AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕ್ಷಕರು ಕಣ್ತುಂಬಿಕೊಳ್ಳುವ ಮೊದಲೇ ಬ್ಯಾನ್​ ಆಗಲಿದೆ ‘ದಿ ಫ್ಯಾಮಿಲಿ ಮ್ಯಾನ್​-2’?

The Family Man Season 2: 2019ರಲ್ಲಿ ಬಿಡುಗಡೆ ಆಗಿದ್ದ ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸಿರೀಸ್​ ಸಿಕ್ಕಾಪಟ್ಟೆ ಹಿಟ್​ ಆಗಿತ್ತು. ಮನೋಜ್​ ಬಾಜಪೇಯ್​, ಪ್ರಿಯಾಮಣಿ ಮುಂತಾದವರು ಮುಖ್ಯಭೂಮಿಕೆ ನಿಭಾಯಿಸಿದ್ದರು.

ವೀಕ್ಷಕರು ಕಣ್ತುಂಬಿಕೊಳ್ಳುವ ಮೊದಲೇ ಬ್ಯಾನ್​ ಆಗಲಿದೆ ‘ದಿ ಫ್ಯಾಮಿಲಿ ಮ್ಯಾನ್​-2’?
ದಿ ಫ್ಯಾಮಿಲಿ ಮ್ಯಾನ್ 2 - ಸಮಂತಾ ಅಕ್ಕಿನೇನಿ
ರಾಜೇಶ್ ದುಗ್ಗುಮನೆ
|

Updated on:May 24, 2021 | 10:14 PM

Share

‘ದಿ ಫ್ಯಾಮಿಲಿ ಮ್ಯಾನ್​-2’ ವೆಬ್​ ಸೀರಿಸ್​ ಟ್ರೇಲರ್​ ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ವಿವಾದ ಹೊತ್ತಿಸಿತ್ತು. ಈ ವೆಬ್​ ಸೀರಿಸ್​ನಲ್ಲಿ ತಮಿಳರನ್ನು ಉಗ್ರಗಾಮಿಗಳಂತೆ ತೋರಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ಕೂಡ ನಡೆದಿದ್ದವು. ಈಗ ಈ ವೆಬ್​ ಸೀರಿಸ್​ಗೆ ಬ್ಯಾನ್​ ಆಗುವ ಭಯ ಕಾಡಿದೆ.

2019ರಲ್ಲಿ ಬಿಡುಗಡೆ ಆಗಿದ್ದ ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸಿರೀಸ್​ ಸಿಕ್ಕಾಪಟ್ಟೆ ಹಿಟ್​ ಆಗಿತ್ತು. ಮನೋಜ್​ ಬಾಜಪೇಯ್​, ಪ್ರಿಯಾಮಣಿ ಮುಂತಾದವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ‘ದಿ ಫ್ಯಾಮಿಲಿ ಮ್ಯಾನ್​ 2’ಗಾಗಿ ಎಲ್ಲರೂ ಕಾದಿದ್ದರು. ಆದರೆ, ಸಿನಿಮಾ ಟ್ರೇಲರ್​ ತಮಿಳಿಯನ್ನರ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳು ಜನರನ್ನು ಉಗ್ರಗಾಮಿಗಳ ರೀತಿಯಲ್ಲಿ ತೋರಿಸಲಾಗಿದೆ ಎನ್ನುವ ಆರೋಪ ಮಾಡಲಾಗಿದೆ. ಹೀಗಾಗಿ, ಅಮೇಜಾನ್​ ಪ್ರೈಮ್​ ಟ್ರೇಲರ್ ಎಡಿಟ್​ ಮಾಡುವ ಕೆಲಸವನ್ನು ಕೂಡ ಮಾಡಿದೆ.

ಈಗ ರಾಜ್ಯಸಭಾ ಸದಸ್ಯ ವೈಕೊ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಕಾಶ್​ ಜಾವ್ಡೇಕರ್​ಗೆ ಪತ್ರ ಬರೆದಿದ್ದು, ಈ ವೆಬ್​ ಸೀರಿಸ್​ ಮೇಲೆ ನಿಷೇಧ ಹೇರುವಂತೆ ಒತ್ತಾಯಿಸಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್​-2 ಟ್ರೇಲರ್​ ತಮಿಳಿಯನ್ನರನ್ನು ಉಗ್ರರು ಹಾಗೂ ಪಾಕಿಸ್ತಾನದ ಐಎಸ್​ಐ​ ಏಜೆಂಟ್​ಗಳು ಎಂದು ಬಿಂಬಿಸಿದೆ. ತಮಿಳು ಈಲಂ ಯೋಧರು ಮಾಡಿದ ತ್ಯಾಗಗಳನ್ನು ಸಹ ಭಯೋತ್ಪಾದಕ ಕೃತ್ಯವೆಂದು ತಪ್ಪಾಗಿ ತೋರಿಸಲಾಗಿದೆ. ಈ ಎಲ್ಲಾ ಚಿತ್ರಣಗಳು ತಮಿಳು ಜನರ ಭಾವನೆ ಮತ್ತು ಸಂಸ್ಕೃತಿಯನ್ನು ನೋಯಿಸಿವೆ ಎಂದು’ ಪತ್ರದಲ್ಲಿ ಹೇಳಲಾಗಿದ್ದು, ಈ ವೆಬ್​ ಸೀರಿಸ್​ ಬ್ಯಾನ್​ ಮಾಡುವಂತೆ ಒತ್ತಾಯಿಸಿದ್ದಾರೆ. ಒಂದೊಮ್ಮೆ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಇದನ್ನು ಗಂಭೀರವಾಗಿ ಪರಿಗಣಿಸಿದರೆ ದಿ ಫ್ಯಾಮಿಲಿ ಮ್ಯಾನ್​-2ಗೆ ಸಂಕಷ್ಟ ಗ್ಯಾರಂಟಿ.

‘ದಿ ಫ್ಯಾಮಿಲಿ ಮ್ಯಾನ್​ ಸೀಸನ್​-2’ ಜೂನ್​ 4ರಂದು ಅಮೇಜಾನ್​ ಪ್ರೈಮ್​ನಲ್ಲಿ ಪ್ರೀಮಿಯರ್​ ಆಗುತ್ತಿದೆ. ಈ ವೆಬ್​ ಸೀರಿಸ್​ನ ನಿರ್ದೇಶನ ಜವಾಬ್ದಾರಿಯನ್ನು ರಾಜ್​ ಮತ್ತು​ ಡಿ.ಕೆ. ನಿಭಾಯಿಸಿದ್ದಾರೆ. ಮೊದಲ ಸೀಸನ್​ ದೊಡ್ಡಮಟ್ಟದಲ್ಲಿ ಹಿಟ್ ಆದ್ದರಿಂದ ಎರಡನೇ ಸೀಸನ್​ಮೇಲೆ ಹೆಚ್ಚು ನಿರೀಕ್ಷೆ ಇದೆ.

ಇದನ್ನೂ ಓದಿ: ತಮಿಳರ ಕೋಪಕ್ಕೆ ಕಾರಣವಾದ ಸಮಂತಾ; ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​​ನಲ್ಲಿ ಅವರು ಮಾಡಿದ ತಪ್ಪೇನು?

‘ದಿ ಫ್ಯಾಮಿಲಿ ಮ್ಯಾನ್​’ ನಿರ್ದೇಶಕರ ಜೊತೆ ಮಹೇಶ್​ ಬಾಬು ಅಥವಾ ದೇವರಕೊಂಡ ಸಿನಿಮಾ; ಹೊರಬಿತ್ತು ಹೊಸ ಸುದ್ದಿ 

Published On - 8:28 pm, Mon, 24 May 21

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?