AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baby Movie: ತಮ್ಮನ ‘ಬೇಬಿ’ ಸಿನಿಮಾ ನೋಡಿಕೊಂಡು ಬಂದು ಅಚ್ಚರಿಯ ಹೇಳಿಕೆ ನೀಡಿದ ವಿಜಯ್​ ದೇವರಕೊಂಡ

Vijay Deverakonda: ‘ಬೇಬಿ’ ಸಿನಿಮಾದಲ್ಲಿ ಒಂದು ರೊಮ್ಯಾಂಟಿಕ್​ ಲವ್​​ಸ್ಟೋರಿ ಇದೆ. ಆದರೆ ಈ ಸಿನಿಮಾದ ಟ್ರೇಲರ್​ ಬಿಡುಗಡೆ ಆದಾಗ ಒಂದಷ್ಟು ವಿವಾದ ಶುರುವಾಗಿತ್ತು.

Baby Movie: ತಮ್ಮನ ‘ಬೇಬಿ’ ಸಿನಿಮಾ ನೋಡಿಕೊಂಡು ಬಂದು ಅಚ್ಚರಿಯ ಹೇಳಿಕೆ ನೀಡಿದ ವಿಜಯ್​ ದೇವರಕೊಂಡ
ವಿಜಯ್​ ದೇವರಕೊಂಡ, ಆನಂದ್​ ದೇವರಕೊಂಡ, ವೈಷ್ಣವಿ ಚೈತನ್ಯ
ಮದನ್​ ಕುಮಾರ್​
|

Updated on: Jul 14, 2023 | 12:31 PM

Share

ನಟ ವಿಜಯ್​ ದೇವರಕೊಂಡ (Vijay Deverakonda) ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಫೇಮಸ್​ ಆಗಿದ್ದಾರೆ. ಅವರು ನಟಿಸಿದ ‘ಲೈಗರ್​’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ಹಾಗಿದ್ದರೂ ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ವಿಜಯ್​ ದೇವರಕೊಂಡ ಮಾತ್ರವಲ್ಲದೇ ಅವರ ಸಹೋದರ ಆನಂದ್​ ದೇವರಕೊಂಡ (Anand Deverakonda) ಕೂಡ ಸಿನಿಮಾ ರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರು ಹೀರೋ ಆಗಿ ನಟಿಸಿರುವ ‘ಬೇಬಿ’ ಸಿನಿಮಾ (Baby Movie) ಬಿಡುಗಡೆ ಆಗಿದೆ. ಈ ಸಿನಿಮಾದ ಪ್ರೀಮಿಯರ್​ಗೆ ವಿಜಯ್​ ದೇವರಕೊಂಡ ಆಗಮಿಸಿದ್ದರು. ಈ ವೇಳೆ ಅವರು ಹೆಚ್ಚು ಮಾತನಾಡಲು ಇಷ್ಟಪಟ್ಟಿಲ್ಲ. ಅಲ್ಲಿ ಅವರು ಹೇಳಿದ್ದು ಏನು? ಇಲ್ಲಿದೆ ವಿವರ..

‘ಬೇಬಿ’ ಸಿನಿಮಾದಲ್ಲಿ ಒಂದು ರೊಮ್ಯಾಂಟಿಕ್​ ಲವ್​​ಸ್ಟೋರಿ ಇದೆ. ಈ ಸಿನಿಮಾದ ಟ್ರೇಲರ್​ ಬಿಡುಗಡೆ ಆದಾಗ ಒಂದಷ್ಟು ವಿವಾದ ಶುರುವಾಗಿತ್ತು. ಹುಡುಗಿಯರ ಮೈಬಣ್ಣದ ಬಗ್ಗೆ ಈ ಸಿನಿಮಾದಲ್ಲಿ ಲೇವಡಿ ಮಾಡಲಾಗಿದೆ ಎಂದು ಕೆಲವರು ತಕರಾರು ತೆಗೆದಿದ್ದರು. ಅಲ್ಲದೇ ಸಿನಿಮಾದ ಅವಧಿ ಹೆಚ್ಚು ದೀರ್ಘವಾಗಿದೆ ಎಂದು ಕೊಂಕು ನುಡಿಯಲಾಗಿತ್ತು. ಆದರೆ ಈಗ ಸಿನಿಮಾ ರಿಲೀಸ್​ ಆಗಿದ್ದು, ಪಾಸಿಟಿವ್​ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ವಿಜಯ್​ ದೇವರಕೊಂಡ ಅವರಿಗೂ ಈ ಸಿನಿಮಾ ಇಷ್ಟ ಆಗಿದೆ.

ಇದನ್ನೂ ಓದಿ: Vijay Devarakonda: ಏಕಕಾಲಕ್ಕೆ ಮೂರು ಸಿನಿಮಾಗಳಲ್ಲಿ ಬ್ಯುಸಿ ಆದ ಟಾಲಿವುಡ್​ ನಟ ವಿಜಯ್​ ದೇವರಕೊಂಡ

ಸಾಯಿ ರಾಜೇಶ್​ ನಿರ್ದೇಶನ ಮಾಡಿರುವ ‘ಬೇಬಿ’ ಸಿನಿಮಾದಲ್ಲಿ ಆನಂದ್​ ದೇವರಕೊಂಡ ಅವರಿಗೆ ಜೋಡಿಯಾಗಿ ವೈಷ್ಣವಿ ಚೈತನ್ಯ ನಟಿಸಿದ್ದಾರೆ. ಅವರ ನಟನೆಗೆ ವಿಜಯ್​ ದೇವರಕೊಂಡ ಮೆಚ್ಚುಗೆ ಸೂಚಿಸಿದ್ದಾರೆ. ‘ಪ್ರಸಾದ್​ ಮಲ್ಟಿಪ್ಲೆಕ್ಸ್​’ನಲ್ಲಿ ಸಿನಿಮಾ ನೋಡಿ ಅವರು ಖುಷಿಪಟ್ಟಿದ್ದಾರೆ. ‘ನಾನು ಬೇಬಿ ಸಿನಿಮಾ ಬಗ್ಗೆ ಹೆಚ್ಚು ಮಾತನಾಡಲ್ಲ. ಪ್ರೀಮಿಯರ್​ ನೋಡಲು ಬಂದ ಜನರಿಗೆ ಧನ್ಯವಾದ ಅರ್ಪಿಸುತ್ತೇನೆ. ಆನಂದ್​, ವೈಷ್ಣವಿ ಅವರು ನನ್ನನ್ನು ಎಮೋಷನಲ್​ ಆಗಿಸಿದರು. ಈ ಸಿನಿಮಾ ಬಗ್ಗೆ ನಾನು 3-4 ದಿನಗಳ ಬಳಿಕ ಒಂದು ಇವೆಂಟ್​ನಲ್ಲಿ ಮಾತನಾಡುತ್ತೇನೆ’ ಎಂದು ವಿಜಯ್​ ದೇವರಕೊಂಡ ಹೇಳಿದ್ದಾರೆ.

ಇದನ್ನೂ ಓದಿ: ‘ನನ್ನ ಮೆಚ್ಚಿನ ಹುಡುಗಿ ಸಮಂತಾ’: ಕಡೆಗೂ ಬಹಿರಂಗವಾಗಿ ಒಪ್ಪಿಕೊಂಡ ವಿಜಯ್​ ದೇವರಕೊಂಡ

ವಿಜಯ್​ ದೇವರಕೊಂಡ ಅವರು ಈಗ ‘ಖುಷಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರಿಗೆ ಜೋಡಿಯಾಗಿ ಸಮಂತಾ ರುತ್​ ಪ್ರಭು ನಟಿಸಿದ್ದಾರೆ. ಸಮಂತಾ ಅವರ ಅನಾರೋಗ್ಯದ ಕಾರಣದಿಂದ ಈ ಸಿನಿಮಾದ ಚಿತ್ರೀಕರಣ ವಿಳಂಬ ಆಗಿತ್ತು. ನಂತರ ಅವರು ಚೇತರಿಸಿಕೊಂಡು ಬಂದು ಶೂಟಿಂಗ್​ ಮುಗಿಸಿಕೊಟ್ಟರು. ಈಗ ಅವರು ಮತ್ತೆ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ. ಹಾಗಾಗಿ ‘ಖುಷಿ’ ಪ್ರಚಾರದ ಸಂಪೂರ್ಣ ಹೊಣೆ ವಿಜಯ್​ ದೇವರಕೊಂಡ ಮೇಲೆ ಬಿದ್ದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ