AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೂರ್ಖರು, ಮತಾಂಧರು ಬೊಗಳುತ್ತಾರೆ, ಕಚ್ಚಲ್ಲ’; ‘ಪಠಾಣ್​’ ಟೀಕಿಸಿದವರಿಗೆ ಪ್ರಕಾಶ್ ರಾಜ್ ತಿರುಗೇಟು

‘ಪಠಾಣ್’ ಸಿನಿಮಾ ರಿಲೀಸ್​ಗೂ ಮೊದಲು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಒಂದು ವರ್ಗದ ಜನರು ಆಗ್ರಹಿಸಿದ್ದರು. ಆದರೆ, ಇದು ಕೆಲಸ ಮಾಡಿಲ್ಲ.

‘ಮೂರ್ಖರು, ಮತಾಂಧರು ಬೊಗಳುತ್ತಾರೆ, ಕಚ್ಚಲ್ಲ’; ‘ಪಠಾಣ್​’ ಟೀಕಿಸಿದವರಿಗೆ ಪ್ರಕಾಶ್ ರಾಜ್ ತಿರುಗೇಟು
ಪ್ರಕಾಶ್ ರಾಜ್
ರಾಜೇಶ್ ದುಗ್ಗುಮನೆ
|

Updated on:Feb 07, 2023 | 11:10 AM

Share

ಪ್ರಕಾಶ್ ರಾಜ್ (Prakash Raj) ಅವರು ತಮ್ಮ ನಟನೆ ಮೂಲಕ ಅನೇಕರಿಗೆ ಇಷ್ಟವಾಗುತ್ತಾರೆ. ಆದರೆ, ಒಂದು ವರ್ಗದ ಜನರಿಗೆ ಅವರ ಚಿಂತನೆಗಳು ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಕೆಲವರು ಅವರನ್ನು ದ್ವೇಷ ಮಾಡುತ್ತಾರೆ. ಆದರೆ, ಪ್ರಕಾಶ್ ರಾಜ್ ಎಂದಿಗೂ ಸುಮ್ಮನೆ ಕೂತವರಲ್ಲ. ತಮ್ಮ ಅಭಿಪ್ರಾಯಗಳನ್ನು ಅವರು ಹಂಚಿಕೊಳ್ಳುತ್ತಲೇ ಇರುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಅವರು ಅನೇಕ ಬಾರಿ ಟೀಕೆ ಮಾಡಿದ್ದಾರೆ. ಈಗ ‘ಪಠಾಣ್’ ಸಿನಿಮಾ (Pathaan Movie) ಯಶಸ್ಸಿನ ಬಗ್ಗೆ ಪ್ರಕಾಶ್ ರಾಜ್ ಮಾತನಾಡಿದ್ದಾರೆ. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್ ಬಗ್ಗೆಯೂ ಟೀಕೆ ಮಾಡಿದ್ದಾರೆ.

‘ಪಠಾಣ್’ ಸಿನಿಮಾ ರಿಲೀಸ್​ಗೂ ಮೊದಲು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಒಂದು ವರ್ಗದ ಜನರು ಆಗ್ರಹಿಸಿದ್ದರು. ಆದರೆ, ಇದು ಕೆಲಸ ಮಾಡಿಲ್ಲ. ಈ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಈ ವಿಚಾರ ಇಟ್ಟುಕೊಂಡು ಕೆಲವರು ಬೈಕಾಟ್ ಗ್ಯಾಂಗ್​ನ ಟೀಕೆ ಮಾಡುತ್ತಿದ್ದಾರೆ. ಪ್ರಕಾಶ್ ರಾಜ್ ಕೂಡ ಈ ಬಗ್ಗೆ ಮಾತನಾಡಿದ್ದಾರೆ.

ಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಪ್ರಕಾಶ್ ರಾಜ್​, ‘ಅವರು ಪಠಾಣ್ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಅಂದುಕೊಂಡಿದ್ದರು. ಆದರೆ, ಈ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮೂರ್ಖರು, ಮತಾಂಧರು ಪಠಾಣ್​ನ ಬ್ಯಾನ್ ಮಾಡಲು ಬಯಸಿದ್ದರು. ಅವರಿಗೆ ಮೋದಿ ಸಿನಿಮಾಗೆ 30 ಕೋಟಿ ರೂಪಾಯಿ ಕಲೆಕ್ಷನ್ ಮಾಡಿಸಲು ಸಾಧ್ಯವಾಗಿಲ್ಲ. ಅವರು ಬೊಗಳುತ್ತಾರೆ, ಕಚ್ಚುವುದಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ‘ನನ್ನನ್ನು ದೂರ ಇಟ್ಟಿದ್ದಾರೆ’; ರಾಜಕೀಯ ನಿಲುವುಗಳಿಂದ ಪ್ರಕಾಶ್ ರಾಜ್​​ಗೆ ತಪ್ಪುತ್ತಿದೆ ಸಿನಿಮಾ ಆಫರ್

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನೂ ಪ್ರಕಾಶ್ ರಾಜ್ ಟೀಕೆ ಮಾಡಿದ್ದಾರೆ. ‘ಕಾಶ್ಮೀರ್ ಫೈಲ್ಸ್​ ನಾನ್ಸೆನ್ಸ್ ಸಿನಿಮಾ. ಅದನ್ನು ನಿರ್ಮಾಣ ಮಾಡಿದ್ದು ಯಾರು ಅನ್ನೋದು ನಿಮಗೆ ಗೊತ್ತಿದೆ. ಅಂತಾರಾಷ್ಟ್ರಿಯ ಜ್ಯೂರಿಗಳು ಚಿತ್ರವನ್ನು ತೆಗಳಿದರು. ಈ ಚಿತ್ರದ ನಿರ್ದೇಶಕ ನಮ್ಮ ಚಿತ್ರಕ್ಕೆ ಏಕೆ ಆಸ್ಕರ್ ಸಿಗುತ್ತಿಲ್ಲ ಎಂದು ಕೇಳುತ್ತಿದ್ದಾರೆ. ಇಲ್ಲಿ ನೀವು ಪ್ರೊಪೊಗಾಂಡ ಚಿತ್ರಗಳನ್ನು ಮಾಡಬಹುದು. ಈ ರೀತಿಯ ಸಿನಿಮಾಗಳನ್ನು ನಿರ್ಮಾಣ ಮಾಡಲು ಅವರು 2000 ಸಾವಿರ ಕೋಟಿ ಹೂಡಿಕೆ ಮಾಡಿದ್ದಾರೆ. ಆದರೆ, ಎಲ್ಲಾ ಬಾರಿಯೂ ಜನ್ನರು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:01 am, Tue, 7 February 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ