AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕ್ಕು ನಗಿಸುವ ಕಪಿಲ್​ ಶರ್ಮಾ ಶೋಗೆ ಹೊಸ ಟ್ವಿಸ್ಟ್​; ಯಾವಾಗಿಂದ ಶುರು ಆಗಲಿದೆ ನಗೆ ಹಬ್ಬ?

The Kapil Sharma Show: ಜುಲೈ ವೇಳೆಗೆ ವಾತಾವರಣ ಸಹಜ ಸ್ಥಿತಿಗೆ ಬರುವ ನಿರೀಕ್ಷೆ ಇದೆ. ಅದಕ್ಕೂ ಮುನ್ನವೇ ‘ದಿ ಕಪಿಲ್​ ಶರ್ಮಾ ಶೋ’ ಎರಡನೇ ಸೀಸನ್​ಗೆ ತೆರೆ ಹಿಂದಿನ ಸಿದ್ಧತೆಗಳು ನಡೆಯುತ್ತಿವೆ. ಜುಲೈ ಮೊದಲ ವಾರದಲ್ಲಿ ಇದರ ಶೂಟಿಂಗ್​ ಆರಂಭ ಆಗುವ ನಿರೀಕ್ಷೆ ಇದೆ.

ನಕ್ಕು ನಗಿಸುವ ಕಪಿಲ್​ ಶರ್ಮಾ ಶೋಗೆ ಹೊಸ ಟ್ವಿಸ್ಟ್​; ಯಾವಾಗಿಂದ ಶುರು ಆಗಲಿದೆ ನಗೆ ಹಬ್ಬ?
ದಿ ಕಪಿಲ್ ಶರ್ಮಾ ಶೋ
ಮದನ್​ ಕುಮಾರ್​
|

Updated on: May 30, 2021 | 9:40 AM

Share

ಹಿಂದಿ ಕಿರುತೆರೆ ಪ್ರೇಕ್ಷಕರಿಗೆ ನಗುವಿನ ನಳಪಾಕ ಬಡಿಸುವ ‘ದಿ ಕಪಿಲ್​ ಶರ್ಮಾ ಶೋ’ ಸಿಕ್ಕಾಪಟ್ಟೆ ಫೇಮಸ್​. ಹಾಸ್ಯ ಕಲಾವಿದ ಕಪಿಲ್​ ಶರ್ಮಾ ಅವರ ಸಾರಥ್ಯದಲ್ಲಿ ಮೂಡಿಬರುತ್ತಿದ್ದ ಈ ಕಾಮಿಡಿ ಕಾರ್ಯಕ್ರಮ 2021ರ ಫೆಬ್ರವರಿಯಲ್ಲಿ ಅಂತ್ಯವಾಗಿತ್ತು. ಮೊದಲ ಸೀಸನ್​ ಮುಗಿದ ಬಳಿಕ ಜನರು ಈ ಕಾರ್ಯಕ್ರಮವನ್ನು ಸಖತ್​ ಮಿಸ್​ ಮಾಡಿಕೊಳ್ಳುತ್ತಿದ್ದರು. ಬಳಿಕ ಲಾಕ್​ಡೌನ್​ ಕೂಡ ಜಾರಿ ಆಗಿದ್ದರಿಂದ ಎರಡನೇ ಸೀಸನ್​ ಆರಂಭಿಸುವುದು ತಡವಾಯ್ತು. ಈಗ ಕಪಿಲ್​ ಶರ್ಮಾ ಅಭಿಮಾನಿಗಳಿಗೆ ಗುಡ್​ ನ್ಯೂಸ್​ ಸಿಕ್ಕಿದೆ. ಶೀಘ್ರದಲ್ಲೇ ಈ ಕಾರ್ಯಕ್ರಮದ 2ನೇ ಸೀಸನ್​ ಆರಂಭ ಆಗಲಿದೆ.

ಕೊವಿಡ್​ ಎರಡನೇ ಅಲೆ ಜೋರಾಗಿರುವುದರಿಂದ ಸದ್ಯ ಲಾಕ್​ಡೌನ್​ ಜಾರಿಯಲ್ಲಿದೆ. ಹಾಗಾಗಿ ಸಿನಿಮಾ, ಧಾರಾವಾಹಿ, ರಿಯಾಲಿಟಿ ಶೋಗಳ ಶೂಟಿಂಗ್​ಗೆ ಬ್ರೇಕ್​ ಹಾಕಲಾಗಿದೆ. ಆದರೆ ಜುಲೈ ವೇಳೆಗೆ ವಾತಾವರಣ ಸಹಜ ಸ್ಥಿತಿಗೆ ಬರುವ ನಿರೀಕ್ಷೆ ಇದೆ. ಅದಕ್ಕೂ ಮುನ್ನವೇ ‘ದಿ ಕಪಿಲ್​ ಶರ್ಮಾ ಶೋ’ ಎರಡನೇ ಸೀಸನ್​ಗೆ ತೆರೆ ಹಿಂದಿನ ಸಿದ್ಧತೆಗಳು ನಡೆಯುತ್ತಿವೆ. ಜುಲೈ ಮೊದಲ ವಾರದಲ್ಲಿ ಇದರ ಶೂಟಿಂಗ್​ ಆರಂಭ ಆಗುವ ನಿರೀಕ್ಷೆ ಇದೆ.

ಈಗಾಗಲೇ ಅನೇಕ ಕಾಮಿಡಿ ಕಲಾವಿದರು ‘ದಿ ಕಪಿಲ್​ ಶರ್ಮಾ ಶೋ’ ಮೂಲಕ ಪ್ರೇಕ್ಷಕರನ್ನು ನಕ್ಕು ನಲಿಸಿದ್ದಾರೆ. ಕೃಷ್ಣ ಅಭಿಷೇಕ್​, ಕಿಕು ಶಾರದಾ, ಭಾರತಿ ಸಿಂಗ್​, ಸುಮನಾ ಚಕ್ರವರ್ತಿ, ಚಂದನ್​ ಪ್ರಭಾಕರ್​, ಅರ್ಚನಾ ಪುರಾನ್​ ಸಿಂಗ್​ ಜನಮನ ಗೆದ್ದಿದ್ದಾರೆ. ಇವರ ಜೊತೆಗೆ ಇನ್ನಷ್ಟು ಹೊಸ ಕಲಾವಿದರನ್ನು ಪರಿಚಯಿಸಲು ಕಪಿಲ್​ ಶರ್ಮಾ ಪ್ಲ್ಯಾನ್​ ಮಾಡಿಕೊಂಡಿದ್ದಾರೆ. ಆ ಬಗ್ಗೆ ಅವರು ಈ ಹಿಂದೆಯೇ ಸುಳಿವು ನೀಡಿದ್ದರು.

ಇಷ್ಟೇ ಅಲ್ಲದೆ, ಈ ಬಾರಿ ಹೊಸ ಸೀಸನ್​ನಲ್ಲಿ ಈ ಕಾರ್ಯಕ್ರಮದ ಫಾರ್ಮ್ಯಾಟ್​ ಕೂಡ ಬದಲಾಗಲಿದೆ ಎಂಬ ಮಾಹಿತಿ ಹಬ್ಬಿದೆ. ಹಾಗಾಗಿ ‘ದಿ ಕಪಿಲ್​ ಶರ್ಮಾ ಶೋ’ ಎರಡನೇ ಸೀಸನ್​ ಬಗ್ಗೆ ಭಾರಿ ಕುತೂಹಲ ನಿರ್ಮಾಣ ಆಗಿದೆ. ಸೋನಿ ವಾಹಿನಿಯಲ್ಲಿ ಈ ಶೋ ಪ್ರಸಾರ ಆಗಲಿದೆ. ಕೊವಿಡ್​ ಕಷ್ಟದ ಸಂದರ್ಭದಲ್ಲಿ ನಟ ಕಪಿಲ್​ ಶರ್ಮಾ ಅವರು ಕರ್ನಾಟಕದ ಅನೇಕ ಆಸ್ಪತ್ರೆಗಳಿಗೆ ಆಕ್ಸಿಜನ್​ ಬಸ್​ಗಳನ್ನು ನೀಡಿದ್ದಾರೆ. ಆ ಮೂಲಕವೂ ಅವರು ಜನರ ಮನ ಗೆದ್ದಿದ್ದಾರೆ.

ಇದನ್ನೂ ಓದಿ:

ಬಾಲಿವುಡ್ ನಟರಾದ ಭೂಮಿ ಪಡ್ನೇಕರ್, ಕಪಿಲ್ ಶರ್ಮಾ ಕರ್ನಾಟಕದ ನೆರವಿಗೆ ಧಾವಿಸಿದ್ದಾರೆ

ವಿಚಿತ್ರ ಕಾಯಿಲೆ ಹಾಗೂ ನಿರುದ್ಯೋಗಕ್ಕೆ ರೋಸಿಹೋದ ಕಿರುತೆರೆ ನಟಿ; ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ