AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಗೆಲುವು ನಿನ್ನದೂ ಕೂಡ’; ಅನುಷ್ಕಾ ಶರ್ಮಾಗೆ ವಿರಾಟ್​ ಕೊಹ್ಲಿ ಪ್ರೀತಿಯ ಪತ್ರ

ವಿರಾಟ್ ಕೊಹ್ಲಿ ತಮ್ಮ ಕಳಪೆ ಪರ್ಫಾರ್ಮೆನ್ಸ್ ಅನೇಕ ಬಾರಿ ಟ್ರೋಲ್ ಆಗಿದ್ದು ಇದೆ. ಈ ಕಾರಣಕ್ಕೆ ಅವರನ್ನು ಅನೇಕರು ಟೀಕಿಸಿದ್ದಾರೆ. ಇದೆಲ್ಲವನ್ನೂ ಕೊಹ್ಲಿ ಮೆಟ್ಟಿ ನಿಂತಿದ್ದಾರೆ. ಇದಕ್ಕೆ ಅನುಷ್ಕಾ ಶರ್ಮಾ ಅವರು ನೀಡಿದ ಬೆಂಬಲವೂ ಕಾರಣ. ಹೀಗಾಗಿ ಅವರ ಪಾತ್ರವನ್ನು ವಿರಾಟ್ ಶ್ಲಾಘಿಸಿದ್ದಾರೆ.

‘ಈ ಗೆಲುವು ನಿನ್ನದೂ ಕೂಡ’; ಅನುಷ್ಕಾ ಶರ್ಮಾಗೆ ವಿರಾಟ್​ ಕೊಹ್ಲಿ ಪ್ರೀತಿಯ ಪತ್ರ
ಕೊಹ್ಲಿ-ಅನುಷ್ಕಾ
ರಾಜೇಶ್ ದುಗ್ಗುಮನೆ
|

Updated on: Jul 01, 2024 | 12:03 PM

Share

ಜೂನ್ 29ರಂದು ನಡೆದ ಟಿ20 ವಿಶ್ವಕಪ್ ಫೈನಲ್​ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾನ ಸೋಲಿಸಿದೆ. ಈ ಪಂದ್ಯ ಗೆದ್ದ ಬಳಿಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರು ಟಿ20 ಫಾರ್ಮ್ಯಾಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಪಂದ್ಯ ಗೆಲ್ಲಲು ಪ್ರತಿಯೊಬ್ಬ ಆಟಗಾರ ಹಾಕಿದ ಶ್ರಮ ತುಂಬಾನೇ ದೊಡ್ಡದು. ವಿಶೇಷ ಎಂದರೆ ಫೈನಲ್​​ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ ವಿರಾಟ್ ಕೊಹ್ಲಿ ಅವರು ಪತ್ನಿ ಅನುಷ್ಕಾ ಶರ್ಮಾ ನೀಡಿದ ಬೆಂಬಲವನ್ನು ಸ್ಮರಿಸಿದ್ದಾರೆ. ಅವರ ಪಾತ್ರವನ್ನು ಶ್ಲಾಘಿಸಿದ್ದಾರೆ.

ವಿರಾಟ್ ಕೊಹ್ಲಿ ಅವರು ಕ್ರಿಕೆಟ್​ನಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ ಮಕ್ಕಳನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು ಅನುಷ್ಕಾ ಶರ್ಮಾ ಅವರೇ ತೆಗೆದುಕೊಂಡಿದ್ದಾರೆ. ಈ ಕಾರಣದಿಂದಲೇ ಅವರು ಚಿತ್ರರಂಗದಿಂದ ದೂರ ಇದ್ದಾರೆ. ಈ ತ್ಯಾಗವನ್ನು ವಿರಾಟ್ ಅವರು ಪರೋಕ್ಷವಾಗಿ ಸ್ಮರಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಪ್ರೀತಿಯಿಂದ ಪೋಸ್ಟ್ ಹಾಕಿದ್ದಾರೆ.

‘ನೀನಿಲ್ಲದೆ ಇದೆಲ್ಲವೂ ಸಾಧ್ಯವಿರಲಿಲ್ಲ. ನೀನು ನನ್ನನ್ನು ವಿನಮ್ರವಾಗಿ ಇರುವಂತೆ ಮಾಡಿದೆ. ನೀನು ಎಲ್ಲವನ್ನೂ ಪ್ರಾಮಾಣಿಕವಾಗಿ ಹೇಳುತ್ತೀಯಾ. ನಾನು ನಿನಗೆ ಸದಾ ಕೃತಜ್ಞ. ಈ ಗೆಲುವು ನನ್ನದಷ್ಟೇ ನಿನ್ನದೂ ಕೂಡ ಹೌದು. ನೀನು ನೀನಾಗಿರುವುದಕ್ಕೆ ಐ ಲವ್​ ಯೂ, ಧನ್ಯವಾದಗಳು’ ಎಂದು ಅನುಷ್ಕಾ ಅವರನ್ನು ವಿರಾಟ್ ಟ್ಯಾಗ್ ಮಾಡಿದ್ದಾರೆ.

View this post on Instagram

A post shared by Virat Kohli (@virat.kohli)

ವಿರಾಟ್ ಕೊಹ್ಲಿ ಅವರು ಅನೇಕ ಬಾರಿ ಟ್ರೋಲ್ ಆಗಿದ್ದು ಇದೆ. ತಮ್ಮ ಕಳಪೆ ಪರ್ಫಾರ್ಮೆನ್ಸ್ ಕಾರಣಕ್ಕೆ ಅವರನ್ನು ಅನೇಕರು ಟೀಕಿಸಿದ್ದಾರೆ. ಆದರೆ, ಇದೆಲ್ಲವನ್ನೂ ಕೊಹ್ಲಿ ಮೆಟ್ಟಿ ನಿಂತಿದ್ದಾರೆ. ಇದಕ್ಕೆ ಅನುಷ್ಕಾ ಶರ್ಮಾ ಅವರು ನೀಡಿದ ಬೆಂಬಲವೂ ಕಾರಣ. ಅನುಷ್ಕಾ ಅವರು ವಿರಾಟ್ ಪರ ಯಾವಾಗಲೂ ನಿಂತಿದ್ದಾರೆ. ವಿರಾಟ್ ಅವರನ್ನು ಸಂಪೂರ್ಣವಾಗಿ ಬದಲಿಸಿದ್ದಾರೆ.

ಇದನ್ನೂ ಓದಿ:  ದಾಖಲೆ ಸೃಷ್ಟಿಸಿದ ವಿರಾಟ್ ಕೊಹ್ಲಿಯ ಒಂದೇ ಒಂದು ಪೋಸ್ಟ್​

ವಿರಾಟ್ ಅವರು ಟಿ20 ಫಾರ್ಮ್ಯಾಟ್​​ಗೆ ನಿವೃತ್ತಿ ಘೋಷಿಸಿರುವುದು ಅನೇಕರಿಗೆ ಬೇಸರ ಮೂಡಿಸಿದೆ. ಅವರು ಟೆಸ್ಟ್ ಹಾಗೂ ಏಕದಿನ ಪಂದ್ಯಗಳನ್ನು ಆಡಲಿದ್ದಾರೆ. ವಿರಾಟ್ ಅವರು ಆರ್​ಸಿಬಿ ಪರ ಆಟ ಮುಂದುವರಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್