AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಗಂಡನ 2ನೇ ನಿಶ್ಚಿತಾರ್ಥದ ದಿನವೇ ಒಡೆದ ಹೃದಯದ ಎಮೋಜಿ ಹಾಕಿದ ಸಮಂತಾ; ಆದರೆ..

ನಟಿ ಸಮಂತಾ ರುತ್​ ಪ್ರಭು ಅವರು ಸಿಂಗಲ್​ ಆಗಿಯೇ ಉಳಿದುಕೊಂಡಿದ್ದಾರೆ. ಆದರೆ ಅವರ ಮಾಜಿ ಪತಿ ನಾಗ ಚೈತನ್ಯ 2ನೇ ಮದುವೆಗೆ ಸಜ್ಜಾಗಿದ್ದಾರೆ. ಇಂದು (ಆಗಸ್ಟ್​ 8) ನಟಿ ಶೋಭಿತಾ ಜೊತೆ ನಾಗ ಚೈತನ್ಯ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ. ಇದೇ ದಿನ ಸಮಂತಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡ ಒಂದು ಪೋಸ್ಟ್​ ವೈರಲ್​ ಆಗಿದೆ.

ಮಾಜಿ ಗಂಡನ 2ನೇ ನಿಶ್ಚಿತಾರ್ಥದ ದಿನವೇ ಒಡೆದ ಹೃದಯದ ಎಮೋಜಿ ಹಾಕಿದ ಸಮಂತಾ; ಆದರೆ..
ಶೋಭಿತಾ, ನಾಗ ಚೈತನ್ಯ, ಸಮಂತಾ
ಮದನ್​ ಕುಮಾರ್​
|

Updated on: Aug 08, 2024 | 9:52 PM

Share

ಆಗಸ್ಟ್​ 8, ಅನೇಕರ ಪಾಲಿಗೆ ಇದು ವಿಶೇಷ ದಿನಾಂಕ. ಒಂದೆಡೆ ಯಶ್​ ಅವರ ‘ಟಾಕ್ಸಿಕ್​’ ಸಿನಿಮಾ ಸೆಟ್ಟೇರಿದೆ. ಇನ್ನೊಂದೆಡೆ ನಾಗ ಚೈತನ್ಯ ಅವರು ನಟಿ ಶೋಭಿತಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಾಗ ಚೈತನ್ಯ ಅವರಿಗೆ ವಿಚ್ಛೇದನ ನೀಡಿರುವ ಸಮಂತಾ ಅವರು ಈಗಲೂ ಸಿಂಗಲ್​ ಆಗಿಯೇ ಇದ್ದಾರೆ. ಮಾಜಿ ಗಂಡ ಇಂದು ಬೇರೆ ನಟಿ ಜೊತೆ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರಿಂದ ಸಮಂತಾ ಯಾವ ರೀತಿ ಪ್ರತಿಕ್ರಿಯೆ ನೀಡಬಹುದು ಎಂಬ ಕೌತುಕ ಎಲ್ಲರಲ್ಲೂ ಇದೆ. ಇಂದು ಬೇರೊಂದು ಕಾರಣಕ್ಕಾಗಿ ಸಮಂತಾ ರುತ್​ ಪ್ರಭು ಅವರು ಒಡೆದ ಹೃದಯದ ಎಮೋಜಿ ಶೇರ್​ ಮಾಡಿಕೊಂಡಿದ್ದಾರೆ.

ಸಮಂತಾ ಅವರು ಇನ್​ಸ್ಟಾಗ್ರಾಮ್​ ಬಳಕೆಯಲ್ಲಿ ತುಂಬ ಸಕ್ರಿಯವಾಗಿದ್ದಾರೆ. ಸಿನಿಮಾ, ರಾಜಕೀಯ ಮುಂತಾದ ಅನೇಕ ವಿಚಾರಗಳ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಪ್ರತಿಕ್ರಿಯೆ ನೀಡುತ್ತಾರೆ. ಆಗಸ್ಟ್​ 8ರಂದು ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಒಡೆದ ಹೃದಯದ ಎಮೋಜಿಯನ್ನು ಪೋಸ್ಟ್​ ಮಾಡಿದ್ದಾರೆ. ಹಾಗಂತ ಇದು ನಾಗ ಚೈತನ್ಯ ಅವರ ನಿಶ್ಚಿತಾರ್ಥಕ್ಕೆ ಸಂಬಂಧಿಸಿದ್ದಲ್ಲ.

ಭಾರತದ ಕ್ರೀಡಾಪ್ರೇಮಿಗಳಿಗೆ ಆಗಸ್ಟ್​ 8 ಎಂದರೆ ಬೇಸರದ ದಿನವಾಗಿ ಪರಿಣಮಿಸಿದೆ. ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಬಂಗಾರದ ಪದಕ ಗೆಲ್ಲುವ ಅವಕಾಶದಿಂದ ಕೊನೇ ಕ್ಷಣದಲ್ಲಿ ವಂಚಿತರಾದ ವಿನೇಶ್​ ಫೋಗಟ್​ ಅವರು ಕುಸ್ತಿಗೆ ವಿದಾಯ ಹೇಳಿದ್ದಾರೆ. ಇಂದು (ಆ.8) ಅವರು ನಿವೃತ್ತಿ ಘೋಷಿಸಿದ್ದಾರೆ. ಈ ವಿಷಯವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ಸಮಂತಾ ಅವರು ಒಡೆದ ಹೃದಯದ ಎಮೋಜಿಯನ್ನು ಬಳಸಿದ್ದಾರೆ.

ಇದನ್ನೂ ಓದಿ: ಅಚ್ಚರಿ ಮೂಡಿಸುತ್ತೆ ಸಮಂತಾ ಸಂಭಾವನೆ ಮೊತ್ತ; ‘ಹನಿ’ ಪಾತ್ರಕ್ಕಾಗಿ ದುಬಾರಿ ಪೇಮೆಂಟ್​

ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ಒಂದು ಕಾಲದಲ್ಲಿ ಪ್ರೇಮಿಗಳಾಗಿದ್ದರು. ಹಲವು ವರ್ಷ ಪ್ರೀತಿಸಿ ದಾಂಪತ್ಯ ಜೀವನಕ್ಕೂ ಕಾಲಿಟ್ಟರು. ಆದರೆ ನಾಲ್ಕು ವರ್ಷ ಕಳೆಯುವುದರಲ್ಲಿ ಅವರ ಸಂಸಾರದಲ್ಲಿ ಬಿರುಕು ಮೂಡಿತು. ಅವರಿಬ್ಬರು ವಿಚ್ಛೇದನ ಘೋಷಿಸಿದಾಗ ಅಭಿಮಾನಿಗಳಿಗೆ ತೀವ್ರ ಬೇಸರ ಉಂಟಾಗಿತ್ತು. ಡಿವೋರ್ಸ್​ಗೆ ಕಾರಣ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ.

ಸಮಂತಾ ಇನ್​ಸ್ಟಾಗ್ರಾಮ್​ ಸ್ಟೋರಿ

ವಿಚ್ಛೇದನ ಪಡೆದ ಬಳಿಕ ಸಮಂತಾ ಅವರ ವೃತ್ತಿ ಜೀವನಕ್ಕೆ ಹೊಸ ವೇಗ ಸಿಕ್ಕಿತು. ಬರುವ ಆಫರ್​ಗಳು ಹೆಚ್ಚಾದವು. ಮಾಜಿ ಗಂಡ ಮತ್ತು ಡಿವೋರ್ಸ್​ ವಿಚಾರವನ್ನು ಮರೆತು ಸಮಂತಾ ಮುಂದೆ ಸಾಗಿದ್ದಾರೆ. ಹಾಗಾಗಿ ನಾಗಚೈತನ್ಯ ಹಾಗೂ ಶೋಭಿತಾ ಅವರ ನಿಶ್ಚಿತಾರ್ಥದ ಬಗ್ಗೆ ಸಮಂತಾ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂಬುದು ಅಭಿಮಾನಿಗಳ ಅಭಿಪ್ರಾಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!