AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕ್ಕು ನಗಿಸುವ ಕಪಿಲ್​ ಶರ್ಮಾ ಶೋಗೆ ಹೊಸ ಟ್ವಿಸ್ಟ್​; ಯಾವಾಗಿಂದ ಶುರು ಆಗಲಿದೆ ನಗೆ ಹಬ್ಬ?

The Kapil Sharma Show: ಜುಲೈ ವೇಳೆಗೆ ವಾತಾವರಣ ಸಹಜ ಸ್ಥಿತಿಗೆ ಬರುವ ನಿರೀಕ್ಷೆ ಇದೆ. ಅದಕ್ಕೂ ಮುನ್ನವೇ ‘ದಿ ಕಪಿಲ್​ ಶರ್ಮಾ ಶೋ’ ಎರಡನೇ ಸೀಸನ್​ಗೆ ತೆರೆ ಹಿಂದಿನ ಸಿದ್ಧತೆಗಳು ನಡೆಯುತ್ತಿವೆ. ಜುಲೈ ಮೊದಲ ವಾರದಲ್ಲಿ ಇದರ ಶೂಟಿಂಗ್​ ಆರಂಭ ಆಗುವ ನಿರೀಕ್ಷೆ ಇದೆ.

ನಕ್ಕು ನಗಿಸುವ ಕಪಿಲ್​ ಶರ್ಮಾ ಶೋಗೆ ಹೊಸ ಟ್ವಿಸ್ಟ್​; ಯಾವಾಗಿಂದ ಶುರು ಆಗಲಿದೆ ನಗೆ ಹಬ್ಬ?
ದಿ ಕಪಿಲ್ ಶರ್ಮಾ ಶೋ
ಮದನ್​ ಕುಮಾರ್​
|

Updated on: May 30, 2021 | 9:40 AM

Share

ಹಿಂದಿ ಕಿರುತೆರೆ ಪ್ರೇಕ್ಷಕರಿಗೆ ನಗುವಿನ ನಳಪಾಕ ಬಡಿಸುವ ‘ದಿ ಕಪಿಲ್​ ಶರ್ಮಾ ಶೋ’ ಸಿಕ್ಕಾಪಟ್ಟೆ ಫೇಮಸ್​. ಹಾಸ್ಯ ಕಲಾವಿದ ಕಪಿಲ್​ ಶರ್ಮಾ ಅವರ ಸಾರಥ್ಯದಲ್ಲಿ ಮೂಡಿಬರುತ್ತಿದ್ದ ಈ ಕಾಮಿಡಿ ಕಾರ್ಯಕ್ರಮ 2021ರ ಫೆಬ್ರವರಿಯಲ್ಲಿ ಅಂತ್ಯವಾಗಿತ್ತು. ಮೊದಲ ಸೀಸನ್​ ಮುಗಿದ ಬಳಿಕ ಜನರು ಈ ಕಾರ್ಯಕ್ರಮವನ್ನು ಸಖತ್​ ಮಿಸ್​ ಮಾಡಿಕೊಳ್ಳುತ್ತಿದ್ದರು. ಬಳಿಕ ಲಾಕ್​ಡೌನ್​ ಕೂಡ ಜಾರಿ ಆಗಿದ್ದರಿಂದ ಎರಡನೇ ಸೀಸನ್​ ಆರಂಭಿಸುವುದು ತಡವಾಯ್ತು. ಈಗ ಕಪಿಲ್​ ಶರ್ಮಾ ಅಭಿಮಾನಿಗಳಿಗೆ ಗುಡ್​ ನ್ಯೂಸ್​ ಸಿಕ್ಕಿದೆ. ಶೀಘ್ರದಲ್ಲೇ ಈ ಕಾರ್ಯಕ್ರಮದ 2ನೇ ಸೀಸನ್​ ಆರಂಭ ಆಗಲಿದೆ.

ಕೊವಿಡ್​ ಎರಡನೇ ಅಲೆ ಜೋರಾಗಿರುವುದರಿಂದ ಸದ್ಯ ಲಾಕ್​ಡೌನ್​ ಜಾರಿಯಲ್ಲಿದೆ. ಹಾಗಾಗಿ ಸಿನಿಮಾ, ಧಾರಾವಾಹಿ, ರಿಯಾಲಿಟಿ ಶೋಗಳ ಶೂಟಿಂಗ್​ಗೆ ಬ್ರೇಕ್​ ಹಾಕಲಾಗಿದೆ. ಆದರೆ ಜುಲೈ ವೇಳೆಗೆ ವಾತಾವರಣ ಸಹಜ ಸ್ಥಿತಿಗೆ ಬರುವ ನಿರೀಕ್ಷೆ ಇದೆ. ಅದಕ್ಕೂ ಮುನ್ನವೇ ‘ದಿ ಕಪಿಲ್​ ಶರ್ಮಾ ಶೋ’ ಎರಡನೇ ಸೀಸನ್​ಗೆ ತೆರೆ ಹಿಂದಿನ ಸಿದ್ಧತೆಗಳು ನಡೆಯುತ್ತಿವೆ. ಜುಲೈ ಮೊದಲ ವಾರದಲ್ಲಿ ಇದರ ಶೂಟಿಂಗ್​ ಆರಂಭ ಆಗುವ ನಿರೀಕ್ಷೆ ಇದೆ.

ಈಗಾಗಲೇ ಅನೇಕ ಕಾಮಿಡಿ ಕಲಾವಿದರು ‘ದಿ ಕಪಿಲ್​ ಶರ್ಮಾ ಶೋ’ ಮೂಲಕ ಪ್ರೇಕ್ಷಕರನ್ನು ನಕ್ಕು ನಲಿಸಿದ್ದಾರೆ. ಕೃಷ್ಣ ಅಭಿಷೇಕ್​, ಕಿಕು ಶಾರದಾ, ಭಾರತಿ ಸಿಂಗ್​, ಸುಮನಾ ಚಕ್ರವರ್ತಿ, ಚಂದನ್​ ಪ್ರಭಾಕರ್​, ಅರ್ಚನಾ ಪುರಾನ್​ ಸಿಂಗ್​ ಜನಮನ ಗೆದ್ದಿದ್ದಾರೆ. ಇವರ ಜೊತೆಗೆ ಇನ್ನಷ್ಟು ಹೊಸ ಕಲಾವಿದರನ್ನು ಪರಿಚಯಿಸಲು ಕಪಿಲ್​ ಶರ್ಮಾ ಪ್ಲ್ಯಾನ್​ ಮಾಡಿಕೊಂಡಿದ್ದಾರೆ. ಆ ಬಗ್ಗೆ ಅವರು ಈ ಹಿಂದೆಯೇ ಸುಳಿವು ನೀಡಿದ್ದರು.

ಇಷ್ಟೇ ಅಲ್ಲದೆ, ಈ ಬಾರಿ ಹೊಸ ಸೀಸನ್​ನಲ್ಲಿ ಈ ಕಾರ್ಯಕ್ರಮದ ಫಾರ್ಮ್ಯಾಟ್​ ಕೂಡ ಬದಲಾಗಲಿದೆ ಎಂಬ ಮಾಹಿತಿ ಹಬ್ಬಿದೆ. ಹಾಗಾಗಿ ‘ದಿ ಕಪಿಲ್​ ಶರ್ಮಾ ಶೋ’ ಎರಡನೇ ಸೀಸನ್​ ಬಗ್ಗೆ ಭಾರಿ ಕುತೂಹಲ ನಿರ್ಮಾಣ ಆಗಿದೆ. ಸೋನಿ ವಾಹಿನಿಯಲ್ಲಿ ಈ ಶೋ ಪ್ರಸಾರ ಆಗಲಿದೆ. ಕೊವಿಡ್​ ಕಷ್ಟದ ಸಂದರ್ಭದಲ್ಲಿ ನಟ ಕಪಿಲ್​ ಶರ್ಮಾ ಅವರು ಕರ್ನಾಟಕದ ಅನೇಕ ಆಸ್ಪತ್ರೆಗಳಿಗೆ ಆಕ್ಸಿಜನ್​ ಬಸ್​ಗಳನ್ನು ನೀಡಿದ್ದಾರೆ. ಆ ಮೂಲಕವೂ ಅವರು ಜನರ ಮನ ಗೆದ್ದಿದ್ದಾರೆ.

ಇದನ್ನೂ ಓದಿ:

ಬಾಲಿವುಡ್ ನಟರಾದ ಭೂಮಿ ಪಡ್ನೇಕರ್, ಕಪಿಲ್ ಶರ್ಮಾ ಕರ್ನಾಟಕದ ನೆರವಿಗೆ ಧಾವಿಸಿದ್ದಾರೆ

ವಿಚಿತ್ರ ಕಾಯಿಲೆ ಹಾಗೂ ನಿರುದ್ಯೋಗಕ್ಕೆ ರೋಸಿಹೋದ ಕಿರುತೆರೆ ನಟಿ; ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ