AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಕನ್ನಡ ಸೀಸನ್​​ 8ರಲ್ಲಿ ನಡೆಯಿತು ಯಾರೂ ಊಹಿಸಿರದ 3 ವಿಚಿತ್ರ ಘಟನೆಗಳು

BBK8: ಕನ್ನಡ ಬಿಗ್​ ಬಾಸ್​ ಇತಿಹಾಸದಲ್ಲಿ ನಡೆಯದೇ ಇರುವ ಮೂರು ವಿಚಿತ್ರ ಘಟನೆಗಳಿಗೆ ಈ ಸೀಸನ್​ ಸಾಕ್ಷಿ ಆಯಿತು. ಅವು ಯಾವವು ಎಂಬುದಕ್ಕೆ ಇಲ್ಲಿದೆ ವಿವರ.

Bigg Boss Kannada: ಬಿಗ್​ ಬಾಸ್​ ಕನ್ನಡ ಸೀಸನ್​​ 8ರಲ್ಲಿ ನಡೆಯಿತು ಯಾರೂ ಊಹಿಸಿರದ 3 ವಿಚಿತ್ರ ಘಟನೆಗಳು
ಬಿಗ್​ ಬಾಸ್​ ಕನ್ನಡ
ರಾಜೇಶ್ ದುಗ್ಗುಮನೆ
| Edited By: |

Updated on: May 09, 2021 | 3:22 PM

Share

ಬಿಗ್​ ಬಾಸ್​ ಎಂದರೆ ಅಲ್ಲಿ ವಿವಾದಗಳು ಏಳೋದು ಸಾಮಾನ್ಯ. ಕನ್ನಡ ಬಿಗ್​ ಬಾಸ್​​ನ ಕಳೆದ ಏಳು ಸೀಸನ್​ಗಳಲ್ಲಿ ಸಾಕಷ್ಟು ವಿವಾದಗಳು ಹುಟ್ಟಿಕೊಂಡಿದ್ದವು. ಈ ಬಾರಿಯ ಕನ್ನಡ ಬಿಗ್​ ಬಾಸ್​ ಸೀಸನ್​-8ನಲ್ಲಿ ಕಾಂಟ್ರವರ್ಸಿಗಳು ಅಷ್ಟಾಗಿ ಕಾಣಿಸಿಲ್ಲ. ಆದರೆ, ಕನ್ನಡ ಬಿಗ್​ ಬಾಸ್​ ಇತಿಹಾಸದಲ್ಲಿ ನಡೆಯದೇ ಇರುವ ಮೂರು ವಿಚಿತ್ರ ಘಟನೆಗಳಿಗೆ ಈ ಸೀಸನ್​ ಸಾಕ್ಷಿ ಆಯಿತು. ಅವು ಯಾವವು ಎಂಬುದಕ್ಕೆ ಇಲ್ಲಿದೆ ವಿವರ.

 ಸ್ವಯಂ ನಿರ್ಗಮನ

ಬಿಗ್​ ಬಾಸ್​ ಸೇರಿದ ನಂತರ ಸ್ಪರ್ಧಿಗಳ ನಡುವೆ ಒಂದು ಬಾಂಡಿಂಗ್​ ಬೆಳೆಯುತ್ತದೆ. ಹೀಗಾಗಿ, ಎಲಿಮಿನೇಷನ್​ ಆದರೂ ಮನೆಯಿಂದ ಹೊರ ಹೋಗೋಕೆ ಸಂಕಟ ಪಡುತ್ತಾರೆ. ಆದರೆ, ಕನ್ನಡ ಬಿಗ್​ ಬಾಸ್​ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸ್ವಯಂ ನಿರ್ಗಮನ ಆಗಿತ್ತು. ನಟಿ ವೈಜಯಂತಿ ಅಡಿಗ ವೈಲ್ಡ್​ ಕಾರ್ಡ್​ ಮೂಲಕ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದರು. ಮನೆ ಸೇರಿದ ಎರಡೇ ದಿನಕ್ಕೆ ಅವರಿಗೆ ಸಾಕಾಗಿತ್ತು. ಹೀಗಾಗಿ, ನನ್ನ ಹತ್ತಿರ ಇಲ್ಲಿರೋಕೆ ಆಗುತ್ತಿಲ್ಲ. ನಾನು ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತೇನೆ ಎಂದು ಹೇಳಿದ್ದರು.

ವೈಜಯಂತಿ ಅಡಿಗ ಅವರ ಬೇಡಿಕೆ ಕಿಚ್ಚ ಸುದೀಪ್​ ಕಿವಿಗೂ ಬಿದ್ದಿತ್ತು. ಎಲಿಮಿನೇಷನ್​ ಸಮಯದಲ್ಲಿ ಮನೆಯಿಂದ ಹೊರ ಹೋಗುವ ಆಯ್ಕೆಯನ್ನು ವೈಜಯಂತಿ ಮುಂದಿಡಲಾಯಿತು. ಇದನ್ನು ಒಪ್ಪಿ ಅವರು ಹೊರ ನಡೆದರು. ಎಲಿಮಿನೇಟ್​ ಆಗಿದ್ದ ಶಮಂತ್​ ಮನೆಯಲ್ಲಿ ಮುಂದುವರಿದರು.

ಕಿಚ್ಚ ಸುದೀಪ್​ ಗೈರು

ಬಿಗ್​ ಬಾಸ್ ಯಶಸ್ವಿಯಾಗಿ​ ಏಳು ಸೀಸನ್​ ಪೂರ್ಣಗೊಳಿಸಿದೆ. ಎಂಟನೇ ಸೀಸನ್​ ಅರ್ಧಕ್ಕೆ ನಿಂತಿದೆ. ಕಳೆದ ಏಳೂ ಸೀಸನ್​ಗಳಲ್ಲಿ ಕಿಚ್ಚ ಸುದೀಪ್​ ವಾರಾಂತ್ಯದ ಪಂಚಾಯ್ತಿ ಮಿಸ್​ ಮಾಡಿಕೊಂಡವರೇ ಅಲ್ಲ. ಸಿನಿಮಾ ಶೂಟಿಂಗ್​​ಗಾಗಿ ಎಲ್ಲೇ ತೆರಳಿದ್ದರೂ ವೀಕೆಂಡ್​ನಲ್ಲಿ ಬೆಂಗಳೂರಿಗೆ ಬಂದು ಬಿಗ್​ ಬಾಸ್​ ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಿದ್ದರು.

ಆದರೆ, ಈ ಬಾರಿ ಹಾಗಾಗಿಲ್ಲ. ಸುದೀಪ್​ಗೆ ಅನಾರೋಗ್ಯ ಕಾಡಿದ್ದರಿಂದ ಎರಡು ವಾರ ಶೋಗೆ ಗೈರಾದರು. ಆ ವೇಳೆಗಾಗಲೇ ರಾಜ್ಯದಲ್ಲಿ ಕೊರೊನಾ 2ನೇ ಅಲೆ ಹೆಚ್ಚಿತ್ತು. ಇದರಿಂದ ಕಲರ್ಸ್​ ಕನ್ನಡ ವಾಹಿನಿ ಈ ಸಂದರ್ಭದಲ್ಲಿ ಶೂಟಿಂಗ್​ ಸೂಕ್ತವಲ್ಲ ಎನ್ನುವ ನಿರ್ಧಾರಕ್ಕೆ ಬಂದಿತ್ತು. ಹೀಗಾಗಿ, ಕಳೆದ ವಾರವೂ ವಾರಾಂತ್ಯದ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್​ ಪಾಲ್ಗೊಂಡಿಲ್ಲ.

 ಅರ್ಧಕ್ಕೆ ನಿಂತ ಬಿಗ್​ ಬಾಸ್​

ಬಿಗ್​ ಬಾಸ್​ ಏಳು ಸೀಸನ್​ಗಳನ್ನು ಯಶಸ್ವಿಯಾಗಿ ಪೂರೈಸಿದೆ. ಆದರೆ, ಎಂಟನೇ ಸೀಸನ್​ಗೆ ವಿಘ್ನ ಎದುರಾಗಿದೆ. ಕೊರೊನಾ ವೈರಸ್​ ಎರಡನೇ ಅಲೆ ಮಿತಿ ಮೀತಿ ಹರಡುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿದೆ. ಹೀಗಾಗಿ ಚಿತ್ರೀಕರಣ ನಿಲ್ಲಿಸುವ ಪರಿಸ್ಥಿತಿ ನಿರ್ಮಾಣ ಆದ್ದರಿಂದ ಬಿಗ್​ ಬಾಸ್​ ಅರ್ಧಕ್ಕೆ ನಿಲ್ಲುತ್ತಿದೆ. ಕನ್ನಡ ಬಿಗ್​ ಬಾಸ್​ ಇತಿಹಾಸದಲ್ಲಿ ಈ ರೀತಿ ಘಟಿಸುತ್ತಿರುವುದು ಇದೇ ಮೊದಲು. ಕಳೆದ ವರ್ಷ ಕೊರೊನಾ ವೈರಸ್​ ಮೊದಲನೇ ಅಲೆಯಿಂದಾಗಿ ಮಲಯಾಳಂ ಬಿಗ್​ ಬಾಸ್​ ನಿಂತಿತ್ತು.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ರದ್ದು; ವಿನ್ನರ್​ ಯಾರು ಎಂದು ತೀರ್ಮಾನ ಮಾಡಿದ ಪ್ರೇಕ್ಷಕರು

ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಈಡೇರಿತು ರಘು ಗೌಡ ಆಸೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು