AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aishwaryaa Rajinikanth: ರಜನಿಕಾಂತ್​ ಮನೆಯ ಲಾಕರ್​ನಲ್ಲಿ ಪುತ್ರಿ ಐಶ್ವರ್ಯಾ ಇಟ್ಟಿದ್ದ ಒಡವೆ ಕಳ್ಳತನ; ಯಾರ ಮೇಲೆ ಅನುಮಾನ?

Rajinikanth | Dhanush: ಕಳೆದ 4 ವರ್ಷಗಳಿಂದ ಈ ಲಾಕರ್​ ಅನ್ನು ಬೇರೆ ಬೇರೆ ಮನೆಗಳಿಗೆ ಶಿಫ್ಟ್​ ಮಾಡಲಾಗಿತ್ತು. ಐಶ್ವರ್ಯಾ ಅವರ ಮಾಜಿ ಪತಿ ಧನುಶ್​ ಮನೆಯಲ್ಲೂ ಕೆಲ ದಿನಗಳ ಕಾಲ ಲಾಕರ್ ಇರಿಸಲಾಗಿತ್ತು.

Aishwaryaa Rajinikanth: ರಜನಿಕಾಂತ್​ ಮನೆಯ ಲಾಕರ್​ನಲ್ಲಿ ಪುತ್ರಿ ಐಶ್ವರ್ಯಾ ಇಟ್ಟಿದ್ದ ಒಡವೆ ಕಳ್ಳತನ; ಯಾರ ಮೇಲೆ ಅನುಮಾನ?
ಐಶ್ವರ್ಯಾ ರಜನಿಕಾಂತ್
ಮದನ್​ ಕುಮಾರ್​
|

Updated on: Mar 20, 2023 | 1:49 PM

Share

ನಟ ರಜನಿಕಾಂತ್​ (Rajinikanth) ಅವರ ಮನೆಯಲ್ಲಿ ಕಳ್ಳತನ (Theft) ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್​ ದೂರು ನೀಡಿದ್ದಾರೆ. ಐಶ್ವರ್ಯಾ ಅವರ ಆಭರಣಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನ, ಡೈಮಂಡ್​ ಮುಂತಾದ ಒಡವೆಗಳು ಮಿಸ್​ ಆಗಿವೆ. ಈ ಪ್ರಕರಣದಲ್ಲಿ ಕೆಲವರ ಮೇಲೆ ಐಶ್ವರ್ಯಾ ರಜನಿಕಾಂತ್​ (Aishwaryaa Rajinikanth) ಅನುಮಾನ ವ್ಯಕ್ತಪಡಿಸಿದ್ದಾರೆ. ಮನೆ ಕೆಲಸದ ಇಬ್ಬರು ವ್ಯಕ್ತಿಗಳು ಹಾಗೂ ಕಾರು ಚಾಲಕನ ಮೇಲೆ ಗುಮಾನಿ ಇದ್ದು, ಪೊಲೀಸರಿಗೆ ನೀಡಿದ ದೂರಿನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಐಪಿಸಿ ಸೆಕ್ಷನ್​ 381ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಜನಿಕಾಂತ್​ ಮನೆಯಲ್ಲಿ ಕಳ್ಳತನ ಆಗಿರುವ ಆಭರಣಗಳ ಮೌಲ್ಯವನ್ನು 3.60 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಕೊನೇ ಬಾರಿ ಐಶ್ವರ್ಯಾ ರಜನಿಕಾಂತ್​ ಅವರು ಈ ಒಡವೆಗಳನ್ನು ಧರಿಸಿದ್ದು 2019ರಲ್ಲಿ! ಸಹೋದರಿ ಸೌಂದರ್ಯಾ ಅವರ ಮದುವೆಯಲ್ಲಿ ಈ ಆಭರಣಗಳನ್ನು ಧರಿಸಿದ ಬಳಿಕ ಅವುಗಳನ್ನು ಮನೆಯ ಲಾಕರ್​ನಲ್ಲಿ ಇರಿಸಲಾಗಿತ್ತು.

ಇದನ್ನೂ ಓದಿ: Rajinikanth: ‘ಕಾಂತಾರ 2’ ಚಿತ್ರದಲ್ಲಿ ರಜನಿಕಾಂತ್​ ನಟಿಸ್ತಾರಾ? ರಿಷಬ್​ ಶೆಟ್ಟಿ ಸಿನಿಮಾ ಬಗ್ಗೆ ಹೊಸ ಚರ್ಚೆ ಶುರು

ಇದನ್ನೂ ಓದಿ
Image
Rajinikanth: ರಜನಿಕಾಂತ್​ಗೆ ಆದಾಯ ತೆರಿಗೆ ಇಲಾಖೆ ಮೆಚ್ಚುಗೆ; ತಂದೆ ಪರವಾಗಿ ಪ್ರಶಸ್ತಿ ಪಡೆದ ಪುತ್ರಿ ಐಶ್ವರ್ಯಾ
Image
Jailer: ಶಿವಣ್ಣ-ರಜನಿಕಾಂತ್​ ಸಿನಿಮಾಗೆ ‘ಜೈಲರ್​’ ಶೀರ್ಷಿಕೆ: ಅಭಿಮಾನಿಗಳಲ್ಲಿ ಕ್ರೇಜ್​ ಹೆಚ್ಚಿಸಿದ ಪೋಸ್ಟರ್​
Image
ರಜನಿಕಾಂತ್​ಗೆ ನಾಯಕಿ ಆದ ಐಶ್ವರ್ಯಾ ರೈ; ಹೊಸ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ
Image
ಕೋಟ್ಯಂತರ ರೂ. ಸಂಭಾವನೆ ಪಡೆಯುವ ರಜನಿಕಾಂತ್​ ಎಷ್ಟು ಆಸ್ತಿ ಹೊಂದಿದ್ದಾರೆ? ಇಲ್ಲಿದೆ ವಿವರ..

ಕಳೆದ ನಾಲ್ಕು ವರ್ಷಗಳಿಂದ ಈ ಲಾಕರ್​ ಅನ್ನು ಬೇರೆ ಬೇರೆ ಮನೆಗಳಿಗೆ ಶಿಫ್ಟ್​ ಮಾಡಲಾಗಿತ್ತು. ಐಶ್ವರ್ಯಾ ಅವರ ಮಾಜಿ ಪತಿ, ನಟ ಧನುಶ್​ ಅವರ ಮನೆಯಲ್ಲೂ ಕೆಲವು ದಿನಗಳ ಕಾಲ ಈ ಲಾಕರ್ ಇರಿಸಲಾಗಿತ್ತು. ಅಂತಿಮವಾಗಿ ಅದನ್ನು ರಜನಿಕಾಂತ್​ ಅವರ ನಿವಾಸಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಅವರ ಕೀ ಅನ್ನು ಐಶ್ವರ್ಯಾ ಅವರು ತಮ್ಮ ಅಪಾರ್ಟ್​ಮೆಂಟ್​ನಲ್ಲಿ ಇರಿಸಿಕೊಂಡಿದ್ದರು. ಮನೆಯ ಸಿಬ್ಬಂದಿಗೆ ಈ ಲಾಕರ್​ ಬಗ್ಗೆ ಸಂಪೂರ್ಣ ಮಾಹಿತಿ ಇತ್ತು ಎಂದು ವರದಿ ಆಗಿದೆ.

ಇದನ್ನೂ ಓದಿ: Rajinikanth: ರಜನಿಕಾಂತ್ 170ನೇ ಚಿತ್ರ ಘೋಷಣೆ; ‘ಜೈ ಭೀಮ್​’ ನಿರ್ದೇಶಕನ ಜೊತೆ ಸೂಪರ್​ ಸ್ಟಾರ್ ಸಿನಿಮಾ  

ಡೈಮಂಡ್​ ಸೆಟ್​ಗಳು, ಪ್ರಾಚೀನ ಶೈಲಿಯ ಬಂಗಾರದ ಆಭರಣಗಳು, ನವರತ್ನದ ಸೆಟ್​ಗಳು, ಬಳೆಗಳು ಸೇರಿದಂತೆ ಅನೇಕ ಜ್ಯುವೆಲ್ಲರಿಗಳನ್ನು ಕಳ್ಳತನ ಮಾಡಲಾಗಿದೆ. ತನಿಖೆಯಲ್ಲಿ ಯಾರ ಹೆಸರುಗಳು ಹೊರಬರಲಿವೆ ಎಂಬ ಕೌತುಕ ಮೂಡಿದೆ. ರಜನಿಕಾಂತ್ ಅವರಂತಹ ಸ್ಟಾರ್​ ನಟನ ಮನೆಯಲ್ಲಿ ಕಳ್ಳತನ ಮಾಡಲು ಧೈರ್ಯ ತೋರಿಸಿರುವವರು ಯಾರು ಎಂಬುದು ತನಿಖೆ ಬಳಿಕ ಗೊತ್ತಾಗಲಿದೆ.

ಇದನ್ನೂ ಓದಿ: Rajinikanth: ಕರ್ನಾಟಕದ ಧಾರ್ಮಿಕ ಕ್ಷೇತ್ರಗಳಿಗೆ ರಜನಿಕಾಂತ್​ ಭೇಟಿ; ‘ಜೈಲರ್​’ ಶೂಟಿಂಗ್​ ನಡುವೆ ‘ತಲೈವಾ’ ಸುತ್ತಾಟ

ತಮಿಳು ಚಿತ್ರರಂಗದಲ್ಲಿ ನಿರ್ದೇಶಕಿಯಾಗಿ ಐಶ್ವರ್ಯಾ ರಜನಿಕಾಂತ್​ ಅವರು ಗುರುತಿಸಿಕೊಂಡಿದ್ದಾರೆ. ‘3’, ‘ವೈ ರಾಜ ವೈ’ ಮುಂತಾದ ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದಾರೆ. ಕೆಲವು ಹಾಡುಗಳಿಗೆ ಅವರು ಧ್ವನಿ ನೀಡಿದ್ದಾರೆ. ಪ್ರಸ್ತುತ ತಮಿಳಿನ ‘ಲಾಲ್​ ಸಲಾಂ’ ಸಿನಿಮಾಗೆ ಐಶ್ವರ್ಯಾ ನಿರ್ದೇಶನ ಮಾಡುತ್ತಿದ್ದಾರೆ. ಬಹುವರ್ಷಗಳ ಬಳಿಕ ಅವರು ಡೈರೆಕ್ಷನ್​ ಮಾಡುತ್ತಿರುವುದು ವಿಶೇಷ. ಈ ಚಿತ್ರದಲ್ಲಿ ರಜನಿಕಾಂತ್​ ಅವರ ಅತಿಥಿ ಪಾತ್ರ ಇರಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ