AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ನ ಮುಖ್ಯವಾದ ಸೀಕ್ರೆಟ್​ ಬಗ್ಗೆ ಮನೋಜ್​ ಬಾಜಪೇಯ್​ ಹೇಳಿದ್ದೇನು?

ಅರವಿಂದ್​ ಮತ್ತು ಸುಚಿತ್ರಾ ಪಾತ್ರಗಳ ನಡುವಿನ ಸಂಬಂಧ ಯಾವ ರೀತಿಯದ್ದು ಎಂಬುದನ್ನು ನಿಗೂಢವಾಗಿಯೇ ಇರುವಂತೆ ನೋಡಿಕೊಂಡಿದ್ದಾರೆ ನಿರ್ದೇಶಕರು. ಅವರಿಬ್ಬರ ಮಧ್ಯೆ ಏನು ನಡೆದಿದೆ ಎಂಬ ಪ್ರಶ್ನೆಗೆ ಈ ಸೀಸನ್​ನಲ್ಲೂ ಉತ್ತರ ಸಿಕ್ಕಿಲ್ಲ.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ನ ಮುಖ್ಯವಾದ ಸೀಕ್ರೆಟ್​ ಬಗ್ಗೆ ಮನೋಜ್​ ಬಾಜಪೇಯ್​ ಹೇಳಿದ್ದೇನು?
ಪ್ರಿಯಾಮಣಿ, ಮನೋಜ್​ ಬಾಜಪೇಯಿ
ಮದನ್​ ಕುಮಾರ್​
|

Updated on: Jun 10, 2021 | 11:57 AM

Share

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಮನೋಜ್​ ಬಾಜಪೇಯಿ, ಪ್ರಿಯಾಮಣಿ, ಸಮಂತಾ ಅಕ್ಕಿನೇನಿ ಮುಖ್ಯ ಭೂಮಿಕೆ ನಿಭಾಯಿಸಿರುವ ಈ ವೆಬ್​ ಸಿರೀಸ್​ಗೆ ರಾಜ್​ ಮತ್ತು ಡಿಕೆ ನಿರ್ದೇಶನ ಮಾಡಿದ್ದಾರೆ. ಆ್ಯಕ್ಷನ್​, ಸಸ್ಪೆನ್ಸ್​-ಥ್ರಿಲ್ಲರ್​ ಶೈಲಿಯಲ್ಲಿ ‘ದಿ ಫ್ಯಾಮಿಲಿ ಮ್ಯಾನ್​ 2’ ಮೂಡಿಬಂದಿದ್ದು, ಅಮೇಜಾನ್​ ಪ್ರೈಂ ವಿಡಿಯೋದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಮೊದಲ ಸೀಸನ್​ ನೋಡಿ ಇಷ್ಟಪಟ್ಟಿದ್ದ ಪ್ರೇಕ್ಷಕರು ಎರಡನೇ ಸೀಸನ್​ಗೂ ಫಿದಾ ಆಗಿದ್ದಾರೆ. ಆದರೆ ಈ ಎರಡೂ ಸೀಸನ್​ನಲ್ಲಿ ಒಂದು ಪ್ರಶ್ನೆಗೆ ಮಾತ್ರ ಪ್ರೇಕ್ಷಕರಿಗೆ ಉತ್ತರ ಸಿಕ್ಕಿಲ್ಲ.

ಶ್ರೀಕಾಂತ್​ ತಿವಾರಿ ಎಂಬ ಪಾತ್ರಕ್ಕೆ ಮನೋಜ್​ ಬಾಜಪೇಯಿ ಬಣ್ಣ ಹಚ್ಚಿದ್ದರೆ, ಅವರ ಪತ್ನಿಯಾಗಿ ಸುಚಿತ್ರಾ ಎಂಬ ಪಾತ್ರದಲ್ಲಿ ಪ್ರಿಯಾಮಣಿ ಕಾಣಿಸಿಕೊಂಡಿದ್ದಾರೆ. ಶೀರ್ಷಿಕೆಗೆ ತಕ್ಕಂತೆಯೇ ಒಂದು ಫ್ಯಾಮಿಲಿಯ ಕಥೆ ಕೂಡ ಈ ವೆಬ್​ ಸಿರೀಸ್​​ನಲ್ಲಿ ಹೈಲೈಟ್​ ಆಗಿದೆ. ಮೊದಲ ಸೀಸನ್​ನಲ್ಲಿಯೇ ಶ್ರೀಕಾಂತ್​ ಮತ್ತು ಸುಚಿತ್ರಾ ಸಂಸಾರದಲ್ಲಿ ಜಟಾಪಟಿ ಶುರು ಆಗಿತ್ತು. ಸದಾ ಕಾಲ ಕೆಲಸದಲ್ಲಿ ಮುಳುಗಿರುವ ಶ್ರೀಕಾಂತ್​ ವರ್ತನೆಯಿಂದ ಸುಚಿತ್ರಾಗೆ ಬೇಸರ ಆಗಿತ್ತು. ಹಾಗಾಗಿ ಆಕೆ ತಮ್ಮ ಸಹೋದ್ಯೋಗಿ ಅರವಿಂದ್​ ಜೊತೆ ಆಪ್ತತೆ ಬೆಳೆಸಿಕೊಂಡಿದ್ದಳು.

ಅರವಿಂದ್​ ಮತ್ತು ಸುಚಿತ್ರಾ ನಡುವಿನ ಸಂಬಂಧ ಯಾವ ರೀತಿಯದ್ದು ಎಂಬುದನ್ನು ನಿಗೂಢವಾಗಿಯೇ ಇರುವಂತೆ ನೋಡಿಕೊಂಡಿದ್ದಾರೆ ನಿರ್ದೇಶಕರು. ಅವರಿಬ್ಬರ ಮಧ್ಯೆ ಏನು ನಡೆದಿದೆ ಎಂಬ ಪ್ರಶ್ನೆಗೆ ಈ ಸೀಸನ್​ನಲ್ಲೂ ಉತ್ತರ ಸಿಕ್ಕಿಲ್ಲ. ಕೊನೆಯ ಎಪಿಸೋಡ್​ನಲ್ಲಿ ಶ್ರೀಕಾಂತ್​ ಮತ್ತು ಸುಚಿತ್ರಾ ನಡುವೆ ಒಂದು ಸಂಭಾಷಣೆ ಬರುತ್ತದೆ. ‘ನಿಮಗೆ ನಾನು ಒಂದು ವಿಷಯ ಹೇಳಬೇಕು ಎಂದುಕೊಂಡಿದ್ದೇನೆ..’ ಎಂದು ಸುಚಿತ್ರಾ ಮಾತು ಆರಂಭಿಸುತ್ತಾಳೆ. ಆದರೆ ನಿಜಕ್ಕೂ ಆಕೆ ಏನು ಹೇಳಿದಳು ಎಂಬುದನ್ನು ನಿರ್ದೇಶಕರು ತೋರಿಸಿಲ್ಲ.

ಅದೇ ದೃಶ್ಯದ ಬಗ್ಗೆ ಮನೋಜ್​ ಬಾಜಪೇಯಿ ಅವರಿಗೂ ಇತ್ತೀಚೆಗೆ ಪ್ರಶ್ನೆ ಎದುರಾಯಿತು. ‘ನನ್ನ ಕೈಗೆ ಸ್ಕ್ರಿಪ್ಟ್​ ಸಿಕ್ಕರೆ ಮಾತ್ರ ನಾನು ಹೇಳಬಲ್ಲೆ’ ಎಂದು ನಕ್ಕು ಸುಮ್ಮನಾಗುವ ಮೂಲಕ ಕಡೆಗೂ ಆ ರಹಸ್ಯ ಏನು ಎಂಬುದನ್ನು ಅವರು ಬಯಲು ಮಾಡಿಲ್ಲ.

ಇದನ್ನೂ ಓದಿ:

Samantha Akkineni: ‘ದಿ ಫ್ಯಾಮಿಲಿ ಮ್ಯಾನ್ 2’ಗಾಗಿ ಸಮಂತಾ, ಮನೋಜ್ ಬಾಜಪೇಯಿ ಪಡೆದ ಸಂಭಾವನೆ ಎಷ್ಟು?

ಫ್ಯಾಮಿಲಿ ಮ್ಯಾನ್ ಹೀರೋಗೋಸ್ಕರ ಓಪನ್​ ಆಗಿಯೇ ಕಾಲೆಳೆದುಕೊಂಡ ಅಮೇಜಾನ್​-ನೆಟ್​ಫ್ಲಿಕ್ಸ್​

Follow Us
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು