Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗೋರು ಯಾರು?; ಇಬ್ಬರ ಮೇಲೆ ತೂಗುಗತ್ತಿ

ಈ ವಾರ ಚಕ್ರವರ್ತಿ ಚಂದ್ರಚೂಡ್​, ಮಂಜು ಪಾವಗಡ, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಪ್ರಶಾಂತ್ ಸಂಬರಗಿ​, ರಘು ಗೌಡ, ಶಮಂತ್ ಬ್ರೋ ಗೌಡ,​ ವೈಷ್ಣವಿ, ಅರವಿಂದ್ ಕೆ.ಪಿ ಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ.

ಈ ವಾರ ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗೋರು ಯಾರು?; ಇಬ್ಬರ ಮೇಲೆ ತೂಗುಗತ್ತಿ
ಬಿಗ್​ ಬಾಸ್​ ಕನ್ನಡ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 11, 2021 | 10:19 PM

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ನ ಎರಡನೇ ಎಲಿಮಿನೇಷನ್​ ಈ ವಾರ ನಡೆಯಲಿದೆ. ಕಳೆದ ವಾರ ನಿಧಿ ಸುಬ್ಬಯ್ಯ ಎಲಿಮಿನೇಟ್​ ಆಗಿದ್ದರು. ಈ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎನ್ನುವ ಲೆಕ್ಕಾಚಾರ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿದೆ. ಅಷ್ಟಕ್ಕೂ ಈ ವಾರ ಎಲಿಮಿನೇಟ್​ ಆಗೋ ಸ್ಪರ್ಧಿ ಯಾರು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಈ ವಾರ ಚಕ್ರವರ್ತಿ ಚಂದ್ರಚೂಡ್​, ಮಂಜು ಪಾವಗಡ, ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ಪ್ರಶಾಂತ್ ಸಂಬರಗಿ​, ರಘು ಗೌಡ, ಶಮಂತ್ ಬ್ರೋ ಗೌಡ,​ ವೈಷ್ಣವಿ, ಅರವಿಂದ್ ಕೆ.ಪಿ ಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ಇವರಲ್ಲಿ ಒಬ್ಬರು ಈ ವಾರ ಮನೆಯಿಂದ ಹೊರ ಹೋಗುವುದು ಖಚಿತವಾಗಿದೆ.

ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿರುವ ಮಂಜು ಪಾವಗಡ ಎಂಟರ್​ಟೇನ್​ಮೆಂಟ್​ ನೀಡುತ್ತಿದ್ದಾರೆ. ಅರವಿಂದ್ ಕೆ.ಪಿ. ಕೂಡ ಸ್ಟ್ರಾಂಗ್​ ಎನಿಸಿಕೊಂಡಿದ್ದಾರೆ. ಹೀಗಾಗಿ, ಇಬ್ಬರೂ ಈ ವಾರ ಮುಂದುವರಿಯೋದು ಖಚಿತ. ಪ್ರಶಾಂತ್ ಸಂಬರಗಿ ಈ ವಾರ ದೊಡ್ಡ ಮಟ್ಟದಲ್ಲಿ ಕೂಗಾಡಿ ಎಲ್ಲರ ಗಮನವನ್ನು ತಮ್ಮೆಡೆ ಸೆಳೆದುಕೊಂಡಿದ್ದಾರೆ. ಶುಭಾ ಪೂಂಜಾ, ಶಮಂತ್, ದಿವ್ಯಾ ಸುರೇಶ್, ವೈಷ್ಣವಿ ಎಂದಿನಂತೆ ತಮ್ಮ ಆಟ ಆಡುತ್ತಿದ್ದಾರೆ.

ಚಕ್ರವರ್ತಿ ಮನೆಯ ವಾತಾವರಣ ಹಾಳು ಮಾಡುತ್ತಿದ್ದಾರೆ, ಅವರಲ್ಲಿ ಕೋಪ ಜಾಸ್ತಿ ಎಂಬಿತ್ಯಾದಿ ಆರೋಪಗಳು ನಾಮಿನೇಷನ್​ ವೇಳೆ ಕೇಳಿ ಬಂದಿದ್ದವು. ಆದರೆ, ಈ ವಾರ ಪ್ರಶಾಂತ್​ ಸಂಬರಗಿ ಸಹವಾಸ ಬಿಟ್ಟಿದ್ದಾರೆ ಚಕ್ರರ್ತಿ. ಇದು ಚಕ್ರವರ್ತಿಗೆ ಪ್ಲಸ್​ ಪಾಯಿಂಟ್​ ಆಗಬಹುದು.

ಉಳಿದಿದ್ದು ಪ್ರಿಯಾಂಕಾ ತಿಮ್ಮೇಶ್​ ಹಾಗೂ ರಘು. ಇಬ್ಬರೂ ಬಿಗ್​ ಬಾಸ್ ಮನೆಯಲ್ಲಿ ಸ್ವಲ್ಪ ಡಲ್​ ಆಗಿ ಕಾಣುತ್ತಿದ್ದಾರೆ. ಟಾಸ್ಕ್​ ನಡೆಯುವ ವೇಳೆ ರಘು ಅಷ್ಟು ಆ್ಯಕ್ಟೀವ್​ ಆಗಿ ಕಾಣಲಿಲ್ಲ. ಹೀಗಾಗಿ ಇಬ್ಬರಲ್ಲಿ ಒಬ್ಬರು ಮನೆಯಿಂದ ಹೊರ ಹೋಗುವುದು ಖಚಿತ ಎನ್ನಲಾಗಿತ್ತು. ಈಗ ರಘು ಎಲಿಮಿನೇಟ್​ ಆಗಿರೋದು ಖಚಿತವಾಗಿದೆ.

ಇದನ್ನೂ ಓದಿ: ಪ್ರಶಾಂತ್​-ಅರವಿಂದ್ ಕೈ ಮಿಲಾಯಿಸಿಕೊಳ್ಳುವುದನ್ನು ತಪ್ಪಿಸಿದ ಮನೆ ಮಂದಿ; ಬಿಗ್​ ಬಾಸ್​ ಮನೆಯಲ್ಲಿ ದೊಡ್ಡ ಜಗಳ

ಚಕ್ರವರ್ತಿ-ಪ್ರಶಾಂತ್​ ಜಗಳದಲ್ಲಿ ಕೇಳಿದ್ದು ಕೇವಲ ಬೀಪ್​ ಶಬ್ದಗಳು

Published On - 2:31 pm, Sat, 10 July 21

ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ