AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್​ ನಿಂತೋಯ್ತು; ಕನ್ನಡದ ಈ ಧಾರಾವಾಹಿಗಳ ಪ್ರಸಾರ ಶೀಘ್ರವೇ ಅಂತ್ಯ?

ಮೇ 24ರವರೆಗೆ ಯಾರೊಬ್ಬರೂ ಧಾರಾವಾಹಿ/ ರಿಯಾಲಿಟಿ ಶೋ ಶೂಟಿಂಗ್​​ ಮಾಡುವಂತಿಲ್ಲ ಎಂದು ಟೆಲಿವಿಷನ್​ ಅಸೋಸಿಯೇಷನ್​ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಒಂದೊಮ್ಮೆ ಈ ಆದೇಶ ಮೀರಿದರೆ ಶಿಕ್ಷೆ ನೀಡುವ ಎಚ್ಚರಿಕೆ ಕೂಡ ನೀಡಲಾಗಿದೆ.

ಶೂಟಿಂಗ್​ ನಿಂತೋಯ್ತು; ಕನ್ನಡದ ಈ ಧಾರಾವಾಹಿಗಳ ಪ್ರಸಾರ ಶೀಘ್ರವೇ ಅಂತ್ಯ?
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: May 10, 2021 | 3:19 PM

Share

ಕೊರೊನಾ ವೈರಸ್​ ಎರಡನೇ ಅಲೆ ಮಿತಿ ಮೀರಿ ಹರಡುತ್ತಿದೆ. ಇದನ್ನು ನಿಯಂತ್ರಿಸೋಕೆ ಸರ್ಕಾರ 14 ದಿನಗಳ ಲಾಕ್​ಡೌನ್​ ಘೋಷಣೆ ಮಾಡಿದೆ. ಇದರಿಂದ ಸಿನಿಮಾ, ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳ ಶೂಟಿಂಗ್​ಗಳು ಸ್ಥಗಿತಗೊಂಡಿದೆ. ಇದು ಧಾರಾವಾಹಿ ಪ್ರಸಾರದ ಮೇಲೆ ಪ್ರಭಾವ ಉಂಟು ಮಾಡಿದೆ. ಕೆಲವೇ ದಿನಗಳಲ್ಲಿ ಬಹುತೇಕ ಧಾರಾವಾಹಿಗಳ ಪ್ರಸಾರ ತಾತ್ಕಾಲಿಕವಾಗಿ ನಿಲ್ಲಲಿದೆ ಎನ್ನಲಾಗುತ್ತಿದೆ.

ಮೇ 24ರವರೆಗೆ ಯಾರೊಬ್ಬರೂ ಧಾರಾವಾಹಿ/ ರಿಯಾಲಿಟಿ ಶೋ ಶೂಟಿಂಗ್​​ ಮಾಡುವಂತಿಲ್ಲ ಎಂದು ಟೆಲಿವಿಷನ್​ ಅಸೋಸಿಯೇಷನ್​ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಒಂದೊಮ್ಮೆ ಈ ಆದೇಶ ಮೀರಿದರೆ ಶಿಕ್ಷೆ ನೀಡುವ ಎಚ್ಚರಿಕೆ ಕೂಡ ನೀಡಲಾಗಿದೆ. ಹೀಗಾಗಿ, ಬಿಗ್​ ಬಾಸ್​ ರಿಯಾಲಿಟಿ ಶೋ ಅರ್ಧಕ್ಕೆ ನಿಂತಿದೆ. ಧಾರಾವಾಹಿಗಳ ಚಿತ್ರೀಕರಣ ಕೂಡ ಸ್ಥಗಿತಗೊಂಡಿದೆ.

ಸಾಮಾನ್ಯವಾಗಿ ಧಾರಾವಾಹಿಗಳ ತಂಡಗಳು ಒಂದು ವಾರಕ್ಕೆ ಸಾಕಾಗುವಷ್ಟು ಎಪಿಸೋಡ್​ಗಳನ್ನು ಬ್ಯಾಂಕ್​ ಮಾಡಿ ಇಟ್ಟುಕೊಂಡಿರುತ್ತವೆ. ಕೆಲ ಧಾರಾವಾಹಿ ತಂಡಗಳ ಬಳಿ ಎರಡು ವಾರಕ್ಕೆ ಸಾಕಾಗುವಷ್ಟು ದೃಶ್ಯಗಳೂ ಇರಬಹುದು. ಇವುಗಳನ್ನು ಈಗ ಟೆಲಿಕಾಸ್ಟ್​ ಮಾಡಬಹುದು. ಹೊಸದಾಗಿ ಮತ್ತೆ ಶೂಟಿಂಗ್​ ಮಾಡಬೇಕು ಎಂದರೆ ಲಾಕ್​ಡೌನ್​ ಮುಗಿಯುವವರೆಗೆ ಕಾಯಲೇಬೇಕು.

ಶೂಟ್​ ಮಾಡಲಾದ ದೃಶ್ಯಗಳ ಪ್ರಸಾರ ಪೂರ್ಣಗೊಂಡ ನಂತರದಲ್ಲಿ ಧಾರಾವಾಹಿಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಗುತ್ತದೆ. ಮತ್ತೆ ಚಿತ್ರೀಕರಣಕ್ಕೆ ಅನುಮತಿ ಸಿಕ್ಕ ನಂತರೇ ಧಾರಾವಾಹಿಗಳ ಪ್ರಸಾರ ಆರಂಭವಾಗಲಿದೆ. ಅಲ್ಲಿಯವರೆಗೆ ಹಳೆಯ ಎಪಿಸೋಡ್​ಗಳನ್ನು ಮರು ಪ್ರಸಾರ ಮಾಡುವ ಕಾರ್ಯದಲ್ಲಿ ವಾಹಿನಿಗಳು ತೊಡಗಬಹುದು.

ಕೊರೊನಾ ವೈರಸ್​ ನಿಯಂತ್ರಣಕ್ಕೆ ಬಂದಿಲ್ಲ ಎಂದಾದರೆ 14 ದಿನಗಳ ಲಾಕ್​ಡೌನ್​ ವಿಸ್ತರಣೆ ಆಗಲಿದೆ. ಮತ್ತೆ 14 ದಿನ ಲಾಕ್​ಡೌನ್​ ವಿಸ್ತರಣೆ ಆದರೆ, ಅಲ್ಲಿಯವರೆಗೆ ಮತ್ತೆ ಶೂಟಿಂಗ್​ಗೆ ಅವಕಾಶ ಇರುವುದಿಲ್ಲ. ಹೀಗಾಗಿ, ಕನ್ನಡದ ಬಹುತೇಕ ಧಾರಾವಾಹಿಗಳು ಶೀಘ್ರವೇ ತಾತ್ಕಾಲಿಕವಾಗಿ ನಿಲ್ಲಲಿವೆ.

ಕೊರೊನಾ ಮೊದಲನೇ ಅಲೆ ಕಾಣಿಸಿಕೊಂಡಾಗ ಲಾಕ್​ಡೌನ್​ ಘೋಷಣೆ ಮಾಡಲಾಗಿತ್ತು. ಆಗಲೂ ಧಾರಾವಾಹಿಗಳಿಗೆ ಇದೇ ತೊಂದರೆ ಉಂಟಾಗಿತ್ತು. ಕೆಲ ಧಾರಾವಾಹಿಗಳನ್ನು ಅರ್ಧಕ್ಕೆ ನಿಲ್ಲಿಸಲಾಯಿತು. ಇನ್ನೂ ಕೆಲ ಧಾರಾವಾಹಿ ತಂಡಗಳು, ಎಲ್ಲವೂ ಸಹಜ ಸ್ಥಿತಿಗೆ ಬಂದ ನಂತರದಲ್ಲಿ ಶೂಟಿಂಗ್​ ಆರಂಭಿಸಿದ್ದವು. ಈ ಬಾರಿಯ ಲಾಕ್​ಡೌನ್​ನಲ್ಲಿ ಎಷ್ಟು ಧಾರಾವಾಹಿಗಳು ಅರ್ಧಕ್ಕೆ ನಿಲ್ಲುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: BBK8: ರಘು ಗೌಡ ಬಿಗ್​ ಬಾಸ್​ನಿಂದ ಹೊರ​ಬಂದಾಗ ಹೆಂಡತಿ ಮನೆಯೊಳಗೆ ಸೇರಿಸೋದು ಅನುಮಾನ

Bigg Boss Kannada: ಕೊರೊನಾ ವಿಷಯ ಗೊತ್ತಾಗಿ ಕಣ್ಣೀರು ಹಾಕುತ್ತ ಬಿಗ್​ ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿಗಳು

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು