AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಾನ್ಸ್ ಕೊಡ್ತೀವಿ, ಕಮಿಟ್​ಮೆಂಟ್ ಕೊಡು ಅಂದ್ರು’; ನಯನತಾರಾಗೂ ಆಗಿತ್ತು ಕಹಿ ಅನುಭವ

ಅವಕಾಶ ನೀಡುವುದಾಗಿ ಹೇಳಿ ನಟಿಯರನ್ನು ಬಳಸಿಕೊಳ್ಳುವ ಅನೇಕ ನಿರ್ಮಾಪಕರು ಇದ್ದಾರೆ. ಚಿತ್ರರಂಗದಲ್ಲಿ ಅನೇಕರಿಗೆ ಈ ರೀತಿಯ ಅನುಭವ ಆಗಿದೆ.

‘ಚಾನ್ಸ್ ಕೊಡ್ತೀವಿ, ಕಮಿಟ್​ಮೆಂಟ್ ಕೊಡು ಅಂದ್ರು’; ನಯನತಾರಾಗೂ ಆಗಿತ್ತು ಕಹಿ ಅನುಭವ
ನಯನತಾರಾ
ರಾಜೇಶ್ ದುಗ್ಗುಮನೆ
|

Updated on: Feb 02, 2023 | 3:17 PM

Share

ನಟಿ ನಯನತಾರಾ (Nayanthara) ಅವರು ಬೇಡಿಕೆಯ ನಟಿ ಆಗಿದ್ದಾರೆ. 2022 ಅವರ ಪಾಲಿಗೆ ವಿಶೇಷ ಆಗಿತ್ತು. ಪ್ರಿಯಕರ ವಿಘ್ನೇಶ್ ಶಿವನ್ ಜತೆ ಅವರು ಮದುವೆ ಆದರು. ಬಾಡಿಗೆ ತಾಯ್ತನದ ಮೂಲಕ ಅವಳಿ ಮಗು ಪಡೆದರು. ಈಗ ನಯನತಾರಾ ಅವರು ತಮಗೆ ಉಂಟಾದ ಕಹಿ ಅನುಭವದ ಬಗ್ಗೆ ಹೇಳಿಕೊಂಡಿದ್ದಾರೆ. ಅವರಿಗೂ ಕಾಸ್ಟಿಂಗ್ ಕೌಚ್ (Casting Couch) ಅನುಭವ ಆಗಿತ್ತು. ಇತ್ತೀಚೆಗೆ ಮಾಧ್ಯಮದವರ ಜತೆ ಮಾತನಾಡುತ್ತಾ ನಯನತಾರಾ ಈ ವಿಚಾರವನ್ನು ಹೇಳಿದ್ದಾರೆ.

ನಯನತಾರಾ ಮಲಯಾಳಂ ಚಿತ್ರರಂಗದಲ್ಲಿ ನಟಿಸುವ ಮೂಲಕ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಅವರಿಗೆ ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸೋಕೆ ಅವಕಾಶ ಸಿಕ್ಕಿತು. ಅವರು ಚಿತ್ರರಂಗಕ್ಕೆ ಬಂದು 30 ವರ್ಷಗಳು ಪೂರ್ಣಗೊಂಡಿವೆ. ಈಗ ಅವರು ತಮ್ಮ ವೃತ್ತಿ ಜೀವನದಲ್ಲಿ ನಡೆದ ಘಟನೆ ಬಗ್ಗೆ ಹೇಳಿದ್ದಾರೆ.

ಅವಕಾಶ ನೀಡುವುದಾಗಿ ಹೇಳಿ ನಟಿಯರನ್ನು ಬಳಸಿಕೊಳ್ಳುವ ಅನೇಕ ನಿರ್ಮಾಪಕರು ಇದ್ದಾರೆ. ಚಿತ್ರರಂಗದಲ್ಲಿ ಅನೇಕರಿಗೆ ಈ ರೀತಿಯ ಅನುಭವ ಆಗಿದೆ. ಮೀಟೂ ಅಭಿಯಾನ ಶುರುವಾದಾಗ ಸಾಕಷ್ಟು ನಟಿಯರು ಈ ಬಗ್ಗೆ ಮೌನ ಮುರಿದಿದ್ದರು. ಅನೇಕರು ತಮಗೆ ಕಿರುಕುಳ ನೀಡಿದವರು ಹೆಸರನ್ನು ಹೇಳಿದರೆ, ಇನ್ನೂ ಕೆಲವರು ಹೆಸರನ್ನು ರಿವೀಲ್ ಮಾಡದೆ ತಮಗಾದ ಕೆಟ್ಟ ಅನುಭವದ ಬಗ್ಗೆ ಮಾತನಾಡಿದ್ದರು.

ಇದನ್ನೂ ಓದಿ
Image
Nayanthara Marriage: ಪ್ರಭುದೇವ ಜತೆ ಡೇಟಿಂಗ್​ ಮಾಡುತ್ತಿದ್ದ ನಯನತಾರಾ ಬ್ರೇಕಪ್​ ಮಾಡಿಕೊಂಡಿದ್ದು ಯಾಕೆ?
Image
Nayanthara Vignesh Shivan Wedding: ನಯನತಾರಾ-ವಿಘ್ನೇಶ್​ ಮದುವೆಗೆ ಬಂದ ಶಾರುಖ್​ ಖಾನ್​, ರಜನಿಕಾಂತ್​; ಇಲ್ಲಿವೆ ಫೋಟೋಗಳು
Image
Nayanthara Vignesh Wedding: ‘ಸೂಪರ್​’ ಚಿತ್ರದ ನಟಿ​ ನಯನತಾರಾಗೆ ಮದುವೆ ಸಂಭ್ರಮ; ವಿಘ್ನೇಶ್​ ಶಿವನ್​ ಕೈ ಹಿಡಿದ ಸುಂದರಿ
Image
Nayanthara Wedding: ನಯನತಾರಾ ಜತೆ ಮದುವೆ ಆಗೋಕಿಂತ ಕೆಲವೇ ಗಂಟೆ ಮುನ್ನ ಪ್ರಮುಖರಿಗೆ ಧನ್ಯವಾದ ತಿಳಿಸಿದ ವಿಘ್ನೇಶ್​ ಶಿವನ್​

ನಯನತಾರಾ ಕೂಡ ಈಗ ಈ ಬಗ್ಗೆ ಮಾತನಾಡಿದ್ದಾರೆ. ‘ಸಿನಿಮಾ ರಂಗಕ್ಕೆ ನಾನು ಕಾಲಿಟ್ಟ ಆರಂಭದಲ್ಲಿ ಕಾಸ್ಟಿಂಗ್​ಕೌಚ್ ಅನುಭವ ಎದುರಿಸಿದ್ದೆ. ಸಿನಿಮಾ ಆಫರ್​ ಕೊಡ್ತೀವಿ ಪ್ರತಿಯಾಗಿ ಕಮಿಟ್​​ಮೆಂಟ್ ಕೊಡುವಂತೆ ಅವರು ಕೇಳಿದ್ದರು. ಆದರೆ, ನಾನು ಅದನ್ನು ತಿರಸ್ಕರಿಸಿ ಬಂದೆ. ನನ್ನ ನಟನೆಯ ಮೇಲೆ ನನಗೆ ನಂಬಿಕೆ ಇತ್ತು’ ಎಂದಿದ್ದಾರೆ ನಯನತಾರಾ.

ಇದನ್ನೂ ಓದಿ: Surrogacy: ಬಾಡಿಗೆ ತಾಯ್ತನದಿಂದ ನಯನತಾರಾ ಮಗು ಪಡೆದ ಪ್ರಕರಣ; ಆಸ್ಪತ್ರೆ ಬಂದ್​ ಮಾಡಿಸಲು ಶಿಫಾರಸ್ಸು

ನಯನತಾರಾ ಅವರು ಸದ್ಯ ‘ಜವಾನ್​’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶಾರುಖ್ ಖಾನ್ ನಟನೆಯ ಈ ಚಿತ್ರಕ್ಕೆ ಅಟ್ಲಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಶಾರುಖ್ ಖಾನ್ ಅವರು ‘ಪಠಾಣ್​’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ತಿಂಗಳಾಂತ್ಯಕ್ಕೆ ಸಿನಿಮಾ ಕೆಲಸಗಳು ಮತ್ತೆ ಆರಂಭ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..