Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಡೋರ್​ ಓಪನ್​ ಆದರೆ ಸಾವಿನ ಕದ ತೆರೆದಂತಾಗುತ್ತದೆ’: ಮಂಜು ಪಾವಗಡ ಹೀಗೆ ಬೆಚ್ಚಿ ಬಿದ್ದಿದ್ಯಾಕೆ?

ಮಂಜು ಅವರಿಗೆ ಮನೆಯಿಂದ ಹೊರ ಹೋಗುವ ಆತಂಕ ಕಾಡಿದೆ. ಭಾನುವಾರ (ಮಾರ್ಚ್​ 28) ಚಂದ್ರಕಲಾ ಮೋಹನ್​ ಹೊರ ಹೋದ ನಂತರ ಮನೆಯ ಕೆಲವರು ಸ್ಪರ್ಧಿಗಳ ಜತೆ ಮಂಜು ಈ ಬಗ್ಗೆ ಮಾತನಾಡಿದ್ದಾರೆ.

‘ಆ ಡೋರ್​ ಓಪನ್​ ಆದರೆ ಸಾವಿನ ಕದ ತೆರೆದಂತಾಗುತ್ತದೆ’: ಮಂಜು ಪಾವಗಡ ಹೀಗೆ ಬೆಚ್ಚಿ ಬಿದ್ದಿದ್ಯಾಕೆ?
ಬಿಗ್ ​ಬಾಸ್​ ಮನೆ
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Mar 30, 2021 | 7:28 AM

ಬಿಗ್​ ಬಾಸ್​ ಮನೆಯಿಂದ ನಾಲ್ಕನೇ ಸ್ಪರ್ಧಿಯಾಗಿ ಚಂದ್ರಕಲಾ ಮೋಹನ್​ ಹೊರ ಹೋಗಿದ್ದಾರೆ. ಈಗ ಮನೆಯಲ್ಲಿ 13 ಸ್ಪರ್ಧಿಗಳು ಉಳಿದುಕೊಂಡಂತಾಗಿದೆ. ಈ ಎಲ್ಲಾ ಸ್ಪರ್ಧಿಗಳು ನಾಲ್ಕು ವಾರದ ಎಲಿಮಿನೇಷನ್​ ಪ್ರಕ್ರಿಯೆಯನ್ನು ನೋಡಿದ್ದಾರೆ. ಇದು ಮನೆಯ ಅನೇಕರಿಗೆ ಆತಂಕ ಮೂಡಿಸಿದೆ. ಈ ಬಗ್ಗೆ ಮಂಜು ಪಾವಗಡ ಕೂಡ ಆತಂಕ ಹೊರ ಹಾಕಿದ್ದಾರೆ. ಬಿಗ್​ ಬಾಸ್ ಮನೆಯಲ್ಲಿ ಮಂಜು ಪಾವಗಡ ಸ್ಟ್ರಾಂಗೆಸ್ಟ್​ ಕ್ಯಾಂಡಿಡೇಟ್​ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ನಾಲ್ಕನೇ ವಾರದ ಎಲಿಮಿನೇಷನ್​ನಲ್ಲಿ ಮೊದಲು ಸೇಫ್​ ಆಗಿದ್ದು ಅವರೇ. ಅಂದರೆ, ಅತಿ ಹೆಚ್ಚು ವೋಟ್​ ಬಿದ್ದಿದ್ದು ಅವರಿಗೆ. ಹೀಗಾಗಿ, ಅವರನ್ನು ತುಳಿಯೋ ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ.

ಈ ಮಧ್ಯೆಯೂ ಅವರಿಗೆ ಮನೆಯಿಂದ ಹೊರ ಹೋಗುವ ಆತಂಕ ಕಾಡಿದೆ. ಭಾನುವಾರ (ಮಾರ್ಚ್​ 28) ಚಂದ್ರಕಲಾ ಮೋಹನ್​ ಹೊರ ಹೋದ ನಂತರ ಅವರು ಮನೆಯ ಕೆಲವರು ಸ್ಪರ್ಧಿಗಳ ಜತೆ ಈ ಬಗ್ಗೆ ಮಾತನಾಡಿದ್ದಾರೆ.

ನಾವು ಒಂದು ತಿಂಗಳು ಬಿಗ್​ ಬಾಸ್​ ಮನೆಯಲ್ಲಿ ಕಳೆದಿದ್ದೇವೆ. ಹೀಗಾಗಿ, ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳ ಜತೆ ಒಂದು ಆಳವಾದ ಬಂಧ ಬೆಳೆದಿದೆ. ಈಗ ಮನೆಯಿಂದ ಹೊರ ಹೋಗುತ್ತಾರೆ ಎಂದರೆ ಖಂಡಿತವಾಗಿಯೂ ಬೇಸರ ಆಗಿಯೇ ಆಗುತ್ತದೆ ಎನ್ನುವ ಅಭಿಪ್ರಾಯವನ್ನು ಮಂಜು ವ್ಯಕ್ಯಪಡಿಸಿದರು. ಅಷ್ಟೇ ಅಲ್ಲ, ಮನೆಯವರನ್ನೆಲ್ಲ ಒಳಗೆ ನಿಲ್ಲಿಸಿ, ತಾವು ಗಾರ್ಡನ್​ ಏರಿಯಾಗೆ ಬಂದರು.

ಈ ಮೌನ ನೋಡಿ ನಮಗೆ ತುಂಬಾನೇ ಭಯ ಆಗುತ್ತಿದೆ. ಬಿಗ್​ ಬಾಸ್ ಮನೆಯಿಂದ ಹೊರ ಹೋಗುವ ಬಾಗಿಲನ್ನು ನೋಡಿದರೇ ಭಯ ಆಗುತ್ತದೆ. ಆ ಡೋರ್​ ಓಪನ್​ ಆದರೆ ಸಾವಿನ ಕದ ತೆರೆದಂತಾಗುತ್ತದೆ ಎಂದು ಆತಂಕ ಹೊರ ಹಾಕಿದರು. ಅಲ್ಲದೆ, ನಾನು ಎಲಿಮಿನೇಟ್​ ಆದರೆ, ಮನೆಯಿಂದ ಹೊರ ಹೋಗಲ್ಲ ಎಂದು ಕೂಡ ಹೇಳಿದರು.

ಚಂದ್ರಕಲಾ ಮೋಹನ್ ನಾಲ್ಕನೇ ವಾರ ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ನಾಲ್ಕನೇ ಸ್ಪರ್ಧಿಯಾಗಿ ಅವರು ಬಿಗ್​ ಬಾಸ್​ ಮನೆಯಿಂದ ಹೊರ ನಡೆದಿದ್ದಾರೆ. ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಚಂದ್ರಕಲಾ ಮೋಹನ್​ ಈ ಬಾರಿ ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಎರಡನೇ ಹಿರಿಯ ಸ್ಪರ್ಧಿ ಆಗಿದ್ದರು. ಚಂದ್ರಕಲಾ ಯಾರ ಜತೆಯೂ ಬೆರೆಯುತ್ತಿರಲಿಲ್ಲ. ಹೀಗಾಗಿ, ಅವರು ಮನೆಯವರ ಜತೆ ಹೆಚ್ಚು ಕನೆಕ್ಟ್​ ಆಗಿಲ್ಲ. ಈ ಕಾರಣಕ್ಕೆ ಅವರಿಗೆ ಕಡಿಮೆ ಮತ ಬಿದ್ದಿದೆ.

ಇದನ್ನೂ ಓದಿ: ಬಿಗ್​ ಬಾಸ್​​ ಗೆಲ್ಲೋದು ಅರವಿಂದ್​; ಮುಂದಿನ ವಾರ ಶಂಕರ್​ ಎಲಿಮಿನೇಟ್! ಹಿರಿಯ ನಟಿಯ ಭವಿಷ್ಯ ನಿಜವಾಗತ್ತಾ?

ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್