AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ನ ಮುಖ್ಯವಾದ ಸೀಕ್ರೆಟ್​ ಬಗ್ಗೆ ಮನೋಜ್​ ಬಾಜಪೇಯ್​ ಹೇಳಿದ್ದೇನು?

ಅರವಿಂದ್​ ಮತ್ತು ಸುಚಿತ್ರಾ ಪಾತ್ರಗಳ ನಡುವಿನ ಸಂಬಂಧ ಯಾವ ರೀತಿಯದ್ದು ಎಂಬುದನ್ನು ನಿಗೂಢವಾಗಿಯೇ ಇರುವಂತೆ ನೋಡಿಕೊಂಡಿದ್ದಾರೆ ನಿರ್ದೇಶಕರು. ಅವರಿಬ್ಬರ ಮಧ್ಯೆ ಏನು ನಡೆದಿದೆ ಎಂಬ ಪ್ರಶ್ನೆಗೆ ಈ ಸೀಸನ್​ನಲ್ಲೂ ಉತ್ತರ ಸಿಕ್ಕಿಲ್ಲ.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ನ ಮುಖ್ಯವಾದ ಸೀಕ್ರೆಟ್​ ಬಗ್ಗೆ ಮನೋಜ್​ ಬಾಜಪೇಯ್​ ಹೇಳಿದ್ದೇನು?
ಪ್ರಿಯಾಮಣಿ, ಮನೋಜ್​ ಬಾಜಪೇಯಿ
ಮದನ್​ ಕುಮಾರ್​
|

Updated on: Jun 10, 2021 | 11:57 AM

Share

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಮನೋಜ್​ ಬಾಜಪೇಯಿ, ಪ್ರಿಯಾಮಣಿ, ಸಮಂತಾ ಅಕ್ಕಿನೇನಿ ಮುಖ್ಯ ಭೂಮಿಕೆ ನಿಭಾಯಿಸಿರುವ ಈ ವೆಬ್​ ಸಿರೀಸ್​ಗೆ ರಾಜ್​ ಮತ್ತು ಡಿಕೆ ನಿರ್ದೇಶನ ಮಾಡಿದ್ದಾರೆ. ಆ್ಯಕ್ಷನ್​, ಸಸ್ಪೆನ್ಸ್​-ಥ್ರಿಲ್ಲರ್​ ಶೈಲಿಯಲ್ಲಿ ‘ದಿ ಫ್ಯಾಮಿಲಿ ಮ್ಯಾನ್​ 2’ ಮೂಡಿಬಂದಿದ್ದು, ಅಮೇಜಾನ್​ ಪ್ರೈಂ ವಿಡಿಯೋದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಮೊದಲ ಸೀಸನ್​ ನೋಡಿ ಇಷ್ಟಪಟ್ಟಿದ್ದ ಪ್ರೇಕ್ಷಕರು ಎರಡನೇ ಸೀಸನ್​ಗೂ ಫಿದಾ ಆಗಿದ್ದಾರೆ. ಆದರೆ ಈ ಎರಡೂ ಸೀಸನ್​ನಲ್ಲಿ ಒಂದು ಪ್ರಶ್ನೆಗೆ ಮಾತ್ರ ಪ್ರೇಕ್ಷಕರಿಗೆ ಉತ್ತರ ಸಿಕ್ಕಿಲ್ಲ.

ಶ್ರೀಕಾಂತ್​ ತಿವಾರಿ ಎಂಬ ಪಾತ್ರಕ್ಕೆ ಮನೋಜ್​ ಬಾಜಪೇಯಿ ಬಣ್ಣ ಹಚ್ಚಿದ್ದರೆ, ಅವರ ಪತ್ನಿಯಾಗಿ ಸುಚಿತ್ರಾ ಎಂಬ ಪಾತ್ರದಲ್ಲಿ ಪ್ರಿಯಾಮಣಿ ಕಾಣಿಸಿಕೊಂಡಿದ್ದಾರೆ. ಶೀರ್ಷಿಕೆಗೆ ತಕ್ಕಂತೆಯೇ ಒಂದು ಫ್ಯಾಮಿಲಿಯ ಕಥೆ ಕೂಡ ಈ ವೆಬ್​ ಸಿರೀಸ್​​ನಲ್ಲಿ ಹೈಲೈಟ್​ ಆಗಿದೆ. ಮೊದಲ ಸೀಸನ್​ನಲ್ಲಿಯೇ ಶ್ರೀಕಾಂತ್​ ಮತ್ತು ಸುಚಿತ್ರಾ ಸಂಸಾರದಲ್ಲಿ ಜಟಾಪಟಿ ಶುರು ಆಗಿತ್ತು. ಸದಾ ಕಾಲ ಕೆಲಸದಲ್ಲಿ ಮುಳುಗಿರುವ ಶ್ರೀಕಾಂತ್​ ವರ್ತನೆಯಿಂದ ಸುಚಿತ್ರಾಗೆ ಬೇಸರ ಆಗಿತ್ತು. ಹಾಗಾಗಿ ಆಕೆ ತಮ್ಮ ಸಹೋದ್ಯೋಗಿ ಅರವಿಂದ್​ ಜೊತೆ ಆಪ್ತತೆ ಬೆಳೆಸಿಕೊಂಡಿದ್ದಳು.

ಅರವಿಂದ್​ ಮತ್ತು ಸುಚಿತ್ರಾ ನಡುವಿನ ಸಂಬಂಧ ಯಾವ ರೀತಿಯದ್ದು ಎಂಬುದನ್ನು ನಿಗೂಢವಾಗಿಯೇ ಇರುವಂತೆ ನೋಡಿಕೊಂಡಿದ್ದಾರೆ ನಿರ್ದೇಶಕರು. ಅವರಿಬ್ಬರ ಮಧ್ಯೆ ಏನು ನಡೆದಿದೆ ಎಂಬ ಪ್ರಶ್ನೆಗೆ ಈ ಸೀಸನ್​ನಲ್ಲೂ ಉತ್ತರ ಸಿಕ್ಕಿಲ್ಲ. ಕೊನೆಯ ಎಪಿಸೋಡ್​ನಲ್ಲಿ ಶ್ರೀಕಾಂತ್​ ಮತ್ತು ಸುಚಿತ್ರಾ ನಡುವೆ ಒಂದು ಸಂಭಾಷಣೆ ಬರುತ್ತದೆ. ‘ನಿಮಗೆ ನಾನು ಒಂದು ವಿಷಯ ಹೇಳಬೇಕು ಎಂದುಕೊಂಡಿದ್ದೇನೆ..’ ಎಂದು ಸುಚಿತ್ರಾ ಮಾತು ಆರಂಭಿಸುತ್ತಾಳೆ. ಆದರೆ ನಿಜಕ್ಕೂ ಆಕೆ ಏನು ಹೇಳಿದಳು ಎಂಬುದನ್ನು ನಿರ್ದೇಶಕರು ತೋರಿಸಿಲ್ಲ.

ಅದೇ ದೃಶ್ಯದ ಬಗ್ಗೆ ಮನೋಜ್​ ಬಾಜಪೇಯಿ ಅವರಿಗೂ ಇತ್ತೀಚೆಗೆ ಪ್ರಶ್ನೆ ಎದುರಾಯಿತು. ‘ನನ್ನ ಕೈಗೆ ಸ್ಕ್ರಿಪ್ಟ್​ ಸಿಕ್ಕರೆ ಮಾತ್ರ ನಾನು ಹೇಳಬಲ್ಲೆ’ ಎಂದು ನಕ್ಕು ಸುಮ್ಮನಾಗುವ ಮೂಲಕ ಕಡೆಗೂ ಆ ರಹಸ್ಯ ಏನು ಎಂಬುದನ್ನು ಅವರು ಬಯಲು ಮಾಡಿಲ್ಲ.

ಇದನ್ನೂ ಓದಿ:

Samantha Akkineni: ‘ದಿ ಫ್ಯಾಮಿಲಿ ಮ್ಯಾನ್ 2’ಗಾಗಿ ಸಮಂತಾ, ಮನೋಜ್ ಬಾಜಪೇಯಿ ಪಡೆದ ಸಂಭಾವನೆ ಎಷ್ಟು?

ಫ್ಯಾಮಿಲಿ ಮ್ಯಾನ್ ಹೀರೋಗೋಸ್ಕರ ಓಪನ್​ ಆಗಿಯೇ ಕಾಲೆಳೆದುಕೊಂಡ ಅಮೇಜಾನ್​-ನೆಟ್​ಫ್ಲಿಕ್ಸ್​

Follow Us
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!