ್ಲಿ ಪ್ರೀಮಿಯರ್​ ಆಗುತ್ತಿದೆ. ಈ ವೆಬ್​ ಸೀರಿಸ್​ನ ನಿರ್ದೇಶನ ಜವಾಬ್ದಾರಿಯನ್ನು ರಾಜ್​ ಮತ್ತು​ ಡಿ.ಕೆ. ನಿಭಾಯಿಸಿದ್ದಾರೆ. ಮೊದಲ ಸೀಸನ್​ ದೊಡ್ಡಮಟ್ಟದಲ್ಲಿ ಹಿಟ್ ಆದ್ದರಿಂದ ಎರಡನೇ ಸೀಸನ್​ಮೇಲೆ ಹೆಚ್ಚು ನಿರೀಕ್ಷೆ ಇದೆ.

ಇದನ್ನೂ ಓದಿ: ತಮಿಳರ ಕೋಪಕ್ಕೆ ಕಾರಣವಾದ ಸಮಂತಾ; ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​​ನಲ್ಲಿ ಅವರು ಮಾಡಿದ ತಪ್ಪೇನು?

‘ದಿ ಫ್ಯಾಮಿಲಿ ಮ್ಯಾನ್​’ ನಿರ್ದೇಶಕರ ಜೊತೆ ಮಹೇಶ್​ ಬಾಬು ಅಥವಾ ದೇವರಕೊಂಡ ಸಿನಿಮಾ; ಹೊರಬಿತ್ತು ಹೊಸ ಸುದ್ದಿ 

Published On - 8:28 pm, Mon, 24 May 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ