AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ 2’ ಕಲೆಕ್ಷನ್; ಮೊದಲ ದಿನ 75 ಲಕ್ಷ, ನಂತರ ಎರಡು ದಿನ ಮ್ಯಾಜಿಕ್

ದಿ ಕೇರಳ ಸ್ಟೋರಿ 2 ಸಿನಿಮಾ ವಿವಾದಗಳ ನಡುವೆಯೂ ತೆರೆಕಂಡಿದೆ. ಲವ್ ಜಿಹಾದ್ ಕಥಾಹಂದರದಿಂದಾಗಿ ಕೋರ್ಟ್ ತಡೆಯನ್ನು ಎದುರಿಸಿತ್ತು. ಮೊದಲ ದಿನ ಕೇವಲ 75 ಲಕ್ಷ ರೂ. ಗಳಿಕೆ ಮಾಡಿದರೂ, ಶನಿವಾರ ಮತ್ತು ಭಾನುವಾರ ಭರ್ಜರಿ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದೆ. ಈ ಚಿತ್ರದ ಯಶಸ್ಸು ವಿವಾದಗಳನ್ನು ಮೀರಿ ಬೆಳೆದಿದೆ. ಉಲ್ಕಾ ಗುಪ್ತಾ ನಟನೆಯ ಈ ಸಿನಿಮಾ ಪ್ರೇಕ್ಷಕರ ಗಮನ ಸೆಳೆದಿದೆ.

‘ದಿ ಕೇರಳ ಸ್ಟೋರಿ 2’ ಕಲೆಕ್ಷನ್; ಮೊದಲ ದಿನ 75 ಲಕ್ಷ, ನಂತರ ಎರಡು ದಿನ ಮ್ಯಾಜಿಕ್
ಕೇರಳ ಸ್ಟೋರಿ
ರಾಜೇಶ್ ದುಗ್ಗುಮನೆ
|

Updated on: Mar 02, 2026 | 9:05 AM

Share

‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದವು. ಈಗ ‘ದಿ ಕೇರಳ ಸ್ಟೋರಿ 2’ ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರ ಕೂಡ ಸಾಕಷ್ಟು ವಿವಾದಗಳನ್ನು ಸೃಷ್ಟಿಸಿದೆ. ಈ ಚಿತ್ರದ ರಿಲೀಸ್​​ಗೆ ಕೋರ್ಟ್ ತಡೆನೀಡಿತ್ತು. ಆ ಬಳಿಕ ತೆರವನ್ನು ತೆಗೆಯಲಾಯಿತು. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು 75 ಲಕ್ಷ ರೂಪಾಯಿ ಮಾತ್ರ. ಆದರೆ, ಶನಿವಾರ ಹಾಗೂ ಭಾನುವಾರ ಸಿನಿಮಾ ಬಾಕ್ಸ್ ಆಫೀಸ್​​​ನಲ್ಲಿ ಧೂಳೆಬ್ಬಿಸಿದೆ.

‘ದಿ ಕೇರಳ ಸ್ಟೋರಿ 2’ ಚಿತ್ರದಲ್ಲಿ ಉಲ್ಕಾ ಗುಪ್ತಾ, ಅದಿತಿ ಭಾಟಿಯಾ, ಐಶ್ವರ್ಯಾ ಓಝಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಕಾಮಾಖ್ಯ ನಾರಾಯಣ್ ಸಿಂಗ್ ನಿರ್ದೇಶನ ಮಾಡಿದ್ದಾರೆ.ಈ ಚಿತ್ರದ ರಿಲೀಸ್​ಗೆ ಕೇರಳ ಹೈಕೋರ್ಟ್ ತಡೆ ನೀಡಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಮರು ವಿಚಾರಣೆ ನಡೆಸಿ, ಚಿತ್ರದ ಬಿಡುಗಡೆಗೆ ಅನುಮತಿ ನೀಡಿತ್ತು. ಶುಕ್ರವಾರ ಸಿನಿಮಾ ತೆರೆಗೆ ಬಂದಿದೆ.

ಮೊದಲ ದಿನ ಈ ಚಿತ್ರ 75 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಶನಿವಾರ ಹಾಗೂ ಭಾನುವಾರ ಅನುಕ್ರಮವಾಗಿ 4.65 ಕೋಟಿ ರೂಪಾಯಿ ಹಾಗೂ 5 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಚಿತ್ರದ ಕಲೆಕ್ಷನ್ ಅಲ್ಲಿ ಏರಿಕೆ ಕಂಡಿದೆ. ‘ದಿ ಕೇರಳ ಸ್ಟೋರಿ 2’ ಸಿನಿಮಾದಲ್ಲಿ ಲವ್ ಜಿಹಾದ್ ಕುರಿತ ಕಥೆಯನ್ನು ಹೇಳಲಾಗುತ್ತಿದೆ. ಈ ಕಾರಣದಿಂದ ಸಿನಿಮಾ ವಿವಾದ ಸೃಷ್ಟಿಸಿದೆ.

ಇದನ್ನೂ ಓದಿ: ವಿವಾದದ ನಡುವೆ ‘ದಿ ಕೇರಳ ಸ್ಟೋರಿ 2’ ರಿಲೀಸ್; ಹೀನಾಯ ಕಲೆಕ್ಷನ್

ಈ ಮೊದಲು ರಿಲೀಸ್ ಆಗಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ, ಹಿಂದೂ ಯುವತಿಯರನ್ನು ಯಾವ ರೀತಿಯಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರಿಸಿ, ಅವರನ್ನು ಐಸಿಸ್​​ಗೆ ಸೇರ್ಪಡೆ ಮಾಡುತ್ತಾರೆ ಎಂಬುದನ್ನು ತೋರಿಸಲಾಗಿತ್ತು. ಈ ಚಿತ್ರಕ್ಕೆ ಪಶ್​ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳು ಬ್ಯಾನ್ ಹೇರುವ ಪ್ರಯತ್ನ ಮಾಡಿ ವಿಫಲರಾಗಿದ್ದವು. ಈಗ ವಿಪುಲ್ ಅಮೃತ್​ಲಾಲ್ ಶಾ ನಿರ್ಮಾಣದ ಸಿನಿಮಾ ವಿವಾದ ಸೃಷ್ಟಿಸುತ್ತಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ ಎಷ್ಟಾಗುತ್ತೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು