AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಹಿಂದಿ ಕಿರುತೆರೆ ನಟಿ ಶ್ವೇತಾ ತಿವಾರಿ

ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದು ವಿವಾದಾತ್ಮಕ ಹೇಳಿಕೆಯನ್ನು ಕಿರುತೆರೆ ನಟಿ ಶ್ವೇತಾ ತಿವಾರಿ ಹೇಳಿದ್ದಾರೆ. ಇದನ್ನು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಖಂಡಿಸಿದ್ದಾರೆ.

ದೇವರ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಹಿಂದಿ ಕಿರುತೆರೆ ನಟಿ ಶ್ವೇತಾ ತಿವಾರಿ
ಕಿರುತೆರೆ ನಟಿ ಶ್ವೇತಾ ತಿವಾರಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 27, 2022 | 3:41 PM

Share

ಜನಪ್ರಿಯ ಕಿರುತೆರೆ ನಟಿ ಶ್ವೇತಾ ತಿವಾರಿ ಅವರು ದೇವರ ಕುರಿತಾಗಿ ಹೇಳಿಕೆಯೊಂದನ್ನು ನೀಡಿ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ. ತಮ್ಮ ಒಳಉಡುಪುಗಳ ಬಗ್ಗೆ ಹೇಳಿಕೆ ನೀಡುವಾಗ ದೇವರನ್ನು ಉಲ್ಲೇಖಿಸಿ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚೆಗೆ, ಅವರು ಫ್ಯಾಶನ್​ಗೆ ಆಧರಿಸಿದ ತನ್ನ ಮುಂಬರುವ ವೆಬ್ ಸರಣಿ ‘ಶೋ ಸ್ಟಾಪರ್’ ಪ್ರಚಾರ ಮಾಡಲು ಭೋಪಾಲ್​ಗೆ ಬಂದಾಗ ಈ ಹೇಳಿಕೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ನಟಿ ಶ್ವೇತಾ ತನ್ನ ಬ್ರಾ ಗಾತ್ರವನ್ನು ‘ದೇವರು’ ತೆಗೆದುಕೊಳ್ಳುತ್ತಿದ್ದಾನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇವರ ಬಗ್ಗೆ ಈ ರೀತಿಯಾಗೆ ತಮಾಷೆ ಮಾಡಿದಕ್ಕೆ ಹಲವರು ಇದು ಸರಿಯಲ್ಲ ಎಂದು ಟೀಕಿಸಿದ್ದಾರೆ.

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಶ್ವೇತಾ ತಿವಾರಿ ಅವರ ಹೇಳಿಕೆಯನ್ನು ತನಿಖೆ ಮಾಡಿ 24 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ನರೋತ್ತಮ್ ಮಿಶ್ರಾ, “ನಾನು ನಟಿ ಶ್ವೇತಾ ತಿವಾರಿ ಹೇಳಿಕೆಯನ್ನು ಕೇಳಿದ್ದೇನೆ ಮತ್ತು ಅದನ್ನು ತೀವ್ರವಾಗಿ ಖಂಡಿಸುತ್ತೇನೆ. ನಾನು ಈ ಬಗ್ಗೆ ತನಿಖೆ ನಡೆಸಿ 24 ಗಂಟೆಗಳ ಒಳಗೆ ವರದಿ ನೀಡುವಂತೆ ಭೋಪಾಲ್ ಪೊಲೀಸ್ ಕಮಿಷನರ್‌ಗೆ ಸೂಚಿಸಿದ್ದೇನೆ. ನಂತರ, ಈ ವಿಷಯದಲ್ಲಿ ಏನು ಕ್ರಮ ಕೈಗೊಳ್ಳಬಹುದು ಎಂಬುದನ್ನು ನಾವು ವಿಚಾರಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನೂ ನಟಿ ಶ್ವೇತಾ ತಿವಾರಿ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅದರಲ್ಲಿ ಅವರು ತಮ್ಮ ಒಳ ಉಡುಪುಗಳ ಬಗ್ಗೆ ಮಾತನಾಡುವಾಗ ದೇವರನ್ನು ಉಲ್ಲೇಖಿಸಿದ್ದಾರೆ. “ಮೇರಿ ಬ್ರಾ ಕಾ ಸೈಜ್ ಭಗವಾನ್ ಲೇ ರಹೇ ಹೈ,” ಎಂದು ಹೇಳಿದ್ದಾರೆ.

ಶ್ವೇತಾ ತಿವಾರಿ ಕಿರುತೆರೆಯಲ್ಲಿ ಅತ್ಯಂತ ಜನಪ್ರಿಯ ಮತ್ತು ಪ್ರೀತಿಪಾತ್ರ ನಟಿಯರಲ್ಲಿ ಒಬ್ಬರು. ಅವರು ‘ಕಸೌತಿ ಜಿಂದಗಿ ಕೇ’ ನಲ್ಲಿ ಪ್ರೇರಣಾ ಪಾತ್ರವನ್ನು ನಿರ್ವಹಿಸುವ ಮೂಲಕ ಮನೆಮಾತಾಗಿದ್ದರು. ಅಷ್ಟೇ ಅಲ್ಲದೇ ಖತ್ರೋನ್ ಕೆ ಖಿಲಾಡಿ ರಿಯಾಲಿಟಿ ಶೋನಲ್ಲಿಯೂ ಕಾಣಿಸಿಕೊಂಡರು. ಅರ್ಜುನ್ ಬಿಜ್ಲಾನಿ, ದಿವ್ಯಾಂಕಾ ತ್ರಿಪಾಠಿ, ವರುಣ್ ಸೂದ್ ಮತ್ತು ವಿಶಾಲ್ ಆದಿತ್ಯ ಸಿಂಗ್ ಅವರೊಂದಿಗೆ ಟಾಪ್ 5 ಸ್ಪರ್ಧಿಗಳಲ್ಲಿ ಇವರು ಒಬ್ಬರಾಗಿದ್ದರು.

ಇದನ್ನೂಓದಿ;

‘ಮಹಾನಟಿ’ ಖ್ಯಾತಿಯ ಕೀರ್ತಿ ಸುರೇಶ್​ಗೆ ಸತತ ಸೋಲು; ಈಗಲಾದರೂ ಸಿಗಲಿದೆಯೇ ಯಶಸ್ಸು?

ವಿವಾದದಲ್ಲಿ ರಾಮ್​ ಚರಣ್​ ಪತ್ನಿ ಉಪಾಸನಾ; ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ