AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಾನ್ಸ್ ಕೊಡ್ತೀವಿ, ಕಮಿಟ್​ಮೆಂಟ್ ಕೊಡು ಅಂದ್ರು’; ನಯನತಾರಾಗೂ ಆಗಿತ್ತು ಕಹಿ ಅನುಭವ

ಅವಕಾಶ ನೀಡುವುದಾಗಿ ಹೇಳಿ ನಟಿಯರನ್ನು ಬಳಸಿಕೊಳ್ಳುವ ಅನೇಕ ನಿರ್ಮಾಪಕರು ಇದ್ದಾರೆ. ಚಿತ್ರರಂಗದಲ್ಲಿ ಅನೇಕರಿಗೆ ಈ ರೀತಿಯ ಅನುಭವ ಆಗಿದೆ.

‘ಚಾನ್ಸ್ ಕೊಡ್ತೀವಿ, ಕಮಿಟ್​ಮೆಂಟ್ ಕೊಡು ಅಂದ್ರು’; ನಯನತಾರಾಗೂ ಆಗಿತ್ತು ಕಹಿ ಅನುಭವ
ನಯನತಾರಾ
ರಾಜೇಶ್ ದುಗ್ಗುಮನೆ
|

Updated on: Feb 02, 2023 | 3:17 PM

Share

ನಟಿ ನಯನತಾರಾ (Nayanthara) ಅವರು ಬೇಡಿಕೆಯ ನಟಿ ಆಗಿದ್ದಾರೆ. 2022 ಅವರ ಪಾಲಿಗೆ ವಿಶೇಷ ಆಗಿತ್ತು. ಪ್ರಿಯಕರ ವಿಘ್ನೇಶ್ ಶಿವನ್ ಜತೆ ಅವರು ಮದುವೆ ಆದರು. ಬಾಡಿಗೆ ತಾಯ್ತನದ ಮೂಲಕ ಅವಳಿ ಮಗು ಪಡೆದರು. ಈಗ ನಯನತಾರಾ ಅವರು ತಮಗೆ ಉಂಟಾದ ಕಹಿ ಅನುಭವದ ಬಗ್ಗೆ ಹೇಳಿಕೊಂಡಿದ್ದಾರೆ. ಅವರಿಗೂ ಕಾಸ್ಟಿಂಗ್ ಕೌಚ್ (Casting Couch) ಅನುಭವ ಆಗಿತ್ತು. ಇತ್ತೀಚೆಗೆ ಮಾಧ್ಯಮದವರ ಜತೆ ಮಾತನಾಡುತ್ತಾ ನಯನತಾರಾ ಈ ವಿಚಾರವನ್ನು ಹೇಳಿದ್ದಾರೆ.

ನಯನತಾರಾ ಮಲಯಾಳಂ ಚಿತ್ರರಂಗದಲ್ಲಿ ನಟಿಸುವ ಮೂಲಕ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಅವರಿಗೆ ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸೋಕೆ ಅವಕಾಶ ಸಿಕ್ಕಿತು. ಅವರು ಚಿತ್ರರಂಗಕ್ಕೆ ಬಂದು 30 ವರ್ಷಗಳು ಪೂರ್ಣಗೊಂಡಿವೆ. ಈಗ ಅವರು ತಮ್ಮ ವೃತ್ತಿ ಜೀವನದಲ್ಲಿ ನಡೆದ ಘಟನೆ ಬಗ್ಗೆ ಹೇಳಿದ್ದಾರೆ.

ಅವಕಾಶ ನೀಡುವುದಾಗಿ ಹೇಳಿ ನಟಿಯರನ್ನು ಬಳಸಿಕೊಳ್ಳುವ ಅನೇಕ ನಿರ್ಮಾಪಕರು ಇದ್ದಾರೆ. ಚಿತ್ರರಂಗದಲ್ಲಿ ಅನೇಕರಿಗೆ ಈ ರೀತಿಯ ಅನುಭವ ಆಗಿದೆ. ಮೀಟೂ ಅಭಿಯಾನ ಶುರುವಾದಾಗ ಸಾಕಷ್ಟು ನಟಿಯರು ಈ ಬಗ್ಗೆ ಮೌನ ಮುರಿದಿದ್ದರು. ಅನೇಕರು ತಮಗೆ ಕಿರುಕುಳ ನೀಡಿದವರು ಹೆಸರನ್ನು ಹೇಳಿದರೆ, ಇನ್ನೂ ಕೆಲವರು ಹೆಸರನ್ನು ರಿವೀಲ್ ಮಾಡದೆ ತಮಗಾದ ಕೆಟ್ಟ ಅನುಭವದ ಬಗ್ಗೆ ಮಾತನಾಡಿದ್ದರು.

ಇದನ್ನೂ ಓದಿ
Image
Nayanthara Marriage: ಪ್ರಭುದೇವ ಜತೆ ಡೇಟಿಂಗ್​ ಮಾಡುತ್ತಿದ್ದ ನಯನತಾರಾ ಬ್ರೇಕಪ್​ ಮಾಡಿಕೊಂಡಿದ್ದು ಯಾಕೆ?
Image
Nayanthara Vignesh Shivan Wedding: ನಯನತಾರಾ-ವಿಘ್ನೇಶ್​ ಮದುವೆಗೆ ಬಂದ ಶಾರುಖ್​ ಖಾನ್​, ರಜನಿಕಾಂತ್​; ಇಲ್ಲಿವೆ ಫೋಟೋಗಳು
Image
Nayanthara Vignesh Wedding: ‘ಸೂಪರ್​’ ಚಿತ್ರದ ನಟಿ​ ನಯನತಾರಾಗೆ ಮದುವೆ ಸಂಭ್ರಮ; ವಿಘ್ನೇಶ್​ ಶಿವನ್​ ಕೈ ಹಿಡಿದ ಸುಂದರಿ
Image
Nayanthara Wedding: ನಯನತಾರಾ ಜತೆ ಮದುವೆ ಆಗೋಕಿಂತ ಕೆಲವೇ ಗಂಟೆ ಮುನ್ನ ಪ್ರಮುಖರಿಗೆ ಧನ್ಯವಾದ ತಿಳಿಸಿದ ವಿಘ್ನೇಶ್​ ಶಿವನ್​

ನಯನತಾರಾ ಕೂಡ ಈಗ ಈ ಬಗ್ಗೆ ಮಾತನಾಡಿದ್ದಾರೆ. ‘ಸಿನಿಮಾ ರಂಗಕ್ಕೆ ನಾನು ಕಾಲಿಟ್ಟ ಆರಂಭದಲ್ಲಿ ಕಾಸ್ಟಿಂಗ್​ಕೌಚ್ ಅನುಭವ ಎದುರಿಸಿದ್ದೆ. ಸಿನಿಮಾ ಆಫರ್​ ಕೊಡ್ತೀವಿ ಪ್ರತಿಯಾಗಿ ಕಮಿಟ್​​ಮೆಂಟ್ ಕೊಡುವಂತೆ ಅವರು ಕೇಳಿದ್ದರು. ಆದರೆ, ನಾನು ಅದನ್ನು ತಿರಸ್ಕರಿಸಿ ಬಂದೆ. ನನ್ನ ನಟನೆಯ ಮೇಲೆ ನನಗೆ ನಂಬಿಕೆ ಇತ್ತು’ ಎಂದಿದ್ದಾರೆ ನಯನತಾರಾ.

ಇದನ್ನೂ ಓದಿ: Surrogacy: ಬಾಡಿಗೆ ತಾಯ್ತನದಿಂದ ನಯನತಾರಾ ಮಗು ಪಡೆದ ಪ್ರಕರಣ; ಆಸ್ಪತ್ರೆ ಬಂದ್​ ಮಾಡಿಸಲು ಶಿಫಾರಸ್ಸು

ನಯನತಾರಾ ಅವರು ಸದ್ಯ ‘ಜವಾನ್​’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶಾರುಖ್ ಖಾನ್ ನಟನೆಯ ಈ ಚಿತ್ರಕ್ಕೆ ಅಟ್ಲಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಶಾರುಖ್ ಖಾನ್ ಅವರು ‘ಪಠಾಣ್​’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ತಿಂಗಳಾಂತ್ಯಕ್ಕೆ ಸಿನಿಮಾ ಕೆಲಸಗಳು ಮತ್ತೆ ಆರಂಭ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ