AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಫ್ಯಾಮಿಲಿ ಮ್ಯಾನ್​’ ನಿರ್ದೇಶಕರ ಜೊತೆ ಮಹೇಶ್​ ಬಾಬು ಅಥವಾ ದೇವರಕೊಂಡ ಸಿನಿಮಾ; ಹೊರಬಿತ್ತು ಹೊಸ ಸುದ್ದಿ

ಮಹೇಶ್​ ಬಾಬು ಅಥವಾ ವಿಜಯ್​ ದೇವರಕೊಂಡ ಇಬ್ಬರಲ್ಲಿ ಒಬ್ಬರ ಜೊತೆ ರಾಜ್​-ಡಿಕೆ ಸಿನಿಮಾ ಮಾಡುವ ಸಾಧ್ಯತೆ ದಟ್ಟವಾಗಿದೆ. ಇಬ್ಬರಿಗೂ ಕಥೆ ಹೇಳಲಾಗಿದ್ದು ಯಾರು ಮೊದಲು ಗ್ರೀನ್​ ಸಿಗ್ನಲ್​ ನೀಡುತ್ತಾರೋ ಅವರ ಜೊತೆ ಸಿನಿಮಾ ಸೆಟ್ಟೇರಲಿದೆ.

‘ದಿ ಫ್ಯಾಮಿಲಿ ಮ್ಯಾನ್​’ ನಿರ್ದೇಶಕರ ಜೊತೆ ಮಹೇಶ್​ ಬಾಬು ಅಥವಾ ದೇವರಕೊಂಡ ಸಿನಿಮಾ; ಹೊರಬಿತ್ತು ಹೊಸ ಸುದ್ದಿ
ಮಹೇಶ್ ಬಾಬು - ವಿಜಯ್ ದೇವರಕೊಂಡ
ಮದನ್​ ಕುಮಾರ್​
| Edited By: |

Updated on: May 16, 2021 | 5:18 PM

Share

ಖ್ಯಾತ ನಿರ್ದೇಶಕರಾದ ರಾಜ್​ ಮತ್ತು ಡಿಕೆ ಅವರು ಜೋಡಿಯಾಗಿ ಬಾಲಿವುಡ್​ನಲ್ಲಿ ಹಲವು ಸಿನಿಮಾ ಮಾಡಿದ್ದಾರೆ. ಓಟಿಟಿಯಲ್ಲಿ ಭಾರಿ ಯಶಸ್ಸು ಕಂಡ ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸಿರೀಸ್​ಗೆ ನಿರ್ದೇಶನ ಮಾಡಿದ ಬಳಿಕ ಅವರ ಖ್ಯಾತಿ ದುಪ್ಪಟ್ಟಾಗಿದೆ. ಈಗ ‘ದಿ ಫ್ಯಾಮಿಲಿ ಮ್ಯಾನ್​ 2’ ಈಗ ಬಿಡುಗಡೆಗೆ ಸಿದ್ಧವಾಗಿದೆ. ಮೂಲತಃ ರಾಜ್​ ಮತ್ತು ಡಿಕೆ ತೆಲುಗಿನವರು. ಆದರೆ ಈವರೆಗೂ ಅವರು ಯಾವುದೇ ಟಾಲಿವುಡ್​ ಚಿತ್ರಕ್ಕೆ ನಿರ್ದೇಶನ ಮಾಡಿಲ್ಲ. ಶೀಘ್ರದಲ್ಲೇ ಅವರ ನಿರ್ದೇಶನದಲ್ಲಿ ಒಂದು ತೆಲುಗು ಸಿನಿಮಾ ಸೆಟ್ಟೇರುವ ಬಗ್ಗೆ ಈಗ ಸುದ್ದಿ ಹೊರಬಿದ್ದಿದೆ.

ಓಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಬಿಡುಗಡೆಯಾಗಿ ಸದ್ದು ಮಾಡುತ್ತಿರುವ ‘ಸಿನಿಮಾ ಬಂಡಿ’ ಚಿತ್ರಕ್ಕೆ ರಾಜ್​ ಮತ್ತು ಡಿಕೆ ಬಂಡವಾಳ ಹೂಡಿದ್ದಾರೆ. ಆ ಸಿನಿಮಾ ಪ್ರಚಾರದ ಸಲುವಾಗಿ ಕೆಲವು ಮಾಧ್ಯಮಗಳಿಗೆ ಸಂದರ್ಶನ ನೀಡಿರುವ ಈ ನಿರ್ದೇಶಕರಿಬ್ಬರು ತಮ್ಮ ಮುಂದಿನ ಪ್ರಾಜೆಕ್ಟ್​ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಟಾಲಿವುಡ್​ನ ಟಾಪ್​ ಸ್ಟಾರ್​ಗಳ ಜೊತೆ ಸಿನಿಮಾ ಮಾಡಲು ಅವರು ಮುಂದಾಗಿದ್ದಾರೆ. ಈಗಾಗಲೇ ಮಹೇಶ್​ ಬಾಬು ಮತ್ತು ವಿಜಯ್​ ದೇವರಕೊಂಡ ಜೊತೆ ಅವರು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ.

ಮಹೇಶ್​ ಬಾಬು ಅಥವಾ ವಿಜಯ್​ ದೇವರಕೊಂಡ ಇಬ್ಬರಲ್ಲಿ ಒಬ್ಬರ ಜೊತೆ ರಾಜ್​-ಡಿಕೆ ಸಿನಿಮಾ ಮಾಡುವ ಸಾಧ್ಯತೆ ದಟ್ಟವಾಗಿದೆ. ಇಬ್ಬರಿಗೂ ಕಥೆ ಹೇಳಲಾಗಿದ್ದು ಯಾರು ಮೊದಲು ಗ್ರೀನ್​ ಸಿಗ್ನಲ್​ ನೀಡುತ್ತಾರೋ ಅವರ ಜೊತೆ ಸಿನಿಮಾ ಸೆಟ್ಟೇರಲಿದೆ. ಈ ಪವರ್​ಫುಲ್​ ಕಾಂಬಿನೇಷನ್​ನ ಸಿನಿಮಾ ಬಗ್ಗೆ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಳ್ಳುವಂತಾಗಿದೆ.

ಸದ್ಯ ಮಹೇಶ್​ ಬಾಬು ‘ಸರ್ಕಾರು ವಾರಿ ಪಾಟ’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ವಿಜಯ್​ ದೇವರಕೊಂಡ ‘ಲೈಗರ್​’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಇವರಿಬ್ಬರಲ್ಲಿ ರಾಜ್​-ಡಿಕೆ ಜೊತೆ ಯಾರು ಸಿನಿಮಾ ಮಾಡುತ್ತಾರೆ ಎಂಬ ಕೌತುಕ ಈಗ ಮನೆ ಮಾಡಿದೆ.

ಇದನ್ನೂ ಓದಿ:

Rashmika Mandanna: ವಿಜಯ್​ ದೇವರಕೊಂಡಗೆ ಆ ಒಂದು ಪದ ಬಳಸಿ ವಿಶ್​ ಮಾಡಿದ ರಶ್ಮಿಕಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

Rashmika Mandanna: ವಿಜಯ್​ ದೇವರಕೊಂಡ ಅಲ್ಲ; ಉಂಗುರ ತೋರಿಸಿ ಬಾಯ್​ಫ್ರೆಂಡ್​ ಯಾರು ಅಂತ ಹೇಳಿದ ರಶ್ಮಿಕಾ

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ