AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಡೋರ್​ ಓಪನ್​ ಆದರೆ ಸಾವಿನ ಕದ ತೆರೆದಂತಾಗುತ್ತದೆ’: ಮಂಜು ಪಾವಗಡ ಹೀಗೆ ಬೆಚ್ಚಿ ಬಿದ್ದಿದ್ಯಾಕೆ?

ಮಂಜು ಅವರಿಗೆ ಮನೆಯಿಂದ ಹೊರ ಹೋಗುವ ಆತಂಕ ಕಾಡಿದೆ. ಭಾನುವಾರ (ಮಾರ್ಚ್​ 28) ಚಂದ್ರಕಲಾ ಮೋಹನ್​ ಹೊರ ಹೋದ ನಂತರ ಮನೆಯ ಕೆಲವರು ಸ್ಪರ್ಧಿಗಳ ಜತೆ ಮಂಜು ಈ ಬಗ್ಗೆ ಮಾತನಾಡಿದ್ದಾರೆ.

‘ಆ ಡೋರ್​ ಓಪನ್​ ಆದರೆ ಸಾವಿನ ಕದ ತೆರೆದಂತಾಗುತ್ತದೆ’: ಮಂಜು ಪಾವಗಡ ಹೀಗೆ ಬೆಚ್ಚಿ ಬಿದ್ದಿದ್ಯಾಕೆ?
ಬಿಗ್ ​ಬಾಸ್​ ಮನೆ
ರಾಜೇಶ್ ದುಗ್ಗುಮನೆ
| Edited By: |

Updated on: Mar 30, 2021 | 7:28 AM

Share

ಬಿಗ್​ ಬಾಸ್​ ಮನೆಯಿಂದ ನಾಲ್ಕನೇ ಸ್ಪರ್ಧಿಯಾಗಿ ಚಂದ್ರಕಲಾ ಮೋಹನ್​ ಹೊರ ಹೋಗಿದ್ದಾರೆ. ಈಗ ಮನೆಯಲ್ಲಿ 13 ಸ್ಪರ್ಧಿಗಳು ಉಳಿದುಕೊಂಡಂತಾಗಿದೆ. ಈ ಎಲ್ಲಾ ಸ್ಪರ್ಧಿಗಳು ನಾಲ್ಕು ವಾರದ ಎಲಿಮಿನೇಷನ್​ ಪ್ರಕ್ರಿಯೆಯನ್ನು ನೋಡಿದ್ದಾರೆ. ಇದು ಮನೆಯ ಅನೇಕರಿಗೆ ಆತಂಕ ಮೂಡಿಸಿದೆ. ಈ ಬಗ್ಗೆ ಮಂಜು ಪಾವಗಡ ಕೂಡ ಆತಂಕ ಹೊರ ಹಾಕಿದ್ದಾರೆ. ಬಿಗ್​ ಬಾಸ್ ಮನೆಯಲ್ಲಿ ಮಂಜು ಪಾವಗಡ ಸ್ಟ್ರಾಂಗೆಸ್ಟ್​ ಕ್ಯಾಂಡಿಡೇಟ್​ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ನಾಲ್ಕನೇ ವಾರದ ಎಲಿಮಿನೇಷನ್​ನಲ್ಲಿ ಮೊದಲು ಸೇಫ್​ ಆಗಿದ್ದು ಅವರೇ. ಅಂದರೆ, ಅತಿ ಹೆಚ್ಚು ವೋಟ್​ ಬಿದ್ದಿದ್ದು ಅವರಿಗೆ. ಹೀಗಾಗಿ, ಅವರನ್ನು ತುಳಿಯೋ ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ.

ಈ ಮಧ್ಯೆಯೂ ಅವರಿಗೆ ಮನೆಯಿಂದ ಹೊರ ಹೋಗುವ ಆತಂಕ ಕಾಡಿದೆ. ಭಾನುವಾರ (ಮಾರ್ಚ್​ 28) ಚಂದ್ರಕಲಾ ಮೋಹನ್​ ಹೊರ ಹೋದ ನಂತರ ಅವರು ಮನೆಯ ಕೆಲವರು ಸ್ಪರ್ಧಿಗಳ ಜತೆ ಈ ಬಗ್ಗೆ ಮಾತನಾಡಿದ್ದಾರೆ.

ನಾವು ಒಂದು ತಿಂಗಳು ಬಿಗ್​ ಬಾಸ್​ ಮನೆಯಲ್ಲಿ ಕಳೆದಿದ್ದೇವೆ. ಹೀಗಾಗಿ, ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳ ಜತೆ ಒಂದು ಆಳವಾದ ಬಂಧ ಬೆಳೆದಿದೆ. ಈಗ ಮನೆಯಿಂದ ಹೊರ ಹೋಗುತ್ತಾರೆ ಎಂದರೆ ಖಂಡಿತವಾಗಿಯೂ ಬೇಸರ ಆಗಿಯೇ ಆಗುತ್ತದೆ ಎನ್ನುವ ಅಭಿಪ್ರಾಯವನ್ನು ಮಂಜು ವ್ಯಕ್ಯಪಡಿಸಿದರು. ಅಷ್ಟೇ ಅಲ್ಲ, ಮನೆಯವರನ್ನೆಲ್ಲ ಒಳಗೆ ನಿಲ್ಲಿಸಿ, ತಾವು ಗಾರ್ಡನ್​ ಏರಿಯಾಗೆ ಬಂದರು.

ಈ ಮೌನ ನೋಡಿ ನಮಗೆ ತುಂಬಾನೇ ಭಯ ಆಗುತ್ತಿದೆ. ಬಿಗ್​ ಬಾಸ್ ಮನೆಯಿಂದ ಹೊರ ಹೋಗುವ ಬಾಗಿಲನ್ನು ನೋಡಿದರೇ ಭಯ ಆಗುತ್ತದೆ. ಆ ಡೋರ್​ ಓಪನ್​ ಆದರೆ ಸಾವಿನ ಕದ ತೆರೆದಂತಾಗುತ್ತದೆ ಎಂದು ಆತಂಕ ಹೊರ ಹಾಕಿದರು. ಅಲ್ಲದೆ, ನಾನು ಎಲಿಮಿನೇಟ್​ ಆದರೆ, ಮನೆಯಿಂದ ಹೊರ ಹೋಗಲ್ಲ ಎಂದು ಕೂಡ ಹೇಳಿದರು.

ಚಂದ್ರಕಲಾ ಮೋಹನ್ ನಾಲ್ಕನೇ ವಾರ ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ನಾಲ್ಕನೇ ಸ್ಪರ್ಧಿಯಾಗಿ ಅವರು ಬಿಗ್​ ಬಾಸ್​ ಮನೆಯಿಂದ ಹೊರ ನಡೆದಿದ್ದಾರೆ. ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಚಂದ್ರಕಲಾ ಮೋಹನ್​ ಈ ಬಾರಿ ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಎರಡನೇ ಹಿರಿಯ ಸ್ಪರ್ಧಿ ಆಗಿದ್ದರು. ಚಂದ್ರಕಲಾ ಯಾರ ಜತೆಯೂ ಬೆರೆಯುತ್ತಿರಲಿಲ್ಲ. ಹೀಗಾಗಿ, ಅವರು ಮನೆಯವರ ಜತೆ ಹೆಚ್ಚು ಕನೆಕ್ಟ್​ ಆಗಿಲ್ಲ. ಈ ಕಾರಣಕ್ಕೆ ಅವರಿಗೆ ಕಡಿಮೆ ಮತ ಬಿದ್ದಿದೆ.

ಇದನ್ನೂ ಓದಿ: ಬಿಗ್​ ಬಾಸ್​​ ಗೆಲ್ಲೋದು ಅರವಿಂದ್​; ಮುಂದಿನ ವಾರ ಶಂಕರ್​ ಎಲಿಮಿನೇಟ್! ಹಿರಿಯ ನಟಿಯ ಭವಿಷ್ಯ ನಿಜವಾಗತ್ತಾ?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ