AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಫ್ಯಾಮಿಲಿ ಮ್ಯಾನ್​’ ನಿರ್ದೇಶಕರ ಜೊತೆ ಮಹೇಶ್​ ಬಾಬು ಅಥವಾ ದೇವರಕೊಂಡ ಸಿನಿಮಾ; ಹೊರಬಿತ್ತು ಹೊಸ ಸುದ್ದಿ

ಮಹೇಶ್​ ಬಾಬು ಅಥವಾ ವಿಜಯ್​ ದೇವರಕೊಂಡ ಇಬ್ಬರಲ್ಲಿ ಒಬ್ಬರ ಜೊತೆ ರಾಜ್​-ಡಿಕೆ ಸಿನಿಮಾ ಮಾಡುವ ಸಾಧ್ಯತೆ ದಟ್ಟವಾಗಿದೆ. ಇಬ್ಬರಿಗೂ ಕಥೆ ಹೇಳಲಾಗಿದ್ದು ಯಾರು ಮೊದಲು ಗ್ರೀನ್​ ಸಿಗ್ನಲ್​ ನೀಡುತ್ತಾರೋ ಅವರ ಜೊತೆ ಸಿನಿಮಾ ಸೆಟ್ಟೇರಲಿದೆ.

‘ದಿ ಫ್ಯಾಮಿಲಿ ಮ್ಯಾನ್​’ ನಿರ್ದೇಶಕರ ಜೊತೆ ಮಹೇಶ್​ ಬಾಬು ಅಥವಾ ದೇವರಕೊಂಡ ಸಿನಿಮಾ; ಹೊರಬಿತ್ತು ಹೊಸ ಸುದ್ದಿ
ಮಹೇಶ್ ಬಾಬು - ವಿಜಯ್ ದೇವರಕೊಂಡ
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on: May 16, 2021 | 5:18 PM

Share

ಖ್ಯಾತ ನಿರ್ದೇಶಕರಾದ ರಾಜ್​ ಮತ್ತು ಡಿಕೆ ಅವರು ಜೋಡಿಯಾಗಿ ಬಾಲಿವುಡ್​ನಲ್ಲಿ ಹಲವು ಸಿನಿಮಾ ಮಾಡಿದ್ದಾರೆ. ಓಟಿಟಿಯಲ್ಲಿ ಭಾರಿ ಯಶಸ್ಸು ಕಂಡ ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸಿರೀಸ್​ಗೆ ನಿರ್ದೇಶನ ಮಾಡಿದ ಬಳಿಕ ಅವರ ಖ್ಯಾತಿ ದುಪ್ಪಟ್ಟಾಗಿದೆ. ಈಗ ‘ದಿ ಫ್ಯಾಮಿಲಿ ಮ್ಯಾನ್​ 2’ ಈಗ ಬಿಡುಗಡೆಗೆ ಸಿದ್ಧವಾಗಿದೆ. ಮೂಲತಃ ರಾಜ್​ ಮತ್ತು ಡಿಕೆ ತೆಲುಗಿನವರು. ಆದರೆ ಈವರೆಗೂ ಅವರು ಯಾವುದೇ ಟಾಲಿವುಡ್​ ಚಿತ್ರಕ್ಕೆ ನಿರ್ದೇಶನ ಮಾಡಿಲ್ಲ. ಶೀಘ್ರದಲ್ಲೇ ಅವರ ನಿರ್ದೇಶನದಲ್ಲಿ ಒಂದು ತೆಲುಗು ಸಿನಿಮಾ ಸೆಟ್ಟೇರುವ ಬಗ್ಗೆ ಈಗ ಸುದ್ದಿ ಹೊರಬಿದ್ದಿದೆ.

ಓಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಬಿಡುಗಡೆಯಾಗಿ ಸದ್ದು ಮಾಡುತ್ತಿರುವ ‘ಸಿನಿಮಾ ಬಂಡಿ’ ಚಿತ್ರಕ್ಕೆ ರಾಜ್​ ಮತ್ತು ಡಿಕೆ ಬಂಡವಾಳ ಹೂಡಿದ್ದಾರೆ. ಆ ಸಿನಿಮಾ ಪ್ರಚಾರದ ಸಲುವಾಗಿ ಕೆಲವು ಮಾಧ್ಯಮಗಳಿಗೆ ಸಂದರ್ಶನ ನೀಡಿರುವ ಈ ನಿರ್ದೇಶಕರಿಬ್ಬರು ತಮ್ಮ ಮುಂದಿನ ಪ್ರಾಜೆಕ್ಟ್​ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಟಾಲಿವುಡ್​ನ ಟಾಪ್​ ಸ್ಟಾರ್​ಗಳ ಜೊತೆ ಸಿನಿಮಾ ಮಾಡಲು ಅವರು ಮುಂದಾಗಿದ್ದಾರೆ. ಈಗಾಗಲೇ ಮಹೇಶ್​ ಬಾಬು ಮತ್ತು ವಿಜಯ್​ ದೇವರಕೊಂಡ ಜೊತೆ ಅವರು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ.

ಮಹೇಶ್​ ಬಾಬು ಅಥವಾ ವಿಜಯ್​ ದೇವರಕೊಂಡ ಇಬ್ಬರಲ್ಲಿ ಒಬ್ಬರ ಜೊತೆ ರಾಜ್​-ಡಿಕೆ ಸಿನಿಮಾ ಮಾಡುವ ಸಾಧ್ಯತೆ ದಟ್ಟವಾಗಿದೆ. ಇಬ್ಬರಿಗೂ ಕಥೆ ಹೇಳಲಾಗಿದ್ದು ಯಾರು ಮೊದಲು ಗ್ರೀನ್​ ಸಿಗ್ನಲ್​ ನೀಡುತ್ತಾರೋ ಅವರ ಜೊತೆ ಸಿನಿಮಾ ಸೆಟ್ಟೇರಲಿದೆ. ಈ ಪವರ್​ಫುಲ್​ ಕಾಂಬಿನೇಷನ್​ನ ಸಿನಿಮಾ ಬಗ್ಗೆ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಳ್ಳುವಂತಾಗಿದೆ.

ಸದ್ಯ ಮಹೇಶ್​ ಬಾಬು ‘ಸರ್ಕಾರು ವಾರಿ ಪಾಟ’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ವಿಜಯ್​ ದೇವರಕೊಂಡ ‘ಲೈಗರ್​’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಇವರಿಬ್ಬರಲ್ಲಿ ರಾಜ್​-ಡಿಕೆ ಜೊತೆ ಯಾರು ಸಿನಿಮಾ ಮಾಡುತ್ತಾರೆ ಎಂಬ ಕೌತುಕ ಈಗ ಮನೆ ಮಾಡಿದೆ.

ಇದನ್ನೂ ಓದಿ:

Rashmika Mandanna: ವಿಜಯ್​ ದೇವರಕೊಂಡಗೆ ಆ ಒಂದು ಪದ ಬಳಸಿ ವಿಶ್​ ಮಾಡಿದ ರಶ್ಮಿಕಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

Rashmika Mandanna: ವಿಜಯ್​ ದೇವರಕೊಂಡ ಅಲ್ಲ; ಉಂಗುರ ತೋರಿಸಿ ಬಾಯ್​ಫ್ರೆಂಡ್​ ಯಾರು ಅಂತ ಹೇಳಿದ ರಶ್ಮಿಕಾ

ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು