AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮ್ಮನೆ ವಿದೇಶಕ್ಕೆ ಹೋಗಿಲ್ಲ ಅಲ್ಲು ಅರ್ಜುನ್​; ಇದರ ಹಿಂದಿದೆ ಮಾಸ್ಟರ್​ ಪ್ಲ್ಯಾನ್​

‘ಪುಷ್ಪ 2’ ಸಿನಿಮಾದ ವ್ಯಾಪ್ತಿ ಹಿರಿದಾಗುತ್ತಿದೆ. ಅದಕ್ಕೆ ತಕ್ಕಂತೆಯೇ ಚಿತ್ರತಂಡ ಹೊಸ ಹೊಸ ಪ್ಲ್ಯಾನ್​ಗಳನ್ನು ಮಾಡುತ್ತಿದೆ. ನಟ ಅಲ್ಲು ಅರ್ಜುನ್​ ಅವರು ಕೆಲವೇ ದಿನಗಳ ಹಿಂದೆ ಬರ್ಲಿನ್​ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದರು. ಅವರು ಅಲ್ಲಿಗೆ ತೆರಳಿದ್ದಕ್ಕೆ ಒಂದು ಮುಖ್ಯ ಕಾರಣ ಇದೆ ಎನ್ನಲಾಗುತ್ತಿದೆ. ಸುಕುಮಾರ್​ ಅವರು ನಿರ್ದೇಶನ ಮಾಡುತ್ತಿರುವ ಈ ಚಿತ್ರ ಹೈಪ್​ ಸೃಷ್ಟಿ ಮಾಡಿದೆ.

ಸುಮ್ಮನೆ ವಿದೇಶಕ್ಕೆ ಹೋಗಿಲ್ಲ ಅಲ್ಲು ಅರ್ಜುನ್​; ಇದರ ಹಿಂದಿದೆ ಮಾಸ್ಟರ್​ ಪ್ಲ್ಯಾನ್​
ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Feb 21, 2024 | 9:42 AM

Share

ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಅವರು ಇತ್ತೀಚೆಗೆ ವಿದೇಶಕ್ಕೆ ಹಾರಿದ್ದರು. ಅವರು ಅಭಿನಯಿಸುತ್ತಿರುವ ‘ಪುಷ್ಪ 2’ (Pushpa 2) ಸಿನಿಮಾದ ಶೂಟಿಂಗ್​ ಹೈದರಾಬಾದ್​ನಲ್ಲಿ ಭರದಿಂದ ಸಾಗುತ್ತಿದೆ. ಈ ಕೆಲಸವನ್ನು ಬಿಟ್ಟು ಅವರು ವಿದೇಶಕ್ಕೆ ಹೋಗಿ, ಅಲ್ಲಿನ ಫಿಲ್ಮ್​ ಫೆಸ್ಟಿವಲ್​ನಲ್ಲಿ ಭಾಗಿ ಆಗಿದ್ದರಿಂದ ಅನೇಕರಿಗೆ ಅಚ್ಚರಿ ಆಗಿತ್ತು. ‘ಬರ್ಲಿನ್​ ಫಿಲ್ಮ್​ ಫಿಸ್ಟಿವಲ್​’ನಲ್ಲಿ ಅಲ್ಲು ಅರ್ಜುನ್​ ಹಾಜರಿ ಹಾಕಿದ್ದು ಯಾಕೆ ಎಂಬ ಬಗ್ಗೆ ಈಗ ಚರ್ಚೆ ನಡೆಯುತ್ತಿದೆ. ಅಂದಹಾಗೆ, ಸುಮ್​ ಸುಮ್ಮನೆ ಅವರು ಕೆಲಸ ಬಿಟ್ಟು ಅಲ್ಲಿಗೆ ತೆರಳಿಲ್ಲ. ಅವರು ‘ಬರ್ಲಿನ್​ ಫಿಲ್ಮ್​ ಫಿಸ್ಟಿವಲ್​’ಗೆ (Berlin Film Festival) ತೆರಳಿದ್ದರ ಹಿಂದೆ ಒಂದು ಮಾಸ್ಟರ್​ ಪ್ಲ್ಯಾನ್​ ಇದೆ ಎಂದು ಹೇಳಲಾಗುತ್ತಿದೆ.

‘ಪುಷ್ಪ 2’ ಸಿನಿಮಾಗೆ ನಿರ್ದೇಶಕ ಸುಕುಮಾರ್​ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಮೂಡಿಬರುತ್ತಿದೆ. ನೂರಾರು ಕೋಟಿ ರೂಪಾಯಿ ಬಂಡವಾಳ ಸುರಿಯಲಾಗುತ್ತಿದೆ. ಅದಕ್ಕೆ ಸೂಕ್ತ ಪ್ರತಿಫಲ ಸಿಗಬೇಕು ಎಂದರೆ ವಿದೇಶಿ ಮಾರುಕಟ್ಟೆಯ ಮೇಲೆ ಗಮನ ಹರಿಸಬೇಕು. ಆ ಉದ್ದೇಶದಿಂದಲೇ ಅಲ್ಲು ಅರ್ಜುನ್​ ಅವರು ಬರ್ಲಿನ್​ ಫಿಲ್ಮ್​ ಫೆಸ್ಟಿವಲ್​ಗೆ ತೆರಳಿದ್ದರು ಎಂಬ ಮಾಹಿತಿ ಕೇಳಿಬರುತ್ತಿದೆ.

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ಅಲ್ಲು ಅರ್ಜುನ್​ ಅವರು ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದ್ದಾರೆ. ‘ಬರ್ಲಿನ್​ ಫಿಲ್ಮ್​ ಫೆಸ್ಟಿವಲ್​’ನಲ್ಲಿ ಭಾಗಿಯಾದ ಅವರು ಅಲ್ಲಿನ ಸಿನಿಪ್ರಿಯರ ಜೊತೆ ಸಂವಾದ ನಡೆಸಿದ್ದಾರೆ. ಅಲ್ಲಿನ ಸಿನಿಮೋತ್ಸವ ಯಾವ ರೀತಿ ಇರುತ್ತದೆ ಎಂಬುದನ್ನು ಅವರು ಗಮನಿಸಿದ್ದಾರೆ. ಕೆಲವು ವಿತರಕರ ಜೊತೆ ಮಾತುಕಥೆ ಕೂಡ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಗುಂಟೂರು ಖಾರಂ’ ನೋಡಿದ ಬಳಿಕ ಅಲ್ಲು ಅರ್ಜುನ್​ಗೆ ಶುರುವಾಗಿದೆ ಭಯ? ನಡೆಯಿತು ತುರ್ತು ಮಾತುಕತೆ

ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿ ಮಾತ್ರವಲ್ಲದೇ ವಿದೇಶದ ಭಾಷೆಗಳಿಗೂ ‘ಪುಷ್ಪ 2’ ಸಿನಿಮಾವನ್ನು ಡಬ್​ ಮಾಡಿ ರಿಲೀಸ್​ ಮಾಡುವ ಸಾಧ್ಯತೆ ಇದೆ. ಅದಕ್ಕೆ ಅಲ್ಲಿನ ವಿತರಕರು ಮುಂದೆ ಬರಬೇಕು. ಅವರ ಮನವೊಲಿಸುವ ಸಲುವಾಗಿಯೇ ಅಲ್ಲು ಅರ್ಜುನ್​ ಅವರು ಬರ್ಲಿನ್​ ಫಿಲ್ಮ್​ ಫೆಸ್ಟಿವಲ್​ಗೆ ಹೋಗಿದ್ದು ಎಂದು ಸುದ್ದಿ ಹಬ್ಬಿದೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ಮೂಲಕ ಈ ಸಿನಿಮಾ ಸಿದ್ಧವಾಗುತ್ತಿದೆ.

ಇದನ್ನೂ ಓದಿ: ‘ಖಂಡಿತವಾಗಿ ನೀವು ‘ಪುಷ್ಪ 3’ ನಿರೀಕ್ಷಿಸಬಹುದು’: ಗುಡ್​ ನ್ಯೂಸ್​ ನೀಡಿದ ಅಲ್ಲು ಅರ್ಜುನ್​

‘ಪುಷ್ಪ 3’ ಸಿನಿಮಾವನ್ನು ಕೂಡ ಪ್ರೇಕ್ಷಕರು ನಿರೀಕ್ಷಿಸಬಹುದು ಎಂದು ಅಲ್ಲು ಅರ್ಜುನ್​ ಅವರು ಇತ್ತೀಚೆಗೆ ಹೇಳಿದ್ದಾರೆ. ಅದರಿಂದ ಅಭಿಮಾನಿಗಳಲ್ಲಿನ ಕ್ರೇಜ್​ ಹೆಚ್ಚಾಗಿದೆ. ‘ಪುಷ್ಪ 2’ ಸಿನಿಮಾಗೆ ಶೂಟಿಂಗ್​ ನಡೆಯುತ್ತಿದೆ. ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ಮಂದಣ್ಣ, ಫಹಾದ್​ ಫಾಸಿಲ್, ಡಾಲಿ ಧನಂಜಯ್​ ಮುಂತಾದವರು ನಟಿಸುತ್ತಿದ್ದಾರೆ. ಆಗಸ್ಟ್​ 15ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಬಾಕ್ಸ್​ ಆಫೀಸ್​ನಲ್ಲಿ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬ ಕೌತುಕ ಎಲ್ಲರಲ್ಲೂ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು