AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: ಕೇರಳದ 32,000 ಹುಡುಗಿಯರನ್ನು ಇಸ್ಲಾಂಗೆ ಮತಾಂತರ ಮಾಡಲಾಗಿದೆ ಎಂದ ಸಿನಿಮಾ ಟೀಸರ್ ಮೇಲೆ ಕೇಸ್​

The Kerala Story teaser: ‘ದಿ ಕೇರಳ ಸ್ಟೋರಿ’ ಟೀಸರ್​ ಸಖತ್​ ವೈರಲ್​ ಆಗಿದೆ. ಕೇರಳವನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಕಾರಣದಿಂದ ಈ ಟೀಸರ್​ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

The Kerala Story: ಕೇರಳದ 32,000 ಹುಡುಗಿಯರನ್ನು ಇಸ್ಲಾಂಗೆ ಮತಾಂತರ ಮಾಡಲಾಗಿದೆ ಎಂದ ಸಿನಿಮಾ ಟೀಸರ್ ಮೇಲೆ ಕೇಸ್​
ಅದಾ ಶರ್ಮಾ
TV9 Web
| Edited By: |

Updated on:Nov 09, 2022 | 11:17 AM

Share

ಧರ್ಮದ ವಿಚಾರವನ್ನು ಇಟ್ಟುಕೊಂಡು ಮಾಡಿದ ಸಿನಿಮಾಗಳ ಕೊರಳಿಗೆ ವಿವಾದಗಳು ಹುಟ್ಟಿಕೊಳ್ಳುವುದು ಕಾಮನ್​ ಎಂಬಂತಾಗಿದೆ. ಈಗ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಕೂಡ ಕಾಂಟ್ರವರ್ಸಿ ಸೃಷ್ಟಿ ಮಾಡಿದೆ. ಕೆಲವೇ ದಿನಗಳ ಹಿಂದೆ ಈ ಚಿತ್ರದ ಟೀಸರ್​ ಬಿಡುಗಡೆ ಮಾಡಲಾಯಿತು. ಅದರಲ್ಲಿ ಪ್ರಸ್ತಾಪ ಮಾಡಲಾದ ವಿಚಾರಗಳು ಶಾಕಿಂಗ್​ ಆಗಿವೆ. ಕೇರಳದಲ್ಲಿ 32 ಸಾವಿರ ಹುಡುಗಿಯರನ್ನು ಇಸ್ಲಾಂ ಧರ್ಮಕ್ಕೆ ಮತಾಂತರ (Conversion) ಮಾಡಲಾಗಿದೆ ಹಾಗೂ ಅವರನ್ನು ವಿದೇಶಕ್ಕೆ ಕಳಿಸಿ ಭಯೋತ್ಪಾದಕ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂಬ ಡೈಲಾಗ್​ ಈ ಟೀಸರ್​ನಲ್ಲಿದೆ. ಇದು ವಿವಾದ ಹುಟ್ಟುಹಾಕಿದ್ದು, ಸೂಕ್ತ ತನಿಖೆ ನಡೆಸುವಂತೆ ಕೇರಳ ಪೊಲೀಸ್​ ಮಹಾ ನಿರ್ದೇಶಕ ಅನಿಲ್​ ಕಾಂತ್​ ಆದೇಶಿಸಿದ್ದಾರೆ. ಈ ಸಿನಿಮಾದಲ್ಲಿ ಖ್ಯಾತ ನಟಿ ಅದಾ ಶರ್ಮಾ (Adah Sharma) ಅವರು ನಟಿಸಿದ್ದಾರೆ.

‘ದಿ ಕೇರಳ ಸ್ಟೋರಿ’ ಟೀಸರ್​ ಸಖತ್​ ವೈರಲ್​ ಆಗಿದೆ. ಕೇರಳವನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಕಾರಣದಿಂದ ಈ ಟೀಸರ್​ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ‘ನನ್ನ ಹೆಸರು ಶಾಲಿನಿ ಉನ್ನಿಕೃಷ್ಣನ್​ ಆಗಿತ್ತು. ನರ್ಸ್​ ಆಗಿ ಜನರ ಸೇವೆ ಮಾಡಬೇಕು ಅಂತ ನಾನು ಬಯಸಿದ್ದೆ. ಈಗ ನಾನು ಫಾತಿಮಾ ಬಾ ಎಂಬ ಐಸಿಸ್​ ಭಯೋತ್ಪಾದಕಿ ಆಗಿದ್ದೇನೆ. ಅಫ್ಘಾನಿಸ್ತಾನದ ಜೈಲಿನಲ್ಲಿ ಇದ್ದೇನೆ’ ಎಂಬ ಡೈಲಾಗ್​ನೊಂದಿಗೆ ಈ ಟೀಸರ್​ ಆರಂಭ ಆಗುತ್ತದೆ.

‘ನಾನು ಒಬ್ಬಳೇ ಅಲ್ಲ. ನನ್ನಂತಹ 32 ಸಾವಿರ ಹುಡುಗಿಯರು ಮತಾಂತರಗೊಂಡು ಸಿರಿಯಾ ಮತ್ತು ಯೆಮನ್​ ಮರುಭೂಮಿಯಲ್ಲಿ ಸತ್ತಿದ್ದಾರೆ. ಕೇರಳದಲ್ಲಿ ಓರ್ವ ಸಿಂಪಲ್​ ಹುಡುಗಿಯನ್ನು ಅಪಾಯಕಾರಿ ಟೆರೆರಿಸ್ಟ್​ ಆಗಿ ಮಾಡುವ ಭಯಂಕರ ಆಟ ನಡೆದಿದೆ. ಅದು ಕೂಡ ಬಹಿರಂಗವಾಗಿ. ಇದನ್ನು ಯಾರೂ ತಡೆಯೋದಿಲ್ಲವೇ? ಇದು ನನ್ನ ಕಥೆ. ಇದು ಆ 32 ಸಾವಿರ ಹುಡುಗಿಯರ ಕಥೆ. ಇದು ಕೇರಳದ ಕಥೆ’ ಎಂಬ ಡೈಲಾಗ್​ ಮೂಲಕ ಟೀಸರ್​ ಕೊನೆಯಾಗುತ್ತದೆ.

ಇದನ್ನೂ ಓದಿ
Image
ಭಗವದ್ಗೀತೆಯಂತಿರುವ ಪುಸ್ತಕದೊಳಗೆ ಬೈಬಲ್ -ಕುರಾನ್ ವೈಭವೀಕರಣ: ಮಲೆನಾಡಿನಲ್ಲಿ ಮತಾಂತರದ ಹೊಸ ತಂತ್ರ
Image
Population Policy: ಮತಾಂತರಗೊಂಡವರಿಗೆ ಮೀಸಲಾತಿ ಸವಲತ್ತು ಸಲ್ಲದು; ಆರ್​ಎಸ್​ಎಸ್​ ನಾಯಕ ದತ್ತಾತ್ರೇಯ ಹೊಸಬಾಳೆ
Image
ಅನ್ಯಧರ್ಮಕ್ಕೆ ಮತಾಂತರಗೊಳ್ಳುವ SC, STಯವರಿಗೆ ಮೀಸಲಾತಿ ನೀಡಬೇಡಿ: ಸರ್ಕಾರಕ್ಕೆ VHP ರಾಷ್ಟ್ರೀಯ ಕಾರ್ಯಾಧ್ಯಕ್ಷ ಮನವಿ
Image
ಯುವಕನ ಬಲವಂತದ ಮತಾಂತರ ಪ್ರಕರಣ: ಮಾಜಿ ಕಾರ್ಪೊರೇಟರ್ ಸೇರಿ ಐವರ ಬಂಧನ, ಡೈವೋರ್ಸ್​ ದಂಧೆ ಬಯಲಿಗೆ

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:17 am, Wed, 9 November 22

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?