ದಿ ರಾಜಾ ಸಾಬ್: ಹುಟ್ಟುಹಬ್ಬದ ದಿನ ಹಾರರ್ ಅವತಾರದಲ್ಲಿ ದರ್ಶನ ನೀಡಿದ ಪ್ರಭಾಸ್

ಪ್ರಭಾಸ್ ಅವರು ಇಂದು (ಅಕ್ಟೋಬರ್​ 23) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಅಭಿಮಾನಿಗಳಿಗಾಗಿ ‘ದಿ ರಾಜಾ ಸಾಬ್’ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮೋಷನ್ ಪೋಸ್ಟರ್​ ನೋಡಿದ ಅಭಿಮಾನಿಗಳಿಗೆ ಖುಷಿ ಆಗಿದೆ. ಇದು ಹಾರರ್ ಸಿನಿಮಾ ಆದ್ದರಿಂದ ನಿರೀಕ್ಷೆ ಜಾಸ್ತಿ ಆಗಿದೆ. ಮಾರುತಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ದಿ ರಾಜಾ ಸಾಬ್: ಹುಟ್ಟುಹಬ್ಬದ ದಿನ ಹಾರರ್ ಅವತಾರದಲ್ಲಿ ದರ್ಶನ ನೀಡಿದ ಪ್ರಭಾಸ್
ಪ್ರಭಾಸ್
Follow us
|

Updated on: Oct 23, 2024 | 3:03 PM

ನಟ ಪ್ರಭಾಸ್ ಅವರಿಗೆ ಇಂದು (ಅ.23) ಜನ್ಮದಿನದ ಸಂಭ್ರಮ. ಈ ಖುಷಿಯನ್ನು ಹೆಚ್ಚಿಸಲು ‘ದಿ ರಾಜಾ ಸಾಬ್’ ಸಿನಿಮಾ ತಂಡದವರು ಹೊಸ ಮೋಷನ್ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಈ ಮೊದಲು ಹೊರಬಂದಿದ್ದ ಪೋಸ್ಟರ್​ನಲ್ಲಿ ಪ್ರಭಾಸ್​ ಅವರು ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದರು. ಆದರೆ ಈಗ ಅವರು ಹಾರರ್​ ಲುಕ್​ನಲ್ಲಿ ಬಂದಿದ್ದಾರೆ. ಅವರ ಹೊಸ ಗೆಟಪ್​ ನೋಡಿ ಅಭಿಮಾನಿಗಳಿಗೆ ಥ್ರಿಲ್ ಆಗಿದೆ. ‘ದಿ ರಾಜಾ ಸಾಬ್’ ಸಿನಿಮಾವನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಮಾರುತಿ ನಿರ್ದೇಶನದ ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ.

ಇದುವರೆಗೂ ಆ್ಯಕ್ಷನ್, ಫ್ಯಾಂಟಸಿ, ಲವ್​ಸ್ಟೋರಿ ಸಿನಿಮಾಗಳ ಮೂಲಕ ಪ್ರಭಾಸ್​ ಅವರು ಜನರನ್ನು ರಂಜಿಸಿದ್ದರು. ಈಗ ಇದೇ ಮೊದಲ ಬಾರಿಗೆ ಅವರು ಹಾರರ್​ ಸಿನಿಮಾವನ್ನು ಪ್ರಯತ್ನಿಸುತ್ತಿದ್ದಾರೆ. ಅವರ ಬರ್ತ್​ಡೇ ಪ್ರಯುಕ್ತ ರಿಲೀಸ್ ಆಗಿರುವ ಮೋಷನ್ ಪೋಸ್ಟರ್​ನಲ್ಲಿ ಹಾರರ್ ಫೀಲ್​ ಇದೆ. ಇದರಲ್ಲಿ ಕಥೆಯ ಬಗ್ಗೆ ಯಾವುದೇ ಸುಳಿವು ನೀಡಿಲ್ಲ. ಅಭಿಮಾನಿಗಳು ಈ ಮೋಷನ್ ಪೋಸ್ಟರ್​ಗೆ ಪಾಸಿಟಿವ್ ಆಗಿ ಕಮೆಂಟ್ ಮಾಡುತ್ತಿದ್ದಾರೆ.

View this post on Instagram

A post shared by Prabhas (@actorprabhas)

ಪ್ರಭಾಸ್ ಅವರಿಗೆ ಈ ವರ್ಷದ ಹುಟ್ಟುಹಬ್ಬ ತುಂಬ ವಿಶೇಷವಾಗಿದೆ. ಯಾಕೆಂದರೆ, ಅವರು ನಟಿಸಿದ ‘ಕಲ್ಕಿ 2898 ಎಡಿ’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗಿದೆ. ಅದಕ್ಕೂ ಮುನ್ನ ‘ಸಲಾರ್’ ಸಿನಿಮಾ ಯಶಸ್ಸು ಕಂಡಿತ್ತು. ಈ ಎರಡು ಗೆಲುವಿನಿಂದ ಪ್ರಭಾಸ್ ಅವರು ಮತ್ತೆ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ‘ಸಾಹೋ’, ‘ರಾಧೆ ಶ್ಯಾಮ್’, ‘ಆದಿಪುರುಷ್’ ಚಿತ್ರಗಳ ಸೋಲಿನ ಬಳಿಕ ಅವರು ಈಗ ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ.

ಇದನ್ನೂ ಓದಿ: ಮುಂಚಿತವಾಗಿ ನಟ ಪ್ರಭಾಸ್ ಜನ್ಮದಿನ ಆಚರಿಸಿದ ಟೋಕಿಯೋ ಅಭಿಮಾನಿಗಳು

‘ಹಾರರ್ ಎಂಬುದು ಹೊಸ ಹಾಸ್ಯ’ ಎಂಬ ಟ್ಯಾಗ್​ಲೈನ್​ ‘ದಿ ರಾಜಾ ಸಾಬ್’ ಮೋಷನ್ ಪೋಸ್ಟರ್​ನಲ್ಲಿ ಗಮನ ಸೆಳೆದಿದೆ. 2025ರ ಏಪ್ರಿಲ್​ 10ರಂದು ಈ ಸಿನಿಮಾ ತೆರೆಕಾಣಲಿದೆ.

‘ದಿ ರಾಜಾ ಸಾಬ್’ ಮೋಷನ್ ಪೋಸ್ಟರ್​:

ಇಂದು (ಅ.23) ಪ್ರಭಾಸ್ ಅವರ 45ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಈ ಸಿನಿಮಾದ ಮೋಷನ್ ಪೋಸ್ಟರ್​ನಿಂದ ಇನ್ನಷ್ಟು ಮೆರುಗು ಬಂದಿದೆ. ಪ್ರಭಾಸ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಪೋಸ್ಟರ್ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಡಿಕೆ ಸುರೇಶ್ ಗೆಲುವು ಮತ್ತು ಸೋಲು ಎರಡಕ್ಕೂ ಕಾರಣನಾಗಿದ್ದೇನೆ: ಯೋಗೇಶ್ವರ್
ಡಿಕೆ ಸುರೇಶ್ ಗೆಲುವು ಮತ್ತು ಸೋಲು ಎರಡಕ್ಕೂ ಕಾರಣನಾಗಿದ್ದೇನೆ: ಯೋಗೇಶ್ವರ್
ಹೆಚ್ ಡಿ ಕುಮಾರಸ್ವಾಮಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಎಲ್ಲರ ಕಣ್ಣು
ಹೆಚ್ ಡಿ ಕುಮಾರಸ್ವಾಮಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಎಲ್ಲರ ಕಣ್ಣು
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು