AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರೀತಿಸುವ ಮುನ್ನ ಯೋಚಿಸಿ’; ಅಕ್ಕಿನೇನಿ ಕುಟುಂಬದ ಕಡೆಯಿಂದ ರಿಲೇಶನ್​ಶಿಪ್ ಟಿಪ್ಸ್​

ಅಖಿಲ್​ ಅವರ ನಟನೆಯ ‘ಮೋಸ್ಟ್​ ಎಲಿಜಬೆಲ್​ ಬ್ಯಾಚುಲರ್​’ ಸಿನಿಮಾ ಅಕ್ಟೋಬರ್​ 15ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ಮಾಧ್ಯಮವನ್ನು ಎದುರಾದರು ಅಖಿಲ್​.

‘ಪ್ರೀತಿಸುವ ಮುನ್ನ ಯೋಚಿಸಿ’; ಅಕ್ಕಿನೇನಿ ಕುಟುಂಬದ ಕಡೆಯಿಂದ ರಿಲೇಶನ್​ಶಿಪ್ ಟಿಪ್ಸ್​
ಅಕ್ಕಿನೇನಿ ಫ್ಯಾಮಿಲಿ
TV9 Web
| Edited By: |

Updated on: Oct 14, 2021 | 7:23 PM

Share

ಅಕ್ಕಿನೇನಿ ಕುಟುಂಬ ಇತ್ತೀಚೆಗೆ ಹೆಚ್ಚು ಚರ್ಚೆಯಲ್ಲಿದೆ. ಇದಕ್ಕೆ ಕಾರಣ ನಾಗ ಚೈತನ್ಯ ಹಾಗೂ ಸಮಂತಾ ಅವರ ವಿಚ್ಛೇದನ. ಈ ವಿಚಾರ ಇನ್ನೂ ಚರ್ಚೆಯಲ್ಲಿರುವಾಗಲೇ ಅಕ್ಕಿನೇನಿ ಕುಟುಂಬದ ಕಡೆಯಿಂದ ರಿಲೇಶನ್​​ಶಿಪ್​ ಟಿಪ್ಸ್​ ಸಿಕ್ಕಿದೆ. ಅಷ್ಟಕ್ಕೂ ಇದನ್ನು ಕೊಟ್ಟಿದ್ದು ಯಾರು? ಆ ಪ್ರಶ್ನೆಗೆ ಉತ್ತರ ನಾಗ ಚೈತನ್ಯ ಸಹೋದರ ಅಖಿಲ್​.

ಅಖಿಲ್​ ಅವರ ನಟನೆಯ ‘ಮೋಸ್ಟ್​ ಎಲಿಜಬೆಲ್​ ಬ್ಯಾಚುಲರ್​’ ಸಿನಿಮಾ ಅಕ್ಟೋಬರ್​ 15ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ಮಾಧ್ಯಮವನ್ನು ಎದುರಾದರು ಅಖಿಲ್​. ಈ ವೇಳೆ ಅವರಿಗೆ ಪ್ರಶ್ನೆಯೊಂದು ಎದುರಾಯಿತು. ನೀವು ಯುವ ಜನತೆಗೆ ಏನನ್ನು ಹೇಳುತ್ತೀರಿ ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಅವರು, ‘ರಿಲೇಶನ್​ಶಿಪ್​ಗೆ ಬೀಳುವುದಕ್ಕೂ ಮೊದಲು ನಾವು ಯೋಚಿಸುವುದಿಲ್ಲ. ನಾವು ಪ್ರೀತಿಸುವುದಕ್ಕೂ ಮೊದಲು ನಮ್ಮನ್ನು ನಾವು ಪ್ರಶ್ನಿಸಿಕೊಳ್ಳಬೇಕು. ಇದರಿಂದ ಸಾಕಷ್ಟು ಜನರ ಬಾಳಿನ ಮೇಲೆ ಎಫೆಕ್ಟ್​ ಆಗುವುದು ತಪ್ಪುತ್ತದೆ’ ಎಂದಿದ್ದಾರೆ.

ಅಖಿಲ್​ ಅವರು ಕೂಡ ಮದುವೆ ವಿಚಾರದಲ್ಲಿ ಸುದ್ದಿಯಾಗಿದ್ದರು. 2016ರಲ್ಲಿ ಅವರು ಶ್ರಿಯಾ ಭೂಪಾಲ್​ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಶ್ರಿಯಾ ಉದ್ಯಮಿ ಜಿ. ವಿ. ಕೃಷ್ಣ ರೆಡ್ಡಿ ಅವರ ಮೊಮ್ಮಗಳು. ಇಬ್ಬರ ಮದುವೆಯನ್ನು 2017ರಲ್ಲಿ ಯೋಜಿಸಲಾಗಿತ್ತು. ಆದರೆ, ಅವರ ಮದುವೆ ಮುರಿದು ಬಿದ್ದಿತ್ತು.

ಇತ್ತೀಚೆಗೆ ನಾಗ ಚೈತನ್ಯ ಮತ್ತು ಸಮಂತಾ ವಿಚ್ಛೇದನ ಪಡೆದಿದ್ದರು. ‘ಸಾಕಷ್ಟು ಆಲೋಚನೆ ಮಾಡಿದ ನಂತರ ನಾವಿಬ್ಬರು ಪತಿ-ಪತ್ನಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ದಶಕಗಳ ಕಾಲ ಸ್ನೇಹಿತರಾಗಿ ಇದ್ದಿದ್ದಕ್ಕೆ ನಾವಿಬ್ಬರೂ ಅದೃಷ್ಟ ಮಾಡಿದ್ದೆವು. ಆ ಸ್ನೇಹವೇ ನಮ್ಮ ಸಂಬಂಧದ ಶಕ್ತಿಯಾಗಿತ್ತು. ಯಾವಾಗಲೂ ನಮ್ಮ ನಡುವೆ ವಿಶೇಷ ಬಂಧ ಇರಲಿದೆ ಎಂದು ನಂಬಿದ್ದೇವೆ. ಈ ಕಷ್ಟದ ಸಂದರ್ಭದಲ್ಲಿ ನಮಗೆ ಬೆಂಬಲ ನೀಡಿ ಅಂತ ಅಭಿಮಾನಿಗಳು, ಮಾಧ್ಯಮದವರು ಮತ್ತು ಹಿತೈಷಿಗಳಲ್ಲಿ ಮನವಿ ಮಾಡುತ್ತೇವೆ. ಜೀವನದಲ್ಲಿ ಮುಂದಕ್ಕೆ ಸಾಗಲು ನಮಗೆ ಬೇಕಾಗಿರುವ ಖಾಸಗಿತನಕ್ಕೆ ಅವಕಾಶ ಮಾಡಿಕೊಡಿ ಅಂತ ಕೇಳಿಕೊಳ್ಳುತ್ತೇವೆ’ ಎಂದು ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ನಾಗ ಚೈತನ್ಯ ಮತ್ತು ಸಮಂತಾ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ‘ತಾಯಿ ಆಗಲು ಬಯಸಿದ್ರು ಸಮಂತಾ, ಆದರೆ..’; ನಾಗ ಚೈತನ್ಯ ಜತೆಗಿನ ಡಿವೋರ್ಸ್​ ಬಳಿಕ ನಿರ್ಮಾಪಕಿ ಅಚ್ಚರಿ ಹೇಳಿಕೆ

‘ಇಲ್ಲಿ ಕೂರಲು ಭಯವಾಗುತ್ತಿದೆ’; ಡಿವೋರ್ಸ್ ಬಳಿಕ ಮೊದಲ ಬಾರಿಗೆ ಸ್ಕ್ರೀನ್ ಮೇಲೆ ಕಾಣಿಸಿಕೊಂಡ ಸಮಂತಾ ಮಾತು

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ