AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಕನ್ನಡ ಸೀಸನ್​​ 8ರಲ್ಲಿ ನಡೆಯಿತು ಯಾರೂ ಊಹಿಸಿರದ 3 ವಿಚಿತ್ರ ಘಟನೆಗಳು

BBK8: ಕನ್ನಡ ಬಿಗ್​ ಬಾಸ್​ ಇತಿಹಾಸದಲ್ಲಿ ನಡೆಯದೇ ಇರುವ ಮೂರು ವಿಚಿತ್ರ ಘಟನೆಗಳಿಗೆ ಈ ಸೀಸನ್​ ಸಾಕ್ಷಿ ಆಯಿತು. ಅವು ಯಾವವು ಎಂಬುದಕ್ಕೆ ಇಲ್ಲಿದೆ ವಿವರ.

Bigg Boss Kannada: ಬಿಗ್​ ಬಾಸ್​ ಕನ್ನಡ ಸೀಸನ್​​ 8ರಲ್ಲಿ ನಡೆಯಿತು ಯಾರೂ ಊಹಿಸಿರದ 3 ವಿಚಿತ್ರ ಘಟನೆಗಳು
ಬಿಗ್​ ಬಾಸ್​ ಕನ್ನಡ
ರಾಜೇಶ್ ದುಗ್ಗುಮನೆ
| Edited By: |

Updated on: May 09, 2021 | 3:22 PM

Share

ಬಿಗ್​ ಬಾಸ್​ ಎಂದರೆ ಅಲ್ಲಿ ವಿವಾದಗಳು ಏಳೋದು ಸಾಮಾನ್ಯ. ಕನ್ನಡ ಬಿಗ್​ ಬಾಸ್​​ನ ಕಳೆದ ಏಳು ಸೀಸನ್​ಗಳಲ್ಲಿ ಸಾಕಷ್ಟು ವಿವಾದಗಳು ಹುಟ್ಟಿಕೊಂಡಿದ್ದವು. ಈ ಬಾರಿಯ ಕನ್ನಡ ಬಿಗ್​ ಬಾಸ್​ ಸೀಸನ್​-8ನಲ್ಲಿ ಕಾಂಟ್ರವರ್ಸಿಗಳು ಅಷ್ಟಾಗಿ ಕಾಣಿಸಿಲ್ಲ. ಆದರೆ, ಕನ್ನಡ ಬಿಗ್​ ಬಾಸ್​ ಇತಿಹಾಸದಲ್ಲಿ ನಡೆಯದೇ ಇರುವ ಮೂರು ವಿಚಿತ್ರ ಘಟನೆಗಳಿಗೆ ಈ ಸೀಸನ್​ ಸಾಕ್ಷಿ ಆಯಿತು. ಅವು ಯಾವವು ಎಂಬುದಕ್ಕೆ ಇಲ್ಲಿದೆ ವಿವರ.

 ಸ್ವಯಂ ನಿರ್ಗಮನ

ಬಿಗ್​ ಬಾಸ್​ ಸೇರಿದ ನಂತರ ಸ್ಪರ್ಧಿಗಳ ನಡುವೆ ಒಂದು ಬಾಂಡಿಂಗ್​ ಬೆಳೆಯುತ್ತದೆ. ಹೀಗಾಗಿ, ಎಲಿಮಿನೇಷನ್​ ಆದರೂ ಮನೆಯಿಂದ ಹೊರ ಹೋಗೋಕೆ ಸಂಕಟ ಪಡುತ್ತಾರೆ. ಆದರೆ, ಕನ್ನಡ ಬಿಗ್​ ಬಾಸ್​ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸ್ವಯಂ ನಿರ್ಗಮನ ಆಗಿತ್ತು. ನಟಿ ವೈಜಯಂತಿ ಅಡಿಗ ವೈಲ್ಡ್​ ಕಾರ್ಡ್​ ಮೂಲಕ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದರು. ಮನೆ ಸೇರಿದ ಎರಡೇ ದಿನಕ್ಕೆ ಅವರಿಗೆ ಸಾಕಾಗಿತ್ತು. ಹೀಗಾಗಿ, ನನ್ನ ಹತ್ತಿರ ಇಲ್ಲಿರೋಕೆ ಆಗುತ್ತಿಲ್ಲ. ನಾನು ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತೇನೆ ಎಂದು ಹೇಳಿದ್ದರು.

ವೈಜಯಂತಿ ಅಡಿಗ ಅವರ ಬೇಡಿಕೆ ಕಿಚ್ಚ ಸುದೀಪ್​ ಕಿವಿಗೂ ಬಿದ್ದಿತ್ತು. ಎಲಿಮಿನೇಷನ್​ ಸಮಯದಲ್ಲಿ ಮನೆಯಿಂದ ಹೊರ ಹೋಗುವ ಆಯ್ಕೆಯನ್ನು ವೈಜಯಂತಿ ಮುಂದಿಡಲಾಯಿತು. ಇದನ್ನು ಒಪ್ಪಿ ಅವರು ಹೊರ ನಡೆದರು. ಎಲಿಮಿನೇಟ್​ ಆಗಿದ್ದ ಶಮಂತ್​ ಮನೆಯಲ್ಲಿ ಮುಂದುವರಿದರು.

ಕಿಚ್ಚ ಸುದೀಪ್​ ಗೈರು

ಬಿಗ್​ ಬಾಸ್ ಯಶಸ್ವಿಯಾಗಿ​ ಏಳು ಸೀಸನ್​ ಪೂರ್ಣಗೊಳಿಸಿದೆ. ಎಂಟನೇ ಸೀಸನ್​ ಅರ್ಧಕ್ಕೆ ನಿಂತಿದೆ. ಕಳೆದ ಏಳೂ ಸೀಸನ್​ಗಳಲ್ಲಿ ಕಿಚ್ಚ ಸುದೀಪ್​ ವಾರಾಂತ್ಯದ ಪಂಚಾಯ್ತಿ ಮಿಸ್​ ಮಾಡಿಕೊಂಡವರೇ ಅಲ್ಲ. ಸಿನಿಮಾ ಶೂಟಿಂಗ್​​ಗಾಗಿ ಎಲ್ಲೇ ತೆರಳಿದ್ದರೂ ವೀಕೆಂಡ್​ನಲ್ಲಿ ಬೆಂಗಳೂರಿಗೆ ಬಂದು ಬಿಗ್​ ಬಾಸ್​ ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಿದ್ದರು.

ಆದರೆ, ಈ ಬಾರಿ ಹಾಗಾಗಿಲ್ಲ. ಸುದೀಪ್​ಗೆ ಅನಾರೋಗ್ಯ ಕಾಡಿದ್ದರಿಂದ ಎರಡು ವಾರ ಶೋಗೆ ಗೈರಾದರು. ಆ ವೇಳೆಗಾಗಲೇ ರಾಜ್ಯದಲ್ಲಿ ಕೊರೊನಾ 2ನೇ ಅಲೆ ಹೆಚ್ಚಿತ್ತು. ಇದರಿಂದ ಕಲರ್ಸ್​ ಕನ್ನಡ ವಾಹಿನಿ ಈ ಸಂದರ್ಭದಲ್ಲಿ ಶೂಟಿಂಗ್​ ಸೂಕ್ತವಲ್ಲ ಎನ್ನುವ ನಿರ್ಧಾರಕ್ಕೆ ಬಂದಿತ್ತು. ಹೀಗಾಗಿ, ಕಳೆದ ವಾರವೂ ವಾರಾಂತ್ಯದ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್​ ಪಾಲ್ಗೊಂಡಿಲ್ಲ.

 ಅರ್ಧಕ್ಕೆ ನಿಂತ ಬಿಗ್​ ಬಾಸ್​

ಬಿಗ್​ ಬಾಸ್​ ಏಳು ಸೀಸನ್​ಗಳನ್ನು ಯಶಸ್ವಿಯಾಗಿ ಪೂರೈಸಿದೆ. ಆದರೆ, ಎಂಟನೇ ಸೀಸನ್​ಗೆ ವಿಘ್ನ ಎದುರಾಗಿದೆ. ಕೊರೊನಾ ವೈರಸ್​ ಎರಡನೇ ಅಲೆ ಮಿತಿ ಮೀತಿ ಹರಡುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿದೆ. ಹೀಗಾಗಿ ಚಿತ್ರೀಕರಣ ನಿಲ್ಲಿಸುವ ಪರಿಸ್ಥಿತಿ ನಿರ್ಮಾಣ ಆದ್ದರಿಂದ ಬಿಗ್​ ಬಾಸ್​ ಅರ್ಧಕ್ಕೆ ನಿಲ್ಲುತ್ತಿದೆ. ಕನ್ನಡ ಬಿಗ್​ ಬಾಸ್​ ಇತಿಹಾಸದಲ್ಲಿ ಈ ರೀತಿ ಘಟಿಸುತ್ತಿರುವುದು ಇದೇ ಮೊದಲು. ಕಳೆದ ವರ್ಷ ಕೊರೊನಾ ವೈರಸ್​ ಮೊದಲನೇ ಅಲೆಯಿಂದಾಗಿ ಮಲಯಾಳಂ ಬಿಗ್​ ಬಾಸ್​ ನಿಂತಿತ್ತು.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ರದ್ದು; ವಿನ್ನರ್​ ಯಾರು ಎಂದು ತೀರ್ಮಾನ ಮಾಡಿದ ಪ್ರೇಕ್ಷಕರು

ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಈಡೇರಿತು ರಘು ಗೌಡ ಆಸೆ

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್