AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಆವರಣದಲ್ಲಿ ‘ದಿ ಕೇರಳ ಸ್ಟೋರಿ’ ಪ್ರಚಾರ; ಮಲಯಾಳಿಗಳೇ ಟಾರ್ಗೆಟ್​

Kollur Mookambika Temple: ಮೂಕಾಂಬಿಕಾ ದೇವಾಲಯದ ದ್ವಾರ ಹಾಗೂ ಆವರಣದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾದ ಬ್ಯಾನರ್ ಅಳವಡಿಸಲಾಗಿದೆ. ಇಂಗ್ಲಿಷ್​ ಮತ್ತು ಮಲಯಾಳಂ ಭಾಷೆಯಲ್ಲಿ ಈ ಬ್ಯಾನರ್​ಗಳನ್ನು ಬರೆಸಲಾಗಿದೆ.

The Kerala Story: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಆವರಣದಲ್ಲಿ ‘ದಿ ಕೇರಳ ಸ್ಟೋರಿ’ ಪ್ರಚಾರ; ಮಲಯಾಳಿಗಳೇ ಟಾರ್ಗೆಟ್​
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ
ಮದನ್​ ಕುಮಾರ್​
|

Updated on: May 15, 2023 | 5:07 PM

Share

ಅನೇಕ ಕಾರಣಗಳಿಂದಾಗಿ ‘ದಿ ಕೇರಳ ಸ್ಟೋರಿ’ ಸಿನಿಮಾ (The Kerala Story) ವಿವಾದ ಸೃಷ್ಟಿ ಮಾಡಿದೆ. ಹಿಂದೂಪರ ಸಂಘಟನೆಗಳು ಈ ಚಿತ್ರಕ್ಕೆ ಬೆಂಬಲ ಸೂಚಿಸಿವೆ. ಆದರೆ ಇದೊಂದು ಪ್ರೊಪೊಗಾಂಡ ಸಿನಿಮಾ ಎಂದು ಅನೇಕರು ಟೀಕಿಸಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಗಳಿಸಿದೆ. ‘ದಿ ಕೇರಳ ಸ್ಟೋರಿ’ ಚಿತ್ರದ ಬಗ್ಗೆ ಕೊಲ್ಲೂರಿನಲ್ಲಿ ಪ್ರಚಾರ ಮಾಡಲಾಗುತ್ತಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ (Kollur Mookambika Temple) ಆವರಣದಲ್ಲಿ ಈ ಚಿತ್ರಕ್ಕೆ ಸಂಬಂಧಿಸಿದ ಬ್ಯಾನರ್​ ಇರಿಸಲಾಗಿದೆ. ಇಂಗ್ಲಿಷ್​ ಮತ್ತು ಮಲಯಾಳಂ ಭಾಷೆಯಲ್ಲಿ ಬರೆದಿರುವ ಬ್ಯಾನರ್​ಗಳನ್ನು ಇರಿಸಲಾಗಿದ್ದು, ಕೊಲ್ಲೂರಿಗೆ (Kollur) ಬರುವ ಪ್ರವಾಸಿಗರ ಗಮನ ಸೆಳೆಯಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲೂ ಈ ಬ್ಯಾನರ್​ಗಳು ವೈರಲ್​ ಆಗಿವೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಪ್ರತಿದಿನ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಅದರಲ್ಲೂ ಕೇರಳದಿಂದ ಅನೇಕರು ಬಂದು ದೇವಿಯ ದರ್ಶನ ಪಡೆಯುತ್ತಾರೆ. ಮಲಯಾಳಿಗಳನ್ನೇ ಉದ್ದೇಶಿಸಿ ಈ ಬ್ಯಾನರ್​ಗಳನ್ನು ಬರೆಸಲಾಗಿದೆ. ‘ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ಕೇರಳ ಸ್ಟೋರಿ ನೋಡಿ’ ಎಂದು ಇದರಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: Adah Sharma: ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾಗೆ ಅಪಘಾತ; ನಿರ್ದೇಶಕನಿಗೂ ಗಾಯ

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
Image
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Image
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
Image
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮೂಕಾಂಬಿಕಾ ದೇವಾಲಯದ ದ್ವಾರ ಹಾಗೂ ಆವರಣದಲ್ಲಿ ಬ್ಯಾನರ್ ಅಳವಡಿಸಿದ್ದಾರೆ. ವಿನೋದ್ ಕೊಲ್ಲೂರು, ವಿಜಯ ಬಳಗಾರ್, ಸಂತೋಷ್ ಭಟ್, ಪ್ರಕಾಶ್ ಹಳ್ಳಿ ಬೇರು, ಹರೀಶ್ ಶೆಟ್ಟಿ ನೇತೃತ್ವದಲ್ಲಿ ಈ ಬ್ಯಾನರ್​ ಅಳವಡಿಕೆ ಮಾಡಲಾಗಿದೆ. ಕೇರಳದಲ್ಲಿ ನಡೆದಿತ್ತು ಎನ್ನಲಾದ ಮತಾಂತರ ಮತ್ತು ಲವ್​ ಜಿಹಾದ್​ ಘಟನೆಗಳನ್ನು ಆಧರಿಸಿ ‘ದಿ ಕೇರಳ ಸ್ಟೋರಿ’ ಸಿನಿಮಾ ಮಾಡಲಾಗಿದೆ. ಟೀಸರ್​ ಬಿಡುಗಡೆ ಆದಾಗಲೇ ಈ ಚಿತ್ರ ವಿವಾದ ಸೃಷ್ಟಿ ಮಾಡಿತ್ತು.

ಇದನ್ನೂ ಓದಿ: The Kerala Story: 136 ಕೋಟಿ ರೂಪಾಯಿಗೆ ಏರಿತು ‘ದಿ ಕೇರಳ ಸ್ಟೋರಿ’ ಕಲೆಕ್ಷನ್​; 2ನೇ ಭಾನುವಾರ ಬರೋಬ್ಬರಿ 23 ಕೋಟಿ ರೂ. ಗಳಿಕೆ

‘ದಿ ಕೇರಳ ಸ್ಟೋರಿ’ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಬಂಗಾರದ ಬೆಳೆ ತೆಗೆದಿದೆ. ಈ ಸಿನಿಮಾದ ಬಾಕ್ಸ್​ ಆಫೀಸ್​ ಬೇಟೆ ಮುಂದುವರಿದಿದೆ. ಸತತ 11 ದಿನಗಳ ಕಾಲ ಈ ಚಿತ್ರ ಯಶಸ್ವಿ ಪ್ರದರ್ಶನ ಕಂಡಿದೆ. ಇಂದಿಗೂ ಕೂಡ ಹಲವು ಕಡೆಗಳಲ್ಲಿ ಹೌಸ್​ಫುಲ್​ ಆಗುತ್ತಿದೆ. ಅದರ ಪರಿಣಾಮವಾಗಿ ಚಿತ್ರಕ್ಕೆ ಉತ್ತಮ ಕಮಾಯಿ ಆಗಿದೆ. ಅಚ್ಚರಿ ಎಂದರೆ 2ನೇ ಭಾನುವಾರ ಈ ಸಿನಿಮಾಗೆ ಅತಿ ಹೆಚ್ಚು ಹಣ ಹರಿದುಬಂದಿದೆ. ಮೇ 14ರಂದು ಬರೋಬ್ಬರಿ 23 ಕೋಟಿ ರೂಪಾಯಿ ಗಳಿಸಿದೆ. ಅಲ್ಲಿಗೆ ಚಿತ್ರದ ಒಟ್ಟು ಕಲೆಕ್ಷನ್​ 136.74 ಕೋಟಿ ರೂಪಾಯಿ ತಲುಪಿದೆ. ನಟಿ ಅದಾ ಶರ್ಮಾ ಅವರು ಈ ಸಿನಿಮಾದಿಂದ ಭಾರಿ ಜನಪ್ರಿಯತೆ ಪಡೆದಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು