AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಲುವಿಗಾಗಿ ಹೆಸರು ಬದಲಿಸಿಕೊಂಡ್ರಾ ಪ್ರಭಾಸ್​? ಹೊಸ ಪೋಸ್ಟರ್​ನಿಂದ ಹುಟ್ಟಿತು ಅನುಮಾನ

ಪ್ರಭಾಸ್​ ಮತ್ತು ನಿರ್ದೇಶಕ ಮಾರುತಿ ಅವರ ಕಾಂಬಿನೇಷನ್​ನಲ್ಲಿ ‘ದಿ ರಾಜಾ ಸಾಬ್​’ ಸಿನಿಮಾ ಮೂಡಿಬರುತ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಸಿನಿಮಾದ ಹೊಸ ಪೋಸ್ಟರ್​ ಬಿಡುಗಡೆ ಆಗಿದೆ. ಇದನ್ನು ನೋಡಿದ ಅಭಿಮಾನಿಗಳ ಕಣ್ಣು ಕುಕ್ಕಿರುವುದು ಪೋಸ್ಟರ್​ ಮೇಲೆ ಇರುವ ಪ್ರಭಾಸ್​ ಹೆಸರು!

ಗೆಲುವಿಗಾಗಿ ಹೆಸರು ಬದಲಿಸಿಕೊಂಡ್ರಾ ಪ್ರಭಾಸ್​? ಹೊಸ ಪೋಸ್ಟರ್​ನಿಂದ ಹುಟ್ಟಿತು ಅನುಮಾನ
ಪ್ರಭಾಸ್​
ಮದನ್​ ಕುಮಾರ್​
|

Updated on: Jan 15, 2024 | 11:20 AM

Share

ನಟ ಪ್ರಭಾಸ್​ (Prabhas) ಅವರು ಚಿತ್ರರಂಗದಲ್ಲಿ ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ಅವರ ಕೆಲವು ಸಿನಿಮಾಗಳು ಬ್ಲಾಕ್​ ಬಸ್ಟರ್​ ಹಿಟ್​​ ಆಗಿವೆ. ಇನ್ನೂ ಕೆಲವು ಸಿನಿಮಾಗಳು ಹೀನಾಯವಾಗಿ ಸೋಲು ಕಂಡಿವೆ. ‘ಬಾಹುಬಲಿ 2’ ತೆರೆಕಂಡ ಬಳಿಕ ಅವರು ಗೆದ್ದಿದ್ದಕ್ಕಿಂತ ಸೋತಿದ್ದೇ ಹೆಚ್ಚು. ಇತ್ತೀಚೆಗೆ ತೆರೆಕಂಡ ‘ಸಲಾರ್​’ (Salaar) ಸಿನಿಮಾದಿಂದ ಅವರು ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ. ಅದೇ ರೀತಿ ಮುಂಬರುವ ಸಿನಿಮಾಗಳು ಕೂಡ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಅದಕ್ಕಾಗಿ ಪ್ರಭಾಸ್​ ಅವರು ಹೆಸರು ಬದಲಾಯಿಸಿಕೊಂಡಿದ್ದಾರಾ ಎಂಬ ಅನುಮಾನ ಮೂಡಿದೆ. ಅದಕ್ಕೆಲ್ಲ ಕಾರಣ ಆಗಿರುವುದು ‘ದಿ ರಾಜಾ ಸಾಬ್​’ (The Raja Saab) ಸಿನಿಮಾದ ಹೊಸ ಪೋಸ್ಟರ್​.

ಪ್ರಭಾಸ್​ ಮತ್ತು ನಿರ್ದೇಶಕ ಮಾರುತಿ ಅವರ ಕಾಂಬಿನೇಷನ್​ನಲ್ಲಿ ‘ದಿ ರಾಜಾ ಸಾಬ್​’ ಸಿನಿಮಾ ಮೂಡಿಬರುತ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಸಿನಿಮಾದ ಹೊಸ ಪೋಸ್ಟರ್​ ಬಿಡುಗಡೆ ಆಗಿದೆ. ಇದರಲ್ಲಿ ಪ್ರಭಾಸ್ ಅವರು ಲುಂಗಿ ಧರಿಸಿ ಪೋಸ್​ ನೀಡಿದ್ದಾರೆ. ಯಾವುದೋ ಸೆಲೆಬ್ರೇಷನ್​ನಲ್ಲಿ ಅವರು ನಡೆದುಬರುತ್ತಿರುವ ರೀತಿಯಲ್ಲಿ ಈ ಪೋಸ್ಟರ್​ ಮೂಡಿಬಂದಿದೆ. ಅದರ ನಡುವೆ ಅಭಿಮಾನಿಗಳ ಕಣ್ಣು ಕುಕ್ಕಿರುವುದು ಪೋಸ್ಟರ್​ ಮೇಲೆ ಇರುವ ಪ್ರಭಾಸ್​ ಹೆಸರು.

ಇದನ್ನೂ ಓದಿ: Prabhas: ಪ್ರಭಾಸ್ ಈಗ ‘ದಿ ರಾಜಾ ಸಾಬ್’; ಹೇಗಿದೆ ನೋಡಿ ಫಸ್ಟ್ ಲುಕ್

ಇಷ್ಟು ದಿನ ಪ್ರಭಾಸ್​ ಅವರ ಹೆಸರನ್ನು ಇಂಗ್ಲಿಷ್​ನಲ್ಲಿ Prabhas ಎಂದು ಬರೆಯಲಾಗುತ್ತಿತ್ತು. ಆದರೆ ‘ದಿ ರಾಜಾ ಸಾಬ್​’ ಸಿನಿಮಾದ ಪೋಸ್ಟರ್​ನಲ್ಲಿ ‘Prabhass’ ಎಂದು ಬರೆಯಲಾಗಿದೆ. ಅಂದರೆ, ಹೆಸರಿನ ಕೊನೆಯಲ್ಲಿ ಹೆಚ್ಚುವರಿಯಾಗಿ ಒಂದು ‘s’ ಸೇರಿಸಲಾಗಿದೆ. ಸಂಖ್ಯಾಶಾಸ್ತ್ರವನ್ನು ನಂಬಿಕೊಂಡು ಪ್ರಭಾಸ್​ ಅವರು ಈ ಬದಲಾವಣೆ ಮಾಡಿಕೊಂಡಿದ್ದಾರಾ ಅಥವಾ ಪೋಸ್ಟರ್​ ವಿನ್ಯಾಸ ಮಾಡುವವರ ಕಣ್ತಪ್ಪಿನಿಂದ ಈ ರೀತಿ ಆಗಿದೆಯಾ ಎಂಬ ಪ್ರಶ್ನೆಗೆ ಚಿತ್ರತಂಡವೇ ಉತ್ತರ ನೀಡಬೇಕು.

View this post on Instagram

A post shared by Prabhas (@actorprabhas)

‘ಸಲಾರ್​’ ಗೆಲುವಿನ ನಂತರ ಪ್ರಭಾಸ್​ ಅವರ ಮುಂಬರುವ ಸಿನಿಮಾಗಳ ಮೇಲೆ ನಿರೀಕ್ಷೆ ಮೂಡಿದೆ. ಹಲವು ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಕಲ್ಕಿ 2898 ಎಡಿ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಆ ಸಿನಿಮಾದಲ್ಲಿ ಅಮಿತಾಭ್​ ಬಚ್ಚನ್​, ದಿಶಾ ಪಟಾನಿ, ಕಮಲ್​ ಹಾಸನ್​, ದೀಪಿಕಾ ಪಡುಕೋಣೆ ಮುಂತಾದವರು ನಟಿಸುತ್ತಿದ್ದಾರೆ. ಅದರಲ್ಲಿ ಸೈನ್ಸ್​ ಫಿಕ್ಷನ್​ ಕಥಾಹಂದರ ಇರಲಿದ್ದು, ನಾಗ್​ ಅಶ್ವಿನ್​ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ