ಸುಮ್ಮನೆ ವಿದೇಶಕ್ಕೆ ಹೋಗಿಲ್ಲ ಅಲ್ಲು ಅರ್ಜುನ್​; ಇದರ ಹಿಂದಿದೆ ಮಾಸ್ಟರ್​ ಪ್ಲ್ಯಾನ್​

‘ಪುಷ್ಪ 2’ ಸಿನಿಮಾದ ವ್ಯಾಪ್ತಿ ಹಿರಿದಾಗುತ್ತಿದೆ. ಅದಕ್ಕೆ ತಕ್ಕಂತೆಯೇ ಚಿತ್ರತಂಡ ಹೊಸ ಹೊಸ ಪ್ಲ್ಯಾನ್​ಗಳನ್ನು ಮಾಡುತ್ತಿದೆ. ನಟ ಅಲ್ಲು ಅರ್ಜುನ್​ ಅವರು ಕೆಲವೇ ದಿನಗಳ ಹಿಂದೆ ಬರ್ಲಿನ್​ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದರು. ಅವರು ಅಲ್ಲಿಗೆ ತೆರಳಿದ್ದಕ್ಕೆ ಒಂದು ಮುಖ್ಯ ಕಾರಣ ಇದೆ ಎನ್ನಲಾಗುತ್ತಿದೆ. ಸುಕುಮಾರ್​ ಅವರು ನಿರ್ದೇಶನ ಮಾಡುತ್ತಿರುವ ಈ ಚಿತ್ರ ಹೈಪ್​ ಸೃಷ್ಟಿ ಮಾಡಿದೆ.

ಸುಮ್ಮನೆ ವಿದೇಶಕ್ಕೆ ಹೋಗಿಲ್ಲ ಅಲ್ಲು ಅರ್ಜುನ್​; ಇದರ ಹಿಂದಿದೆ ಮಾಸ್ಟರ್​ ಪ್ಲ್ಯಾನ್​
ಅಲ್ಲು ಅರ್ಜುನ್​
Follow us
|

Updated on: Feb 21, 2024 | 9:42 AM

ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಅವರು ಇತ್ತೀಚೆಗೆ ವಿದೇಶಕ್ಕೆ ಹಾರಿದ್ದರು. ಅವರು ಅಭಿನಯಿಸುತ್ತಿರುವ ‘ಪುಷ್ಪ 2’ (Pushpa 2) ಸಿನಿಮಾದ ಶೂಟಿಂಗ್​ ಹೈದರಾಬಾದ್​ನಲ್ಲಿ ಭರದಿಂದ ಸಾಗುತ್ತಿದೆ. ಈ ಕೆಲಸವನ್ನು ಬಿಟ್ಟು ಅವರು ವಿದೇಶಕ್ಕೆ ಹೋಗಿ, ಅಲ್ಲಿನ ಫಿಲ್ಮ್​ ಫೆಸ್ಟಿವಲ್​ನಲ್ಲಿ ಭಾಗಿ ಆಗಿದ್ದರಿಂದ ಅನೇಕರಿಗೆ ಅಚ್ಚರಿ ಆಗಿತ್ತು. ‘ಬರ್ಲಿನ್​ ಫಿಲ್ಮ್​ ಫಿಸ್ಟಿವಲ್​’ನಲ್ಲಿ ಅಲ್ಲು ಅರ್ಜುನ್​ ಹಾಜರಿ ಹಾಕಿದ್ದು ಯಾಕೆ ಎಂಬ ಬಗ್ಗೆ ಈಗ ಚರ್ಚೆ ನಡೆಯುತ್ತಿದೆ. ಅಂದಹಾಗೆ, ಸುಮ್​ ಸುಮ್ಮನೆ ಅವರು ಕೆಲಸ ಬಿಟ್ಟು ಅಲ್ಲಿಗೆ ತೆರಳಿಲ್ಲ. ಅವರು ‘ಬರ್ಲಿನ್​ ಫಿಲ್ಮ್​ ಫಿಸ್ಟಿವಲ್​’ಗೆ (Berlin Film Festival) ತೆರಳಿದ್ದರ ಹಿಂದೆ ಒಂದು ಮಾಸ್ಟರ್​ ಪ್ಲ್ಯಾನ್​ ಇದೆ ಎಂದು ಹೇಳಲಾಗುತ್ತಿದೆ.

‘ಪುಷ್ಪ 2’ ಸಿನಿಮಾಗೆ ನಿರ್ದೇಶಕ ಸುಕುಮಾರ್​ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಮೂಡಿಬರುತ್ತಿದೆ. ನೂರಾರು ಕೋಟಿ ರೂಪಾಯಿ ಬಂಡವಾಳ ಸುರಿಯಲಾಗುತ್ತಿದೆ. ಅದಕ್ಕೆ ಸೂಕ್ತ ಪ್ರತಿಫಲ ಸಿಗಬೇಕು ಎಂದರೆ ವಿದೇಶಿ ಮಾರುಕಟ್ಟೆಯ ಮೇಲೆ ಗಮನ ಹರಿಸಬೇಕು. ಆ ಉದ್ದೇಶದಿಂದಲೇ ಅಲ್ಲು ಅರ್ಜುನ್​ ಅವರು ಬರ್ಲಿನ್​ ಫಿಲ್ಮ್​ ಫೆಸ್ಟಿವಲ್​ಗೆ ತೆರಳಿದ್ದರು ಎಂಬ ಮಾಹಿತಿ ಕೇಳಿಬರುತ್ತಿದೆ.

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ಅಲ್ಲು ಅರ್ಜುನ್​ ಅವರು ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದ್ದಾರೆ. ‘ಬರ್ಲಿನ್​ ಫಿಲ್ಮ್​ ಫೆಸ್ಟಿವಲ್​’ನಲ್ಲಿ ಭಾಗಿಯಾದ ಅವರು ಅಲ್ಲಿನ ಸಿನಿಪ್ರಿಯರ ಜೊತೆ ಸಂವಾದ ನಡೆಸಿದ್ದಾರೆ. ಅಲ್ಲಿನ ಸಿನಿಮೋತ್ಸವ ಯಾವ ರೀತಿ ಇರುತ್ತದೆ ಎಂಬುದನ್ನು ಅವರು ಗಮನಿಸಿದ್ದಾರೆ. ಕೆಲವು ವಿತರಕರ ಜೊತೆ ಮಾತುಕಥೆ ಕೂಡ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಗುಂಟೂರು ಖಾರಂ’ ನೋಡಿದ ಬಳಿಕ ಅಲ್ಲು ಅರ್ಜುನ್​ಗೆ ಶುರುವಾಗಿದೆ ಭಯ? ನಡೆಯಿತು ತುರ್ತು ಮಾತುಕತೆ

ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿ ಮಾತ್ರವಲ್ಲದೇ ವಿದೇಶದ ಭಾಷೆಗಳಿಗೂ ‘ಪುಷ್ಪ 2’ ಸಿನಿಮಾವನ್ನು ಡಬ್​ ಮಾಡಿ ರಿಲೀಸ್​ ಮಾಡುವ ಸಾಧ್ಯತೆ ಇದೆ. ಅದಕ್ಕೆ ಅಲ್ಲಿನ ವಿತರಕರು ಮುಂದೆ ಬರಬೇಕು. ಅವರ ಮನವೊಲಿಸುವ ಸಲುವಾಗಿಯೇ ಅಲ್ಲು ಅರ್ಜುನ್​ ಅವರು ಬರ್ಲಿನ್​ ಫಿಲ್ಮ್​ ಫೆಸ್ಟಿವಲ್​ಗೆ ಹೋಗಿದ್ದು ಎಂದು ಸುದ್ದಿ ಹಬ್ಬಿದೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ಮೂಲಕ ಈ ಸಿನಿಮಾ ಸಿದ್ಧವಾಗುತ್ತಿದೆ.

ಇದನ್ನೂ ಓದಿ: ‘ಖಂಡಿತವಾಗಿ ನೀವು ‘ಪುಷ್ಪ 3’ ನಿರೀಕ್ಷಿಸಬಹುದು’: ಗುಡ್​ ನ್ಯೂಸ್​ ನೀಡಿದ ಅಲ್ಲು ಅರ್ಜುನ್​

‘ಪುಷ್ಪ 3’ ಸಿನಿಮಾವನ್ನು ಕೂಡ ಪ್ರೇಕ್ಷಕರು ನಿರೀಕ್ಷಿಸಬಹುದು ಎಂದು ಅಲ್ಲು ಅರ್ಜುನ್​ ಅವರು ಇತ್ತೀಚೆಗೆ ಹೇಳಿದ್ದಾರೆ. ಅದರಿಂದ ಅಭಿಮಾನಿಗಳಲ್ಲಿನ ಕ್ರೇಜ್​ ಹೆಚ್ಚಾಗಿದೆ. ‘ಪುಷ್ಪ 2’ ಸಿನಿಮಾಗೆ ಶೂಟಿಂಗ್​ ನಡೆಯುತ್ತಿದೆ. ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ಮಂದಣ್ಣ, ಫಹಾದ್​ ಫಾಸಿಲ್, ಡಾಲಿ ಧನಂಜಯ್​ ಮುಂತಾದವರು ನಟಿಸುತ್ತಿದ್ದಾರೆ. ಆಗಸ್ಟ್​ 15ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಬಾಕ್ಸ್​ ಆಫೀಸ್​ನಲ್ಲಿ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬ ಕೌತುಕ ಎಲ್ಲರಲ್ಲೂ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?