AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಬೆಂಗಳೂರಲ್ಲಿ ಮೊದಲ ದಿನ 150 ಶೋ ಮೀಸಲು; ಟಿಕೆಟ್​ ಬುಕಿಂಗ್​ ನೀರಸ

The Kerala Story Advance Booking: ಟ್ರೇಲರ್​ ಮೂಲಕ ವಿವಾದ ಸೃಷ್ಟಿಸಿರುವ ‘ದಿ ಕೇರಳ ಸ್ಟೋರಿ’ ಸಿನಿಮಾದ ಟಿಕೆಟ್​ ಬುಕಿಂಗ್​ಗೆ ಪ್ರೇಕ್ಷಕರು ಹೆಚ್ಚು ಆಸಕ್ತಿ ತೋರಿಸುತ್ತಿಲ್ಲ. ಹಾಗಾಗಿ ಮೊದಲ ದಿನ ಹೆಚ್ಚು ಕಲೆಕ್ಷನ್​ ಆಗುವುದು ಅನುಮಾನ.

The Kerala Story: ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಬೆಂಗಳೂರಲ್ಲಿ ಮೊದಲ ದಿನ 150 ಶೋ ಮೀಸಲು; ಟಿಕೆಟ್​ ಬುಕಿಂಗ್​ ನೀರಸ
‘ದಿ ಕೇರಳ ಸ್ಟೋರಿ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: May 04, 2023 | 5:22 PM

Share

ಮುಖ್ಯಾಂಶಗಳು

  • ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಮುಂಬೈನಲ್ಲಿ 320ಕ್ಕೂ ಅಧಿಕ ಶೋಗಳು ಮೀಸಲಾಗಿವೆ
  • ದೆಹಲಿಯಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾಗೆ 450ಕ್ಕೂ ಅಧಿಕ ಶೋಗಳು ಸಿಕ್ಕಿವೆ.
  • ಬೆಂಗಳೂರಿನಲ್ಲಿ ಶುಕ್ರವಾರ ‘ದಿ ಕೇರಳ ಸ್ಟೋರಿ’ ಸಿನಿಮಾಗೆ ಬರೋಬ್ಬರಿ 150 ಶೋಗಳು

ಭಾರಿ ಚರ್ಚೆ ಹುಟ್ಟುಹಾಕಿರುವ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ರಿಲೀ​ಸ್​ಗೆ ಕೆಲವೇ ಗಂಟೆಗಳು ಬಾಕಿ ಉಳಿದುಕೊಂಡಿವೆ. ಮೇ 5ರಂದು ದೇಶಾದ್ಯಂತ ಈ ಸಿನಿಮಾ ರಿಲೀಸ್​ ಆಗಲಿದೆ. ಎಲ್ಲ ಪ್ರಮುಖ ನಗರಗಳಲ್ಲಿ ಬುಕಿಂಗ್​ ಓಪನ್​ ಆಗಿದೆ. ಬೆಂಗಳೂರಿನಲ್ಲಿ ಶುಕ್ರವಾರ ‘ದಿ ಕೇರಳ ಸ್ಟೋರಿ’ ಸಿನಿಮಾಗೆ ಬರೋಬ್ಬರಿ 150 ಶೋಗಳು ಮೀಸಲಾಗಿವೆ. ಆದರೆ ಪ್ರೇಕ್ಷಕರು ಟಿಕೆಟ್​ ಬುಕ್​ ಮಾಡುವಲ್ಲಿ ಹೆಚ್ಚೇನೂ ಆಸಕ್ತಿ ತೋರಿಸುತ್ತಿಲ್ಲ. ಬಹುತೇಕ ಎಲ್ಲ ನಗರಗಳಲ್ಲೂ ಇದೇ ಪರಿಸ್ಥಿತಿ ಇದೆ. ಹಾಗಾಗಿ ಮೊದಲ ದಿನ ಈ ಚಿತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ (The Kerala Story Box Office Collection) ಆಗುವುದು ಅನುಮಾನ ಎನ್ನಲಾಗುತ್ತಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ನಟಿ ಅದಾ ಶರ್ಮಾ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಸುದೀಪ್ತೋ ಸೇನ್​ (Sudipto Sen) ಅವರು ನಿರ್ದೇಶನ ಮಾಡಿದ್ದಾರೆ.

ಕೇರಳದಲ್ಲಿ ಯುವತಿಯರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿ, ನಂತರ ಅವರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಿಸಲಾಗುತ್ತಿದೆ ಎಂಬ ವಿಷಯದ ಮೇಲೆ ‘ದಿ ಕೇರಳ ಸ್ಟೋರಿ’ ಸಿನಿಮಾ ಸಿದ್ಧಗೊಂಡಿದೆ. ಟ್ರೇಲರ್​ನಲ್ಲೇ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಈ ಮಾಹಿತಿ ನಿಜವಲ್ಲ ಎಂದು ಅನೇಕರು ವಾದಿಸುತ್ತಿದ್ದಾರೆ. ಸಿನಿಮಾದಲ್ಲಿ ತೋರಿಸಿರುವುದು ನಿಜವೋ ಅಥವಾ ಸುಳ್ಳೋ ಎಂಬುದನ್ನು ತಿಳಿಯಲು ಪ್ರೇಕ್ಷಕರಲ್ಲಿ ಭಾರಿ ಕೌತುಕ ಸೃಷ್ಟಿ ಆಗಿದೆ.

ಇದನ್ನೂ ಓದಿ: Adah Sharma: ‘ಮೊದಲು ಸಿನಿಮಾ ನೋಡಿ, ಆಮೇಲೆ ಮಾತಾಡಿ’: ‘ದಿ ಕೇರಳ ಸ್ಟೋರಿ’ ವಿವಾದಕ್ಕೆ ಅದಾ ಶರ್ಮಾ ಪ್ರತಿಕ್ರಿಯೆ

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ತಡೆ ನೀಡಿ ಎಂದು ಸಲ್ಲಿಕೆ ಆಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ
Image
‘ದಿ ಕೇರಳ ಸ್ಟೋರಿ’ ಟ್ರೇಲರ್ ವಿರುದ್ಧ ಅಸಮಾಧಾನಗೊಂಡ ಕೇರಳ ಸಿಎಂ; ಚಿತ್ರಕ್ಕೆ ಬೀಳಲಿದೆ ತಡೆ?
Image
‘ಹಿಜಾಬ್ ಹಾಕಿದವರ ಮೇಲೆ ಅತ್ಯಾಚಾರ ಆಗಲ್ಲ, ಅಲ್ಲಾಹ್ ಮಾತ್ರ ಕಾಪಾಡುವವನು’; ಚರ್ಚೆ ಹುಟ್ಟುಹಾಕಿದ ‘ದಿ ಕೇರಳ ಸ್ಟೋರಿ’ ಟ್ರೇಲರ್
Image
The Kerala Story: ‘ದಿ ಕೇರಳ ಸ್ಟೋರಿ’ ವಿವಾದ: ‘ನಾವು ಸಾಕ್ಷಿ ಇಲ್ಲದೇ ಏನನ್ನೂ ಹೇಳಲ್ಲ’ ಎಂದ ನಿರ್ಮಾಪಕ ವಿಪುಲ್​ ಶಾ

ಶುಕ್ರವಾರ (ಮೇ 5) ದೆಹಲಿಯಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾಗೆ 450ಕ್ಕೂ ಅಧಿಕ ಶೋಗಳು ಸಿಕ್ಕಿವೆ. ಮುಂಬೈನಲ್ಲಿ 320ಕ್ಕೂ ಅಧಿಕ ಶೋಗಳು ಮೀಸಲಾಗಿವೆ. ಕೇರಳದ ಕೊಚ್ಚಿಯಲ್ಲಿ ಸಿನಿಮಾ ಬಿಡುಗಡೆ ಬಗ್ಗೆ ಗೊಂದಲ ಏರ್ಪಟ್ಟಿದೆ. ದೇಶದ ಪ್ರಮುಖ ನಗರಗಳಲ್ಲಿ ಈ ಚಿತ್ರದ ಬಿಡುಗಡೆ ಬಳಿಕ ಗಲಭೆ ಉಂಟಾಗುವ ಸಾಧ್ಯತೆ ಇರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಆಯಾ ಸರ್ಕಾರಗಳು ಎಚ್ಚರಿಕೆ ವಹಿಸುತ್ತಿವೆ.

ಇದನ್ನೂ ಓದಿ: The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿನ ಮಾಹಿತಿ ನಿಜ ಅಂತ ಸಾಬೀತು ಮಾಡಿದ್ರೆ 1 ಕೋಟಿ ರೂ. ಬಹುಮಾನ

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ 2022ರಲ್ಲಿ ಬಿಡುಗಡೆ ಆದಾಗ ಮೊದಲ ದಿನ ನೀರಸ ಪ್ರತಿಕ್ರಿಯೆ ಸಿಕ್ಕಿತ್ತು. ಆದರೆ ನಂತರದ ದಿನಗಳಲ್ಲಿ ಬಾಯಿ ಮಾತಿನ ಪ್ರಚಾರ ಸಿಕ್ಕಿದ್ದರಿಂದ ಆ ಸಿನಿಮಾ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿತ್ತು. ‘ದಿ ಕೇರಳ ಸ್ಟೋರಿ’ ಕೂಡ ಮುಂದಿನ ದಿನಗಳಲ್ಲಿ ಉತ್ತಮ ಕಮಾಯಿ ಮಾಡುವ ಸಾಧ್ಯತೆ ಇದೆ. ಮೊದಲ ದಿನ ಈ ಚಿತ್ರಕ್ಕೆ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ