AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ನ ಮುಖ್ಯವಾದ ಸೀಕ್ರೆಟ್​ ಬಗ್ಗೆ ಮನೋಜ್​ ಬಾಜಪೇಯ್​ ಹೇಳಿದ್ದೇನು?

ಅರವಿಂದ್​ ಮತ್ತು ಸುಚಿತ್ರಾ ಪಾತ್ರಗಳ ನಡುವಿನ ಸಂಬಂಧ ಯಾವ ರೀತಿಯದ್ದು ಎಂಬುದನ್ನು ನಿಗೂಢವಾಗಿಯೇ ಇರುವಂತೆ ನೋಡಿಕೊಂಡಿದ್ದಾರೆ ನಿರ್ದೇಶಕರು. ಅವರಿಬ್ಬರ ಮಧ್ಯೆ ಏನು ನಡೆದಿದೆ ಎಂಬ ಪ್ರಶ್ನೆಗೆ ಈ ಸೀಸನ್​ನಲ್ಲೂ ಉತ್ತರ ಸಿಕ್ಕಿಲ್ಲ.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ನ ಮುಖ್ಯವಾದ ಸೀಕ್ರೆಟ್​ ಬಗ್ಗೆ ಮನೋಜ್​ ಬಾಜಪೇಯ್​ ಹೇಳಿದ್ದೇನು?
ಪ್ರಿಯಾಮಣಿ, ಮನೋಜ್​ ಬಾಜಪೇಯಿ
ಮದನ್​ ಕುಮಾರ್​
|

Updated on: Jun 10, 2021 | 11:57 AM

Share

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಮನೋಜ್​ ಬಾಜಪೇಯಿ, ಪ್ರಿಯಾಮಣಿ, ಸಮಂತಾ ಅಕ್ಕಿನೇನಿ ಮುಖ್ಯ ಭೂಮಿಕೆ ನಿಭಾಯಿಸಿರುವ ಈ ವೆಬ್​ ಸಿರೀಸ್​ಗೆ ರಾಜ್​ ಮತ್ತು ಡಿಕೆ ನಿರ್ದೇಶನ ಮಾಡಿದ್ದಾರೆ. ಆ್ಯಕ್ಷನ್​, ಸಸ್ಪೆನ್ಸ್​-ಥ್ರಿಲ್ಲರ್​ ಶೈಲಿಯಲ್ಲಿ ‘ದಿ ಫ್ಯಾಮಿಲಿ ಮ್ಯಾನ್​ 2’ ಮೂಡಿಬಂದಿದ್ದು, ಅಮೇಜಾನ್​ ಪ್ರೈಂ ವಿಡಿಯೋದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಮೊದಲ ಸೀಸನ್​ ನೋಡಿ ಇಷ್ಟಪಟ್ಟಿದ್ದ ಪ್ರೇಕ್ಷಕರು ಎರಡನೇ ಸೀಸನ್​ಗೂ ಫಿದಾ ಆಗಿದ್ದಾರೆ. ಆದರೆ ಈ ಎರಡೂ ಸೀಸನ್​ನಲ್ಲಿ ಒಂದು ಪ್ರಶ್ನೆಗೆ ಮಾತ್ರ ಪ್ರೇಕ್ಷಕರಿಗೆ ಉತ್ತರ ಸಿಕ್ಕಿಲ್ಲ.

ಶ್ರೀಕಾಂತ್​ ತಿವಾರಿ ಎಂಬ ಪಾತ್ರಕ್ಕೆ ಮನೋಜ್​ ಬಾಜಪೇಯಿ ಬಣ್ಣ ಹಚ್ಚಿದ್ದರೆ, ಅವರ ಪತ್ನಿಯಾಗಿ ಸುಚಿತ್ರಾ ಎಂಬ ಪಾತ್ರದಲ್ಲಿ ಪ್ರಿಯಾಮಣಿ ಕಾಣಿಸಿಕೊಂಡಿದ್ದಾರೆ. ಶೀರ್ಷಿಕೆಗೆ ತಕ್ಕಂತೆಯೇ ಒಂದು ಫ್ಯಾಮಿಲಿಯ ಕಥೆ ಕೂಡ ಈ ವೆಬ್​ ಸಿರೀಸ್​​ನಲ್ಲಿ ಹೈಲೈಟ್​ ಆಗಿದೆ. ಮೊದಲ ಸೀಸನ್​ನಲ್ಲಿಯೇ ಶ್ರೀಕಾಂತ್​ ಮತ್ತು ಸುಚಿತ್ರಾ ಸಂಸಾರದಲ್ಲಿ ಜಟಾಪಟಿ ಶುರು ಆಗಿತ್ತು. ಸದಾ ಕಾಲ ಕೆಲಸದಲ್ಲಿ ಮುಳುಗಿರುವ ಶ್ರೀಕಾಂತ್​ ವರ್ತನೆಯಿಂದ ಸುಚಿತ್ರಾಗೆ ಬೇಸರ ಆಗಿತ್ತು. ಹಾಗಾಗಿ ಆಕೆ ತಮ್ಮ ಸಹೋದ್ಯೋಗಿ ಅರವಿಂದ್​ ಜೊತೆ ಆಪ್ತತೆ ಬೆಳೆಸಿಕೊಂಡಿದ್ದಳು.

ಅರವಿಂದ್​ ಮತ್ತು ಸುಚಿತ್ರಾ ನಡುವಿನ ಸಂಬಂಧ ಯಾವ ರೀತಿಯದ್ದು ಎಂಬುದನ್ನು ನಿಗೂಢವಾಗಿಯೇ ಇರುವಂತೆ ನೋಡಿಕೊಂಡಿದ್ದಾರೆ ನಿರ್ದೇಶಕರು. ಅವರಿಬ್ಬರ ಮಧ್ಯೆ ಏನು ನಡೆದಿದೆ ಎಂಬ ಪ್ರಶ್ನೆಗೆ ಈ ಸೀಸನ್​ನಲ್ಲೂ ಉತ್ತರ ಸಿಕ್ಕಿಲ್ಲ. ಕೊನೆಯ ಎಪಿಸೋಡ್​ನಲ್ಲಿ ಶ್ರೀಕಾಂತ್​ ಮತ್ತು ಸುಚಿತ್ರಾ ನಡುವೆ ಒಂದು ಸಂಭಾಷಣೆ ಬರುತ್ತದೆ. ‘ನಿಮಗೆ ನಾನು ಒಂದು ವಿಷಯ ಹೇಳಬೇಕು ಎಂದುಕೊಂಡಿದ್ದೇನೆ..’ ಎಂದು ಸುಚಿತ್ರಾ ಮಾತು ಆರಂಭಿಸುತ್ತಾಳೆ. ಆದರೆ ನಿಜಕ್ಕೂ ಆಕೆ ಏನು ಹೇಳಿದಳು ಎಂಬುದನ್ನು ನಿರ್ದೇಶಕರು ತೋರಿಸಿಲ್ಲ.

ಅದೇ ದೃಶ್ಯದ ಬಗ್ಗೆ ಮನೋಜ್​ ಬಾಜಪೇಯಿ ಅವರಿಗೂ ಇತ್ತೀಚೆಗೆ ಪ್ರಶ್ನೆ ಎದುರಾಯಿತು. ‘ನನ್ನ ಕೈಗೆ ಸ್ಕ್ರಿಪ್ಟ್​ ಸಿಕ್ಕರೆ ಮಾತ್ರ ನಾನು ಹೇಳಬಲ್ಲೆ’ ಎಂದು ನಕ್ಕು ಸುಮ್ಮನಾಗುವ ಮೂಲಕ ಕಡೆಗೂ ಆ ರಹಸ್ಯ ಏನು ಎಂಬುದನ್ನು ಅವರು ಬಯಲು ಮಾಡಿಲ್ಲ.

ಇದನ್ನೂ ಓದಿ:

Samantha Akkineni: ‘ದಿ ಫ್ಯಾಮಿಲಿ ಮ್ಯಾನ್ 2’ಗಾಗಿ ಸಮಂತಾ, ಮನೋಜ್ ಬಾಜಪೇಯಿ ಪಡೆದ ಸಂಭಾವನೆ ಎಷ್ಟು?

ಫ್ಯಾಮಿಲಿ ಮ್ಯಾನ್ ಹೀರೋಗೋಸ್ಕರ ಓಪನ್​ ಆಗಿಯೇ ಕಾಲೆಳೆದುಕೊಂಡ ಅಮೇಜಾನ್​-ನೆಟ್​ಫ್ಲಿಕ್ಸ್​

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?