Sign In

By signing in or creating an account, you agree with Associated Broadcasting Company's Terms & Conditions and Privacy Policy.

Aishwaryaa Rajinikanth: ರಜನಿಕಾಂತ್​ ಮನೆಯ ಲಾಕರ್​ನಲ್ಲಿ ಪುತ್ರಿ ಐಶ್ವರ್ಯಾ ಇಟ್ಟಿದ್ದ ಒಡವೆ ಕಳ್ಳತನ; ಯಾರ ಮೇಲೆ ಅನುಮಾನ?

Rajinikanth | Dhanush: ಕಳೆದ 4 ವರ್ಷಗಳಿಂದ ಈ ಲಾಕರ್​ ಅನ್ನು ಬೇರೆ ಬೇರೆ ಮನೆಗಳಿಗೆ ಶಿಫ್ಟ್​ ಮಾಡಲಾಗಿತ್ತು. ಐಶ್ವರ್ಯಾ ಅವರ ಮಾಜಿ ಪತಿ ಧನುಶ್​ ಮನೆಯಲ್ಲೂ ಕೆಲ ದಿನಗಳ ಕಾಲ ಲಾಕರ್ ಇರಿಸಲಾಗಿತ್ತು.

Aishwaryaa Rajinikanth: ರಜನಿಕಾಂತ್​ ಮನೆಯ ಲಾಕರ್​ನಲ್ಲಿ ಪುತ್ರಿ ಐಶ್ವರ್ಯಾ ಇಟ್ಟಿದ್ದ ಒಡವೆ ಕಳ್ಳತನ; ಯಾರ ಮೇಲೆ ಅನುಮಾನ?
ಐಶ್ವರ್ಯಾ ರಜನಿಕಾಂತ್
Follow us
ಮದನ್​ ಕುಮಾರ್​
|

Updated on: Mar 20, 2023 | 1:49 PM

ನಟ ರಜನಿಕಾಂತ್​ (Rajinikanth) ಅವರ ಮನೆಯಲ್ಲಿ ಕಳ್ಳತನ (Theft) ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್​ ದೂರು ನೀಡಿದ್ದಾರೆ. ಐಶ್ವರ್ಯಾ ಅವರ ಆಭರಣಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನ, ಡೈಮಂಡ್​ ಮುಂತಾದ ಒಡವೆಗಳು ಮಿಸ್​ ಆಗಿವೆ. ಈ ಪ್ರಕರಣದಲ್ಲಿ ಕೆಲವರ ಮೇಲೆ ಐಶ್ವರ್ಯಾ ರಜನಿಕಾಂತ್​ (Aishwaryaa Rajinikanth) ಅನುಮಾನ ವ್ಯಕ್ತಪಡಿಸಿದ್ದಾರೆ. ಮನೆ ಕೆಲಸದ ಇಬ್ಬರು ವ್ಯಕ್ತಿಗಳು ಹಾಗೂ ಕಾರು ಚಾಲಕನ ಮೇಲೆ ಗುಮಾನಿ ಇದ್ದು, ಪೊಲೀಸರಿಗೆ ನೀಡಿದ ದೂರಿನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಐಪಿಸಿ ಸೆಕ್ಷನ್​ 381ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಜನಿಕಾಂತ್​ ಮನೆಯಲ್ಲಿ ಕಳ್ಳತನ ಆಗಿರುವ ಆಭರಣಗಳ ಮೌಲ್ಯವನ್ನು 3.60 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಕೊನೇ ಬಾರಿ ಐಶ್ವರ್ಯಾ ರಜನಿಕಾಂತ್​ ಅವರು ಈ ಒಡವೆಗಳನ್ನು ಧರಿಸಿದ್ದು 2019ರಲ್ಲಿ! ಸಹೋದರಿ ಸೌಂದರ್ಯಾ ಅವರ ಮದುವೆಯಲ್ಲಿ ಈ ಆಭರಣಗಳನ್ನು ಧರಿಸಿದ ಬಳಿಕ ಅವುಗಳನ್ನು ಮನೆಯ ಲಾಕರ್​ನಲ್ಲಿ ಇರಿಸಲಾಗಿತ್ತು.

ಇದನ್ನೂ ಓದಿ: Rajinikanth: ‘ಕಾಂತಾರ 2’ ಚಿತ್ರದಲ್ಲಿ ರಜನಿಕಾಂತ್​ ನಟಿಸ್ತಾರಾ? ರಿಷಬ್​ ಶೆಟ್ಟಿ ಸಿನಿಮಾ ಬಗ್ಗೆ ಹೊಸ ಚರ್ಚೆ ಶುರು

ಇದನ್ನೂ ಓದಿ
Image
Rajinikanth: ರಜನಿಕಾಂತ್​ಗೆ ಆದಾಯ ತೆರಿಗೆ ಇಲಾಖೆ ಮೆಚ್ಚುಗೆ; ತಂದೆ ಪರವಾಗಿ ಪ್ರಶಸ್ತಿ ಪಡೆದ ಪುತ್ರಿ ಐಶ್ವರ್ಯಾ
Image
Jailer: ಶಿವಣ್ಣ-ರಜನಿಕಾಂತ್​ ಸಿನಿಮಾಗೆ ‘ಜೈಲರ್​’ ಶೀರ್ಷಿಕೆ: ಅಭಿಮಾನಿಗಳಲ್ಲಿ ಕ್ರೇಜ್​ ಹೆಚ್ಚಿಸಿದ ಪೋಸ್ಟರ್​
Image
ರಜನಿಕಾಂತ್​ಗೆ ನಾಯಕಿ ಆದ ಐಶ್ವರ್ಯಾ ರೈ; ಹೊಸ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ
Image
ಕೋಟ್ಯಂತರ ರೂ. ಸಂಭಾವನೆ ಪಡೆಯುವ ರಜನಿಕಾಂತ್​ ಎಷ್ಟು ಆಸ್ತಿ ಹೊಂದಿದ್ದಾರೆ? ಇಲ್ಲಿದೆ ವಿವರ..

ಕಳೆದ ನಾಲ್ಕು ವರ್ಷಗಳಿಂದ ಈ ಲಾಕರ್​ ಅನ್ನು ಬೇರೆ ಬೇರೆ ಮನೆಗಳಿಗೆ ಶಿಫ್ಟ್​ ಮಾಡಲಾಗಿತ್ತು. ಐಶ್ವರ್ಯಾ ಅವರ ಮಾಜಿ ಪತಿ, ನಟ ಧನುಶ್​ ಅವರ ಮನೆಯಲ್ಲೂ ಕೆಲವು ದಿನಗಳ ಕಾಲ ಈ ಲಾಕರ್ ಇರಿಸಲಾಗಿತ್ತು. ಅಂತಿಮವಾಗಿ ಅದನ್ನು ರಜನಿಕಾಂತ್​ ಅವರ ನಿವಾಸಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಅವರ ಕೀ ಅನ್ನು ಐಶ್ವರ್ಯಾ ಅವರು ತಮ್ಮ ಅಪಾರ್ಟ್​ಮೆಂಟ್​ನಲ್ಲಿ ಇರಿಸಿಕೊಂಡಿದ್ದರು. ಮನೆಯ ಸಿಬ್ಬಂದಿಗೆ ಈ ಲಾಕರ್​ ಬಗ್ಗೆ ಸಂಪೂರ್ಣ ಮಾಹಿತಿ ಇತ್ತು ಎಂದು ವರದಿ ಆಗಿದೆ.

ಇದನ್ನೂ ಓದಿ: Rajinikanth: ರಜನಿಕಾಂತ್ 170ನೇ ಚಿತ್ರ ಘೋಷಣೆ; ‘ಜೈ ಭೀಮ್​’ ನಿರ್ದೇಶಕನ ಜೊತೆ ಸೂಪರ್​ ಸ್ಟಾರ್ ಸಿನಿಮಾ  

ಡೈಮಂಡ್​ ಸೆಟ್​ಗಳು, ಪ್ರಾಚೀನ ಶೈಲಿಯ ಬಂಗಾರದ ಆಭರಣಗಳು, ನವರತ್ನದ ಸೆಟ್​ಗಳು, ಬಳೆಗಳು ಸೇರಿದಂತೆ ಅನೇಕ ಜ್ಯುವೆಲ್ಲರಿಗಳನ್ನು ಕಳ್ಳತನ ಮಾಡಲಾಗಿದೆ. ತನಿಖೆಯಲ್ಲಿ ಯಾರ ಹೆಸರುಗಳು ಹೊರಬರಲಿವೆ ಎಂಬ ಕೌತುಕ ಮೂಡಿದೆ. ರಜನಿಕಾಂತ್ ಅವರಂತಹ ಸ್ಟಾರ್​ ನಟನ ಮನೆಯಲ್ಲಿ ಕಳ್ಳತನ ಮಾಡಲು ಧೈರ್ಯ ತೋರಿಸಿರುವವರು ಯಾರು ಎಂಬುದು ತನಿಖೆ ಬಳಿಕ ಗೊತ್ತಾಗಲಿದೆ.

ಇದನ್ನೂ ಓದಿ: Rajinikanth: ಕರ್ನಾಟಕದ ಧಾರ್ಮಿಕ ಕ್ಷೇತ್ರಗಳಿಗೆ ರಜನಿಕಾಂತ್​ ಭೇಟಿ; ‘ಜೈಲರ್​’ ಶೂಟಿಂಗ್​ ನಡುವೆ ‘ತಲೈವಾ’ ಸುತ್ತಾಟ

ತಮಿಳು ಚಿತ್ರರಂಗದಲ್ಲಿ ನಿರ್ದೇಶಕಿಯಾಗಿ ಐಶ್ವರ್ಯಾ ರಜನಿಕಾಂತ್​ ಅವರು ಗುರುತಿಸಿಕೊಂಡಿದ್ದಾರೆ. ‘3’, ‘ವೈ ರಾಜ ವೈ’ ಮುಂತಾದ ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದಾರೆ. ಕೆಲವು ಹಾಡುಗಳಿಗೆ ಅವರು ಧ್ವನಿ ನೀಡಿದ್ದಾರೆ. ಪ್ರಸ್ತುತ ತಮಿಳಿನ ‘ಲಾಲ್​ ಸಲಾಂ’ ಸಿನಿಮಾಗೆ ಐಶ್ವರ್ಯಾ ನಿರ್ದೇಶನ ಮಾಡುತ್ತಿದ್ದಾರೆ. ಬಹುವರ್ಷಗಳ ಬಳಿಕ ಅವರು ಡೈರೆಕ್ಷನ್​ ಮಾಡುತ್ತಿರುವುದು ವಿಶೇಷ. ಈ ಚಿತ್ರದಲ್ಲಿ ರಜನಿಕಾಂತ್​ ಅವರ ಅತಿಥಿ ಪಾತ್ರ ಇರಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ