AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ನ ಮುಖ್ಯವಾದ ಸೀಕ್ರೆಟ್​ ಬಗ್ಗೆ ಮನೋಜ್​ ಬಾಜಪೇಯ್​ ಹೇಳಿದ್ದೇನು?

ಅರವಿಂದ್​ ಮತ್ತು ಸುಚಿತ್ರಾ ಪಾತ್ರಗಳ ನಡುವಿನ ಸಂಬಂಧ ಯಾವ ರೀತಿಯದ್ದು ಎಂಬುದನ್ನು ನಿಗೂಢವಾಗಿಯೇ ಇರುವಂತೆ ನೋಡಿಕೊಂಡಿದ್ದಾರೆ ನಿರ್ದೇಶಕರು. ಅವರಿಬ್ಬರ ಮಧ್ಯೆ ಏನು ನಡೆದಿದೆ ಎಂಬ ಪ್ರಶ್ನೆಗೆ ಈ ಸೀಸನ್​ನಲ್ಲೂ ಉತ್ತರ ಸಿಕ್ಕಿಲ್ಲ.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ನ ಮುಖ್ಯವಾದ ಸೀಕ್ರೆಟ್​ ಬಗ್ಗೆ ಮನೋಜ್​ ಬಾಜಪೇಯ್​ ಹೇಳಿದ್ದೇನು?
ಪ್ರಿಯಾಮಣಿ, ಮನೋಜ್​ ಬಾಜಪೇಯಿ
Follow us
ಮದನ್​ ಕುಮಾರ್​
|

Updated on: Jun 10, 2021 | 11:57 AM

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಮನೋಜ್​ ಬಾಜಪೇಯಿ, ಪ್ರಿಯಾಮಣಿ, ಸಮಂತಾ ಅಕ್ಕಿನೇನಿ ಮುಖ್ಯ ಭೂಮಿಕೆ ನಿಭಾಯಿಸಿರುವ ಈ ವೆಬ್​ ಸಿರೀಸ್​ಗೆ ರಾಜ್​ ಮತ್ತು ಡಿಕೆ ನಿರ್ದೇಶನ ಮಾಡಿದ್ದಾರೆ. ಆ್ಯಕ್ಷನ್​, ಸಸ್ಪೆನ್ಸ್​-ಥ್ರಿಲ್ಲರ್​ ಶೈಲಿಯಲ್ಲಿ ‘ದಿ ಫ್ಯಾಮಿಲಿ ಮ್ಯಾನ್​ 2’ ಮೂಡಿಬಂದಿದ್ದು, ಅಮೇಜಾನ್​ ಪ್ರೈಂ ವಿಡಿಯೋದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಮೊದಲ ಸೀಸನ್​ ನೋಡಿ ಇಷ್ಟಪಟ್ಟಿದ್ದ ಪ್ರೇಕ್ಷಕರು ಎರಡನೇ ಸೀಸನ್​ಗೂ ಫಿದಾ ಆಗಿದ್ದಾರೆ. ಆದರೆ ಈ ಎರಡೂ ಸೀಸನ್​ನಲ್ಲಿ ಒಂದು ಪ್ರಶ್ನೆಗೆ ಮಾತ್ರ ಪ್ರೇಕ್ಷಕರಿಗೆ ಉತ್ತರ ಸಿಕ್ಕಿಲ್ಲ.

ಶ್ರೀಕಾಂತ್​ ತಿವಾರಿ ಎಂಬ ಪಾತ್ರಕ್ಕೆ ಮನೋಜ್​ ಬಾಜಪೇಯಿ ಬಣ್ಣ ಹಚ್ಚಿದ್ದರೆ, ಅವರ ಪತ್ನಿಯಾಗಿ ಸುಚಿತ್ರಾ ಎಂಬ ಪಾತ್ರದಲ್ಲಿ ಪ್ರಿಯಾಮಣಿ ಕಾಣಿಸಿಕೊಂಡಿದ್ದಾರೆ. ಶೀರ್ಷಿಕೆಗೆ ತಕ್ಕಂತೆಯೇ ಒಂದು ಫ್ಯಾಮಿಲಿಯ ಕಥೆ ಕೂಡ ಈ ವೆಬ್​ ಸಿರೀಸ್​​ನಲ್ಲಿ ಹೈಲೈಟ್​ ಆಗಿದೆ. ಮೊದಲ ಸೀಸನ್​ನಲ್ಲಿಯೇ ಶ್ರೀಕಾಂತ್​ ಮತ್ತು ಸುಚಿತ್ರಾ ಸಂಸಾರದಲ್ಲಿ ಜಟಾಪಟಿ ಶುರು ಆಗಿತ್ತು. ಸದಾ ಕಾಲ ಕೆಲಸದಲ್ಲಿ ಮುಳುಗಿರುವ ಶ್ರೀಕಾಂತ್​ ವರ್ತನೆಯಿಂದ ಸುಚಿತ್ರಾಗೆ ಬೇಸರ ಆಗಿತ್ತು. ಹಾಗಾಗಿ ಆಕೆ ತಮ್ಮ ಸಹೋದ್ಯೋಗಿ ಅರವಿಂದ್​ ಜೊತೆ ಆಪ್ತತೆ ಬೆಳೆಸಿಕೊಂಡಿದ್ದಳು.

ಅರವಿಂದ್​ ಮತ್ತು ಸುಚಿತ್ರಾ ನಡುವಿನ ಸಂಬಂಧ ಯಾವ ರೀತಿಯದ್ದು ಎಂಬುದನ್ನು ನಿಗೂಢವಾಗಿಯೇ ಇರುವಂತೆ ನೋಡಿಕೊಂಡಿದ್ದಾರೆ ನಿರ್ದೇಶಕರು. ಅವರಿಬ್ಬರ ಮಧ್ಯೆ ಏನು ನಡೆದಿದೆ ಎಂಬ ಪ್ರಶ್ನೆಗೆ ಈ ಸೀಸನ್​ನಲ್ಲೂ ಉತ್ತರ ಸಿಕ್ಕಿಲ್ಲ. ಕೊನೆಯ ಎಪಿಸೋಡ್​ನಲ್ಲಿ ಶ್ರೀಕಾಂತ್​ ಮತ್ತು ಸುಚಿತ್ರಾ ನಡುವೆ ಒಂದು ಸಂಭಾಷಣೆ ಬರುತ್ತದೆ. ‘ನಿಮಗೆ ನಾನು ಒಂದು ವಿಷಯ ಹೇಳಬೇಕು ಎಂದುಕೊಂಡಿದ್ದೇನೆ..’ ಎಂದು ಸುಚಿತ್ರಾ ಮಾತು ಆರಂಭಿಸುತ್ತಾಳೆ. ಆದರೆ ನಿಜಕ್ಕೂ ಆಕೆ ಏನು ಹೇಳಿದಳು ಎಂಬುದನ್ನು ನಿರ್ದೇಶಕರು ತೋರಿಸಿಲ್ಲ.

ಅದೇ ದೃಶ್ಯದ ಬಗ್ಗೆ ಮನೋಜ್​ ಬಾಜಪೇಯಿ ಅವರಿಗೂ ಇತ್ತೀಚೆಗೆ ಪ್ರಶ್ನೆ ಎದುರಾಯಿತು. ‘ನನ್ನ ಕೈಗೆ ಸ್ಕ್ರಿಪ್ಟ್​ ಸಿಕ್ಕರೆ ಮಾತ್ರ ನಾನು ಹೇಳಬಲ್ಲೆ’ ಎಂದು ನಕ್ಕು ಸುಮ್ಮನಾಗುವ ಮೂಲಕ ಕಡೆಗೂ ಆ ರಹಸ್ಯ ಏನು ಎಂಬುದನ್ನು ಅವರು ಬಯಲು ಮಾಡಿಲ್ಲ.

ಇದನ್ನೂ ಓದಿ:

Samantha Akkineni: ‘ದಿ ಫ್ಯಾಮಿಲಿ ಮ್ಯಾನ್ 2’ಗಾಗಿ ಸಮಂತಾ, ಮನೋಜ್ ಬಾಜಪೇಯಿ ಪಡೆದ ಸಂಭಾವನೆ ಎಷ್ಟು?

ಫ್ಯಾಮಿಲಿ ಮ್ಯಾನ್ ಹೀರೋಗೋಸ್ಕರ ಓಪನ್​ ಆಗಿಯೇ ಕಾಲೆಳೆದುಕೊಂಡ ಅಮೇಜಾನ್​-ನೆಟ್​ಫ್ಲಿಕ್ಸ್​

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ