AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಿಲ್ ಶರ್ಮಾ ಶೋನಲ್ಲಿದ್ದಾರೆ ಖ್ಯಾತ ಕಾಮಿಡಿಯನ್ಸ್; ಇವರ ಆಸ್ತಿ ಎಷ್ಟು ಕೋಟಿ ರೂಪಾಯಿ?

ಕಪಿಲ್ ಶರ್ಮಾ ಅವರು ಶ್ರೇಷ್ಠ ನಟ ಹಾಗೂ ಕಾಮಿಡಿಯನ್. ಅವರು ಅತ್ಯುತ್ತಮ ನಿರೂಪಕರೂ ಹೌದು. ಅವರು ಫನ್ನಿ ಡೈಲಾಗ್​ ಮೂಲಕ ಗಮನ ಸೆಳೆದಿದ್ದಾರೆ. ಜೀರೋದಿಂದ ಕರಿಯರ್ ಆರಂಭಿಸಿದ ಅವರ ಆಸ್ತಿ ಇಂದಿಗೆ 280 ಕೋಟಿ ರೂಪಾಯಿಗೂ ಅಧಿಕವಾಗಿದೆ.

ಕಪಿಲ್ ಶರ್ಮಾ ಶೋನಲ್ಲಿದ್ದಾರೆ ಖ್ಯಾತ ಕಾಮಿಡಿಯನ್ಸ್; ಇವರ ಆಸ್ತಿ ಎಷ್ಟು ಕೋಟಿ ರೂಪಾಯಿ?
ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 30, 2024 | 8:03 AM

Share

‘ದಿ ಗ್ರೇಟ್ ಇಂಡಿಯ್ ಕಪಿಲ್ ಶೋ’ (The Great Indian Kapil Show) ಪ್ರಸಾರಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು (ಮಾರ್ಚ್ 30) ನೆಟ್​ಫ್ಲಿಕ್ಸ್​ನಲ್ಲಿ ಈ ಶೋನ ಮೊದಲ ಎಪಿಸೋಡ್ ಪ್ರಸಾರ ಕಾಣಲಿದೆ. ಈ ಮೂಲಕ ಕಪಿಲ್ ಶರ್ಮಾ ಶೋ ಅವರು ಕಿರುತೆರೆಗೆ ಮರಳಿದಂತಾಗಲಿದೆ. ಈ ಸೀರಿಸ್​ಗಾಗಿ ಹಲವು ಸ್ಟಾರ್ ಕಾಮಿಡಿಯನ್ಸ್ ಕೈ ಜೋಡಿಸಿದ್ದಾರೆ. ಇದರಲ್ಲಿ ವಿಕ್ಕಿ ಗ್ರೋವರ್ ಕೂಡ ಇದ್ದಾರೆ. ಹಾಗಾದರೆ, ಎಲ್ಲರನ್ನೂ ನಗಿಸುವ ಈ ಕಲಾವಿದರ ಆಸ್ತಿ ಬಗ್ಗೆ ಇಲ್ಲಿದೆ ವಿವರ.

ಕಪಿಲ್ ಶರ್ಮಾ

ಕಪಿಲ್ ಶರ್ಮಾ ಅವರು ಶ್ರೇಷ್ಠ ನಟ ಹಾಗೂ ಕಾಮಿಡಿಯನ್. ಅವರು ಅತ್ಯುತ್ತಮ ನಿರೂಪಕರೂ ಹೌದು. ಅವರು ಫನ್ನಿ ಡೈಲಾಗ್​ ಮೂಲಕ ಗಮನ ಸೆಳೆದಿದ್ದಾರೆ. ಜೀರೋದಿಂದ ಕರಿಯರ್ ಆರಂಭಿಸಿದ ಅವರ ಆಸ್ತಿ ಇಂದಿಗೆ 280 ಕೋಟಿ ರೂಪಾಯಿಗೂ ಅಧಿಕವಾಗಿದೆ. ಇವರು ಅನೇಕರಿಗೆ ಮಾದರಿ. ಹಲವು ಕಿರುತೆರೆ ಶೋಗಳನ್ನು ಅವರು ನಡೆಸಿಕೊಟ್ಟಿದ್ದಾರೆ.

ಕೃಷ್ಣ ಅಭಿಷೇಕ್

ಗೋವಿಂದ್ ಅವರ ಸಂಬಂಧಿ ಕೃಷ್ಣ ಅಭಿಷೇಕ್ ಅವರು ಕೂಡ ಖ್ಯಾತ ಕಾಮಿಡಿಯನ್. ಅವರು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಇವರು ಹಲವು ಶೋಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಇವರ ಆಸ್ತಿ 30 ಕೋಟಿ ರೂಪಾಯಿ.

ಕಿಕು ಶಾರದಾ

ಕಿಕು ಶಾರದಾ ಅವರು ಮತ್ತೋರ್ವ ಖ್ಯಾತ ಹಾಸ್ಯ ಕಲಾವಿದ. ಇವರು ಮಹಿಳಾ ಪಾರ್ಟ್​ಗಳನ್ನು ಹಾಕಿ ಗಮನ ಸೆಳೆದವರು. ಇವರ ಆಸ್ತಿ 33 ಕೋಟಿ ರೂಪಾಯಿಗೂ ಅಧಿಕವಾಗಿದೆ. ಇವರು ಹಲವು ಶೋಗಳನ್ನು ನಿರೂಪಿಸಿದ್ದಾರೆ.

ಸುನೀಲ್ ಗ್ರೋವರ್

ನಟ ಹಾಗೂ ಕಾಮಿಡಿಯನ್ ಸುನಿಲ್ ಗ್ರೋವರ್ ಖ್ಯಾತಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಕಪಿಲ್ ಶರ್ಮಾ ಶೋ ಹಿಟ್ ಆಗುವಲ್ಲಿ ಇವರ ಪಾತ್ರವೂ ಅಧಿಕವಾಗಿದೆ. ಇವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರ ಆಸ್ತಿ 21 ಕೋಟಿ ರೂಪಾಯಿ. ಇವರಿಗೆ ಈ ಮೊದಲು ಸಾಕಷ್ಟು ಅನಾರೋಗ್ಯ ಕಾಡಿತ್ತು. ಕಪಿಲ್ ಹಾಗೂ ಸುನೀಲ್ ಮಧ್ಯೆ ಉಂಟಾದ ಕಿರಿಕ್​ನಿಂದಾಗ ಇಬ್ಬರೂ ದೂರ ಆಗಿದ್ದರು. ಈಗ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶರ್ಮಾ’ ಶೋ ಮೂಲಕ ಮತ್ತೆ ಒಂದಾಗಿದ್ದಾರೆ.

ರಾಜೀವ್ ಠಾಕೂರ್

ರಾಜೀವ್ ಠಾಕೂರ್ ಅವರು ಭಾರತದ ಖ್ಯಾತ ಕಾಮಿಡಿಯನ್. ಅವರು ಕೂಡ ಇದರ ಭಾಗವಾಗುತ್ತಿದ್ದಾರೆ. ಇವರ ಆಸ್ತಿ 17 ಕೋಟಿ ರೂಪಾಯಿ ಎನ್ನಲಾಗಿದೆ.

ಇದನ್ನೂ ಓದಿ: ಹೃದಯಾಘಾತದಿಂದ ಮೃತಪಟ್ಟ ಖ್ಯಾತ ಖಳನಟ ಡ್ಯಾನಿಯಲ್ ಬಾಲಾಜಿ

ಶೋ ಬಗ್ಗೆ

ಇಷ್ಟು ದಿನ ಸೋನಿ ಟಿವಿಯಲ್ಲಿ ಕಪಿಲ್ ಶರ್ಮಾ ಶೋಗಳು ಬರುತ್ತಿದ್ದವು. ಆದರೆ ಈಗ ಅವರು ಕುಟುಂಬ ಬದಲಾಯಿಸಿದ್ದಾರೆ. ನೆಟ್​​ಫ್ಲಿಕ್ಸ್​ನಲ್ಲಿ ಈ ಶೋ ಪ್ರಸಾರ ಕಾಣಲಿದೆ ಅನ್ನೋದು ವಿಶೇಷ. ಈ ಶೋಗಾಗಿ ಫ್ಯಾನ್ಸ್ ಕಾದಿದ್ದಾರೆ. ಹೊಟ್ಟೆ ಹುಣ್ಣಾಗುವ ರೀತಿಯಲ್ಲಿ ಮನರಂಜನೆ ಸಿಗೋದು ಪಕ್ಕಾ ಅನ್ನೋದು ಟ್ರೇಲರ್ ಮೂಲಕ ಗೊತ್ತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ