AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಬಿಗ್​ ಬಾಸ್​ ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮೊದಲು ಎಲಿಮಿನೇಟ್​ ಆಗೋರು ಇವರೇನಾ?

ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ನಿಧಿ ಸುಬ್ಬಯ್ಯ, ಮಂಜು ಪಾವಗಡ, ದಿವ್ಯಾ ಸುರೇಶ್ ಮತ್ತು ಪ್ರಿಯಾಂಕಾ ತಿಮ್ಮೇಶ್​ ಮೇಲೆ ಎಲಿಮಿನೇಷನ್​​ ತೂಗುಗತ್ತಿ ತೂಗುತ್ತಿದೆ.

ಕನ್ನಡ ಬಿಗ್​ ಬಾಸ್​ ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮೊದಲು ಎಲಿಮಿನೇಟ್​ ಆಗೋರು ಇವರೇನಾ?
ಕನ್ನಡ ಬಿಗ್​ ಬಾಸ್​
TV9 Web
| Edited By: |

Updated on:Jun 26, 2021 | 4:19 PM

Share

‘ಕನ್ನಡ ಬಿಗ್​ ಬಾಸ್ ಸೀಸನ್​ 8’​ ಎರಡನೇ ಇನ್ನಿಂಗ್ಸ್​ ಗ್ರ್ಯಾಂಡ್​ ಆಗಿ ಆರಂಭ ಕಂಡಿದೆ. ಕಿಚ್ಚ ಸುದೀಪ್​ ಅವರು ಅದ್ದೂರಿಯಾಗಿ ಶೋ ಮತ್ತೆ ಆರಂಭಿಸಿದ್ದಾರೆ. ಮೊದಲ ದಿನವೇ ಎಲಿಮಿನೇಷನ್​ಗೆ ನಾಮಿನೇಷನ್​ ನಡೆದಿದೆ. ಇಂದು (ಜೂ.26) ಮತ್ತು ನಾಳೆ (ಜೂ.27) ಸುದೀಪ್​ ವೀಕೆಂಡ್​ ಎಪಿಸೋಡ್​ ​ ನಡೆಸಿಕೊಡಲಿದ್ದಾರೆ. ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮೊದಲು ಎಲಿಮಿನೇಟ್​ ಆಗೋದು ಯಾರು ಎನ್ನುವ ಕುತೂಹಲ ಪ್ರೇಕ್ಷಕರಲ್ಲಿದೆ.

ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ನಿಧಿ ಸುಬ್ಬಯ್ಯ, ಮಂಜು ಪಾವಗಡ, ದಿವ್ಯಾ ಸುರೇಶ್ ಮತ್ತು ಪ್ರಿಯಾಂಕಾ ತಿಮ್ಮೇಶ್​ ಮೇಲೆ ಎಲಿಮಿನೇಷನ್​​ ತೂಗುಗತ್ತಿ ತೂಗುತ್ತಿದೆ. 12 ಸ್ಪರ್ಧಿಗಳು 43 ದಿನ ಗ್ಯಾಪ್​ ತೆಗೆದುಕೊಂಡು ಬಂದಿದ್ದರಿಂದ ಯಾವ ಸ್ಪರ್ಧಿಗಳು ಹೇಗೆ ಎನ್ನುವ ಲೆಕ್ಕಾಚಾರ ಸಿಕ್ಕಿದೆ. ಮೊದಲ ಇನ್ನಿಂಗ್ಸ್​ ಎಪಿಸೋಡ್​ಗಳು ಹಾಗೂ ಮಾಧ್ಯಮಗಳಿಗೆ ಸ್ಪರ್ಧಿಗಳು ನೀಡಿದ ಸಂದರ್ಶನವನ್ನು ಎಲ್ಲರೂ ಗಮನಿಸಿದ್ದಾರೆ. ಈ ವೇಳೆ ಪ್ರಶಾಂತ್​ ಹಾಗೂ ಚಕ್ರವರ್ತಿ ನಡೆದುಕೊಂಡ ರೀತಿ ಅನೇಕರಿಗೆ ಇಷ್ಟವಾಗಿಲ್ಲ. ಈ ಕಾರಣಕ್ಕೆ ಬಹುತೇಕರು ಅವರನ್ನು ನಾಮಿನೇಟ್​ ಮಾಡಿದ್ದಾರೆ. ಇನ್ನು, ರಘು, ನಿಧಿ, ಮಂಜು, ದಿವ್ಯಾ ಸುರೇಶ್​, ಪ್ರಿಯಾಂಕಾ ಬಗ್ಗೆಯೂ ಮನೆಯ ಕೆಲ ಸದಸ್ಯರು ಬೇಸರ ಹೊರ ಹಾಕಿ ನಾಮಿನೇಟ್​ ಮಾಡಿದ್ದಾರೆ.

ಮಂಜು ಪಾವಗಡ ಮೊದಲಿಗಿಂತ ಬದಲಾಗಿದ್ದು, ಸಾಕಷ್ಟು ಎಂಟರ್​ಟೇನ್​ಮೆಂಟ್​ ನೀಡುತ್ತಿದ್ದಾರೆ. ಇನ್ನು, ಪ್ರಶಾಂತ್​, ಚಕ್ರವರ್ತಿ ಮನೆಯವರಿಂದ ಛೀಮಾರಿ ಹಾಕಿಸಿಕೊಂಡರೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇನ್ನು, ನಿಧಿ ಖ್ಯಾತಿ ಈವರೆಗೆ ಕಡಿಮೆ ಆಗಿಲ್ಲ. ರಘು ಹಾಗೂ ದಿವ್ಯಾ ಮೊದಲಿಗಿಂತ ಸಾಕಷ್ಟು ಬದಲಾಗಿದ್ದಾರೆ. ಹೀಗಾಗಿ ಈ ವಾರ ಪ್ರಿಯಾಂಕಾ ತಿಮ್ಮೇಶ್​ ಹೊರ ಹೋಗುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ.

ಎಲ್ಲಾ ಸ್ಪರ್ಧಿಗಳು ಬಿಗ್​ ಬಾಸ್​ ಮನೆಗೆ ಬಂದು ಕೆಲವೇ ದಿನ ಕಳೆದಿದೆ. ಯಾರು ಹೇಗೆ ಪರ್ಫಾರ್ಮೆನ್ಸ್​ ಮಾಡುತ್ತಾರೆ ಅನ್ನೋದು ಇನ್ನು ಸ್ಪಷ್ಟವಾಗಿ ತಿಳಿಯುತ್ತಿಲ್ಲ. ಈ ಕಾರಣಕ್ಕೆ ಈ ವಾರ ಎಲಿಮಿನೇಷನ್​ ನಡೆಸದೆಯೂ ಇರಬಹುದು. ಈ ಎಲ್ಲಾ ಪ್ರಶ್ನೆಗಳಿಗೆ ಭಾನುವಾರ (ಜೂನ್​ 27) ಸಿಗಲಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ಕ್ಯಾಪ್ಟನ್​ ರೂಂನಲ್ಲಿ ಭೂತ? ಕಪ್ಪಗಿನ ಆಕೃತಿ ಕಂಡು ಬೆಚ್ಚಿಬಿದ್ದ ಶಮಂತ್​

ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?

Published On - 2:36 pm, Sat, 26 June 21

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ