AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಬಿಗ್​ ಬಾಸ್​ ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮೊದಲು ಎಲಿಮಿನೇಟ್​ ಆಗೋರು ಇವರೇನಾ?

ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ನಿಧಿ ಸುಬ್ಬಯ್ಯ, ಮಂಜು ಪಾವಗಡ, ದಿವ್ಯಾ ಸುರೇಶ್ ಮತ್ತು ಪ್ರಿಯಾಂಕಾ ತಿಮ್ಮೇಶ್​ ಮೇಲೆ ಎಲಿಮಿನೇಷನ್​​ ತೂಗುಗತ್ತಿ ತೂಗುತ್ತಿದೆ.

ಕನ್ನಡ ಬಿಗ್​ ಬಾಸ್​ ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮೊದಲು ಎಲಿಮಿನೇಟ್​ ಆಗೋರು ಇವರೇನಾ?
ಕನ್ನಡ ಬಿಗ್​ ಬಾಸ್​
TV9 Web
| Edited By: |

Updated on:Jun 26, 2021 | 4:19 PM

Share

‘ಕನ್ನಡ ಬಿಗ್​ ಬಾಸ್ ಸೀಸನ್​ 8’​ ಎರಡನೇ ಇನ್ನಿಂಗ್ಸ್​ ಗ್ರ್ಯಾಂಡ್​ ಆಗಿ ಆರಂಭ ಕಂಡಿದೆ. ಕಿಚ್ಚ ಸುದೀಪ್​ ಅವರು ಅದ್ದೂರಿಯಾಗಿ ಶೋ ಮತ್ತೆ ಆರಂಭಿಸಿದ್ದಾರೆ. ಮೊದಲ ದಿನವೇ ಎಲಿಮಿನೇಷನ್​ಗೆ ನಾಮಿನೇಷನ್​ ನಡೆದಿದೆ. ಇಂದು (ಜೂ.26) ಮತ್ತು ನಾಳೆ (ಜೂ.27) ಸುದೀಪ್​ ವೀಕೆಂಡ್​ ಎಪಿಸೋಡ್​ ​ ನಡೆಸಿಕೊಡಲಿದ್ದಾರೆ. ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮೊದಲು ಎಲಿಮಿನೇಟ್​ ಆಗೋದು ಯಾರು ಎನ್ನುವ ಕುತೂಹಲ ಪ್ರೇಕ್ಷಕರಲ್ಲಿದೆ.

ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ನಿಧಿ ಸುಬ್ಬಯ್ಯ, ಮಂಜು ಪಾವಗಡ, ದಿವ್ಯಾ ಸುರೇಶ್ ಮತ್ತು ಪ್ರಿಯಾಂಕಾ ತಿಮ್ಮೇಶ್​ ಮೇಲೆ ಎಲಿಮಿನೇಷನ್​​ ತೂಗುಗತ್ತಿ ತೂಗುತ್ತಿದೆ. 12 ಸ್ಪರ್ಧಿಗಳು 43 ದಿನ ಗ್ಯಾಪ್​ ತೆಗೆದುಕೊಂಡು ಬಂದಿದ್ದರಿಂದ ಯಾವ ಸ್ಪರ್ಧಿಗಳು ಹೇಗೆ ಎನ್ನುವ ಲೆಕ್ಕಾಚಾರ ಸಿಕ್ಕಿದೆ. ಮೊದಲ ಇನ್ನಿಂಗ್ಸ್​ ಎಪಿಸೋಡ್​ಗಳು ಹಾಗೂ ಮಾಧ್ಯಮಗಳಿಗೆ ಸ್ಪರ್ಧಿಗಳು ನೀಡಿದ ಸಂದರ್ಶನವನ್ನು ಎಲ್ಲರೂ ಗಮನಿಸಿದ್ದಾರೆ. ಈ ವೇಳೆ ಪ್ರಶಾಂತ್​ ಹಾಗೂ ಚಕ್ರವರ್ತಿ ನಡೆದುಕೊಂಡ ರೀತಿ ಅನೇಕರಿಗೆ ಇಷ್ಟವಾಗಿಲ್ಲ. ಈ ಕಾರಣಕ್ಕೆ ಬಹುತೇಕರು ಅವರನ್ನು ನಾಮಿನೇಟ್​ ಮಾಡಿದ್ದಾರೆ. ಇನ್ನು, ರಘು, ನಿಧಿ, ಮಂಜು, ದಿವ್ಯಾ ಸುರೇಶ್​, ಪ್ರಿಯಾಂಕಾ ಬಗ್ಗೆಯೂ ಮನೆಯ ಕೆಲ ಸದಸ್ಯರು ಬೇಸರ ಹೊರ ಹಾಕಿ ನಾಮಿನೇಟ್​ ಮಾಡಿದ್ದಾರೆ.

ಮಂಜು ಪಾವಗಡ ಮೊದಲಿಗಿಂತ ಬದಲಾಗಿದ್ದು, ಸಾಕಷ್ಟು ಎಂಟರ್​ಟೇನ್​ಮೆಂಟ್​ ನೀಡುತ್ತಿದ್ದಾರೆ. ಇನ್ನು, ಪ್ರಶಾಂತ್​, ಚಕ್ರವರ್ತಿ ಮನೆಯವರಿಂದ ಛೀಮಾರಿ ಹಾಕಿಸಿಕೊಂಡರೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇನ್ನು, ನಿಧಿ ಖ್ಯಾತಿ ಈವರೆಗೆ ಕಡಿಮೆ ಆಗಿಲ್ಲ. ರಘು ಹಾಗೂ ದಿವ್ಯಾ ಮೊದಲಿಗಿಂತ ಸಾಕಷ್ಟು ಬದಲಾಗಿದ್ದಾರೆ. ಹೀಗಾಗಿ ಈ ವಾರ ಪ್ರಿಯಾಂಕಾ ತಿಮ್ಮೇಶ್​ ಹೊರ ಹೋಗುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ.

ಎಲ್ಲಾ ಸ್ಪರ್ಧಿಗಳು ಬಿಗ್​ ಬಾಸ್​ ಮನೆಗೆ ಬಂದು ಕೆಲವೇ ದಿನ ಕಳೆದಿದೆ. ಯಾರು ಹೇಗೆ ಪರ್ಫಾರ್ಮೆನ್ಸ್​ ಮಾಡುತ್ತಾರೆ ಅನ್ನೋದು ಇನ್ನು ಸ್ಪಷ್ಟವಾಗಿ ತಿಳಿಯುತ್ತಿಲ್ಲ. ಈ ಕಾರಣಕ್ಕೆ ಈ ವಾರ ಎಲಿಮಿನೇಷನ್​ ನಡೆಸದೆಯೂ ಇರಬಹುದು. ಈ ಎಲ್ಲಾ ಪ್ರಶ್ನೆಗಳಿಗೆ ಭಾನುವಾರ (ಜೂನ್​ 27) ಸಿಗಲಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ಕ್ಯಾಪ್ಟನ್​ ರೂಂನಲ್ಲಿ ಭೂತ? ಕಪ್ಪಗಿನ ಆಕೃತಿ ಕಂಡು ಬೆಚ್ಚಿಬಿದ್ದ ಶಮಂತ್​

ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?

Published On - 2:36 pm, Sat, 26 June 21

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ