AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲೆಕ್ಷನ್ ವಿಷಯದಲ್ಲಿ ಎಡವಿದ ‘ರಾಜಾಸಾಬ್’; ಪ್ರಭಾಸ್ ಫ್ಯಾನ್ಸ್​ಗೆ ಶಾಕ್

The Raja Saab Box Office Collection: ‘ರಾಜಾಸಾಬ್’ ಸಿನಿಮಾ ಭಾನುವಾರದ ಕಲೆಕ್ಷನ್‌ನಲ್ಲಿ ಭಾರೀ ಕುಸಿತ ಕಂಡಿದೆ. ಮೊದಲ ದಿನ ದುಬಾರಿ ಟಿಕೆಟ್‌ನಿಂದ 53 ಕೋಟಿ ಗಳಿಸಿದ್ದರೂ, ಪ್ರೇಕ್ಷಕರ ನಿರಾಸೆಯಿಂದ ಒಟ್ಟಾರೆ ಗಳಿಕೆ 108 ಕೋಟಿಗೆ ಸೀಮಿತವಾಗಿದೆ. ಮಾರುತಿ ನಿರ್ದೇಶನದ ಪ್ರಭಾಸ್ ಅವರ ಈ ಹಾರರ್ ಕಾಮಿಡಿ ಚಿತ್ರ ನಿರೀಕ್ಷಿತ ಯಶಸ್ಸು ಗಳಿಸಿಲ್ಲ. ಮಿಶ್ರ ಪ್ರತಿಕ್ರಿಯೆ ಪಡೆದ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹಿನ್ನಡೆ ಅನುಭವಿಸಿದೆ.

ಕಲೆಕ್ಷನ್ ವಿಷಯದಲ್ಲಿ ಎಡವಿದ ‘ರಾಜಾಸಾಬ್’; ಪ್ರಭಾಸ್ ಫ್ಯಾನ್ಸ್​ಗೆ ಶಾಕ್
ಪ್ರಭಾಸ್-ಮಾರುತಿ
ರಾಜೇಶ್ ದುಗ್ಗುಮನೆ
|

Updated on:Jan 12, 2026 | 7:06 AM

Share

ಭಾನುವಾರದ ಕಲೆಕ್ಷನ್ ವಿಷಯದಲ್ಲಿ ‘ರಾಜಾಸಾಬ್’ ಸಿನಿಮಾ (Raja Saab) ಎಡವಿದೆ. ಮೊದಲ ದಿನ ಅದ್ದೂರಿ ಕಲೆಕ್ಷನ್ ಮಾಡಿದ್ದ ಈ ಚಿತ್ರ ನಂತರದ ದಿನಗಳಲ್ಲಿ ಕುಸಿತದ ಹಾಡಿ ಹಿಡಿಯಿತು. ಮೊದಲ ದಿನದ ದುಬಾರಿ ಟಿಕೆಟ್ ದರ ಚಿತ್ರಕ್ಕೆ ಸಹಕಾರಿ ಆಗಿದೆ. ಆದರೆ, ಸಿನಿಮಾ ನೋಡಿದ ಪ್ರೇಕ್ಷಕ ಖುಷಿಯಾಗಿಲ್ಲ. ಈ ಕಾರಣದಿಂದಲೇ ಸಿನಿಮಾದ ಗಳಿಕೆ ಕುಸಿತದ ಹಾದಿ ಹಿಡಿದಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟು ಎಂಬ ಬಗ್ಗೆ ಇಲ್ಲಿದೆ ವಿವರ.

‘ರಾಜಾಸಾಬ್’ ಸಿನಿಮಾ ಜನವರಿ 9ರಂದು ರಿಲೀಸ್ ಆಯಿತು. ಈ ಸಿನಿಮಾ ಹಾರರ್ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿತ್ತು. ಇದೇ ಮೊದಲ ಬಾರಿಗೆ ಅವರು ಈ ಶೈಲಿಯನ್ನು ಪ್ರಯತ್ನಿಸಿದ್ದರು. ಈ ಸಿನಿಮಾ ಜನರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಈಗ ಸಿನಿಮಾ ಭಾನುವಾರ ಕೇವಲ 20 ಕೋಟಿ ರೂಪಾಯಿ ಗಳಿಕೆ ಮಾಡಿದೆ.

‘ರಾಜಾಸಾಬ್’ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು 53 ಕೋಟಿ ರೂಪಾಯಿ. ಇದಕ್ಕೆ ಕಾರಣ ದುಬಾರಿ ಟಿಕೆಟ್ ದರ. ತೆಲುಗಿನಿಂದ 47 ಕೋಟಿ ರೂಪಾಯಿ ಆದರೆ, ಹಿಂದಿಯಿಂದ 6 ಕೋಟಿ ರೂಪಾಯಿ ಹರಿದು ಬಂದಿತ್ತು. ಇದಕ್ಕೆ ಕಾರಣವೂ ಇದೆ. ಹಿಂದಿಯಲ್ಲಿ ಪ್ರಭಾಸ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಸಿನಿಮಾನ ನೋಡಿದ್ದಾರೆ.

ಭಾನುವಾರ ಮಾತ್ರ ಥಿಯೇಟರ್​​ಗೆ ಹೋಗುವ ಪ್ರೇಕ್ಷಕರ ಸಂಖ್ಯೆ ಕಡಿಮೆ ಆಗಿದೆ. ಮೊದಲ ದಿನದ ಸಿನಿಮಾ ಟಿಕೆಟ್ ದರಕ್ಕೆ ಹೋಲಿಕೆ ಮಾಡಿದರೆ ಟಿಕೆಟ್ ದರ ಕೂಡ ಕಡಿಮೆ ಆಗಿದೆ.ಹೀಗಾಗಿ ಗಳಿಕೆಯಲ್ಲಿ ಇಳಿಕೆ ಕಂಡಿದೆ. ಭಾನುವಾರದ ಚಿತ್ರದ ಕಲೆಕ್ಷನ್ ಕೇವಲ 20 ಕೋಟಿ ರೂಪಾಯಿ ಮಾತ್ರ. ಚಿತ್ರದ ಒಟ್ಟಾರೆ ಗಳಿಕೆ 108 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ರಾಜಾಸಾಬ್’ ಚಿತ್ರದ ನಾಲ್ಕು ದಿನದ ಶೂಟ್​ಗೆ ಖರ್ಚಾಯ್ತು ನಾಲ್ಕು ಕೋಟಿ ರೂಪಾಯಿ

‘ಕಲ್ಕಿ 2898 ಎಡಿ’ ಸೂಪರ್ ಹಿಟ್ ಆದ ಬಳಿಕ ಪ್ರಭಾಸ್ ಒಪ್ಪಿಕೊಂಡ ಸಿನಿಮಾ ‘ರಾಜಾಸಾಬ್. ಈ ಚಿತ್ರವನ್ನು ಮಾರುತಿ ನಿರ್ದೇಶನ ಮಾಡಿದ್ದಾರೆ. ಸಿನಿಮಾ ರಿಲೀಸ್​​ಗೂ ಮೊದಲು ಅವರು ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಸಿನಿಮಾ ಅಂದುಕೊಂಡ ಮಟ್ಟಿಗೆ ಯಶಸ್ಸು ಕಾಣಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:05 am, Mon, 12 January 26

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?