AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಗಂಡನ 2ನೇ ನಿಶ್ಚಿತಾರ್ಥದ ದಿನವೇ ಒಡೆದ ಹೃದಯದ ಎಮೋಜಿ ಹಾಕಿದ ಸಮಂತಾ; ಆದರೆ..

ನಟಿ ಸಮಂತಾ ರುತ್​ ಪ್ರಭು ಅವರು ಸಿಂಗಲ್​ ಆಗಿಯೇ ಉಳಿದುಕೊಂಡಿದ್ದಾರೆ. ಆದರೆ ಅವರ ಮಾಜಿ ಪತಿ ನಾಗ ಚೈತನ್ಯ 2ನೇ ಮದುವೆಗೆ ಸಜ್ಜಾಗಿದ್ದಾರೆ. ಇಂದು (ಆಗಸ್ಟ್​ 8) ನಟಿ ಶೋಭಿತಾ ಜೊತೆ ನಾಗ ಚೈತನ್ಯ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ. ಇದೇ ದಿನ ಸಮಂತಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡ ಒಂದು ಪೋಸ್ಟ್​ ವೈರಲ್​ ಆಗಿದೆ.

ಮಾಜಿ ಗಂಡನ 2ನೇ ನಿಶ್ಚಿತಾರ್ಥದ ದಿನವೇ ಒಡೆದ ಹೃದಯದ ಎಮೋಜಿ ಹಾಕಿದ ಸಮಂತಾ; ಆದರೆ..
ಶೋಭಿತಾ, ನಾಗ ಚೈತನ್ಯ, ಸಮಂತಾ
ಮದನ್​ ಕುಮಾರ್​
|

Updated on: Aug 08, 2024 | 9:52 PM

Share

ಆಗಸ್ಟ್​ 8, ಅನೇಕರ ಪಾಲಿಗೆ ಇದು ವಿಶೇಷ ದಿನಾಂಕ. ಒಂದೆಡೆ ಯಶ್​ ಅವರ ‘ಟಾಕ್ಸಿಕ್​’ ಸಿನಿಮಾ ಸೆಟ್ಟೇರಿದೆ. ಇನ್ನೊಂದೆಡೆ ನಾಗ ಚೈತನ್ಯ ಅವರು ನಟಿ ಶೋಭಿತಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಾಗ ಚೈತನ್ಯ ಅವರಿಗೆ ವಿಚ್ಛೇದನ ನೀಡಿರುವ ಸಮಂತಾ ಅವರು ಈಗಲೂ ಸಿಂಗಲ್​ ಆಗಿಯೇ ಇದ್ದಾರೆ. ಮಾಜಿ ಗಂಡ ಇಂದು ಬೇರೆ ನಟಿ ಜೊತೆ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರಿಂದ ಸಮಂತಾ ಯಾವ ರೀತಿ ಪ್ರತಿಕ್ರಿಯೆ ನೀಡಬಹುದು ಎಂಬ ಕೌತುಕ ಎಲ್ಲರಲ್ಲೂ ಇದೆ. ಇಂದು ಬೇರೊಂದು ಕಾರಣಕ್ಕಾಗಿ ಸಮಂತಾ ರುತ್​ ಪ್ರಭು ಅವರು ಒಡೆದ ಹೃದಯದ ಎಮೋಜಿ ಶೇರ್​ ಮಾಡಿಕೊಂಡಿದ್ದಾರೆ.

ಸಮಂತಾ ಅವರು ಇನ್​ಸ್ಟಾಗ್ರಾಮ್​ ಬಳಕೆಯಲ್ಲಿ ತುಂಬ ಸಕ್ರಿಯವಾಗಿದ್ದಾರೆ. ಸಿನಿಮಾ, ರಾಜಕೀಯ ಮುಂತಾದ ಅನೇಕ ವಿಚಾರಗಳ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಪ್ರತಿಕ್ರಿಯೆ ನೀಡುತ್ತಾರೆ. ಆಗಸ್ಟ್​ 8ರಂದು ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಒಡೆದ ಹೃದಯದ ಎಮೋಜಿಯನ್ನು ಪೋಸ್ಟ್​ ಮಾಡಿದ್ದಾರೆ. ಹಾಗಂತ ಇದು ನಾಗ ಚೈತನ್ಯ ಅವರ ನಿಶ್ಚಿತಾರ್ಥಕ್ಕೆ ಸಂಬಂಧಿಸಿದ್ದಲ್ಲ.

ಭಾರತದ ಕ್ರೀಡಾಪ್ರೇಮಿಗಳಿಗೆ ಆಗಸ್ಟ್​ 8 ಎಂದರೆ ಬೇಸರದ ದಿನವಾಗಿ ಪರಿಣಮಿಸಿದೆ. ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಬಂಗಾರದ ಪದಕ ಗೆಲ್ಲುವ ಅವಕಾಶದಿಂದ ಕೊನೇ ಕ್ಷಣದಲ್ಲಿ ವಂಚಿತರಾದ ವಿನೇಶ್​ ಫೋಗಟ್​ ಅವರು ಕುಸ್ತಿಗೆ ವಿದಾಯ ಹೇಳಿದ್ದಾರೆ. ಇಂದು (ಆ.8) ಅವರು ನಿವೃತ್ತಿ ಘೋಷಿಸಿದ್ದಾರೆ. ಈ ವಿಷಯವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ಸಮಂತಾ ಅವರು ಒಡೆದ ಹೃದಯದ ಎಮೋಜಿಯನ್ನು ಬಳಸಿದ್ದಾರೆ.

ಇದನ್ನೂ ಓದಿ: ಅಚ್ಚರಿ ಮೂಡಿಸುತ್ತೆ ಸಮಂತಾ ಸಂಭಾವನೆ ಮೊತ್ತ; ‘ಹನಿ’ ಪಾತ್ರಕ್ಕಾಗಿ ದುಬಾರಿ ಪೇಮೆಂಟ್​

ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ಒಂದು ಕಾಲದಲ್ಲಿ ಪ್ರೇಮಿಗಳಾಗಿದ್ದರು. ಹಲವು ವರ್ಷ ಪ್ರೀತಿಸಿ ದಾಂಪತ್ಯ ಜೀವನಕ್ಕೂ ಕಾಲಿಟ್ಟರು. ಆದರೆ ನಾಲ್ಕು ವರ್ಷ ಕಳೆಯುವುದರಲ್ಲಿ ಅವರ ಸಂಸಾರದಲ್ಲಿ ಬಿರುಕು ಮೂಡಿತು. ಅವರಿಬ್ಬರು ವಿಚ್ಛೇದನ ಘೋಷಿಸಿದಾಗ ಅಭಿಮಾನಿಗಳಿಗೆ ತೀವ್ರ ಬೇಸರ ಉಂಟಾಗಿತ್ತು. ಡಿವೋರ್ಸ್​ಗೆ ಕಾರಣ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ.

ಸಮಂತಾ ಇನ್​ಸ್ಟಾಗ್ರಾಮ್​ ಸ್ಟೋರಿ

ವಿಚ್ಛೇದನ ಪಡೆದ ಬಳಿಕ ಸಮಂತಾ ಅವರ ವೃತ್ತಿ ಜೀವನಕ್ಕೆ ಹೊಸ ವೇಗ ಸಿಕ್ಕಿತು. ಬರುವ ಆಫರ್​ಗಳು ಹೆಚ್ಚಾದವು. ಮಾಜಿ ಗಂಡ ಮತ್ತು ಡಿವೋರ್ಸ್​ ವಿಚಾರವನ್ನು ಮರೆತು ಸಮಂತಾ ಮುಂದೆ ಸಾಗಿದ್ದಾರೆ. ಹಾಗಾಗಿ ನಾಗಚೈತನ್ಯ ಹಾಗೂ ಶೋಭಿತಾ ಅವರ ನಿಶ್ಚಿತಾರ್ಥದ ಬಗ್ಗೆ ಸಮಂತಾ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂಬುದು ಅಭಿಮಾನಿಗಳ ಅಭಿಪ್ರಾಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ