AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Elimination: ಎಂಟನೇ ವಾರ ಈ ಸ್ಪರ್ಧಿಯ ಬಿಗ್​ ಬಾಸ್​ ಪಯಣ ಅಂತ್ಯ?

Kannada Bigg Boss Elimination: ಈ ವಾರ ಮಂಜು ಪಾವಗಡ, ದಿವ್ಯಾ ಸುರೇಶ್, ಪ್ರಶಾಂತ್, ವೈಷ್ಣವಿ, ರಘು, ರಾಜೀವ್ ಡೇಂಜರ್ ಝೋನ್‌ನಲ್ಲಿದ್ದಾರೆ.

Bigg Boss Kannada Elimination: ಎಂಟನೇ ವಾರ ಈ ಸ್ಪರ್ಧಿಯ ಬಿಗ್​ ಬಾಸ್​ ಪಯಣ ಅಂತ್ಯ?
ಬಿಗ್​ ಬಾಸ್​ ಕನ್ನಡ
ರಾಜೇಶ್ ದುಗ್ಗುಮನೆ
|

Updated on:Apr 25, 2021 | 2:05 PM

Share

ಬಿಗ್​ ಬಾಸ್​ ಸ್ಪರ್ಧಿಗಳು ಈಗಾಗಲೇ 50 ದಿನ ಪೂರೈಸಿದ್ದಾರೆ. ಎಂಟನೇ ವಾರದ ಎಲಿಮಿನೇಷನ್​ ಭಾನುವಾರ (ಎಪ್ರಿಲ್​ 25) ನಡೆಯುತ್ತಿದೆ. ಈ ವಾರ ಮಂಜು ಪಾವಗಡ, ದಿವ್ಯಾ ಸುರೇಶ್​, ಪ್ರಶಾಂತ್​ ಸಂಬರಗಿ, ವೈಷ್ಣವಿ, ರಘು ಹಾಗೂ ರಾಜೀವ್​ ತಲೆ ಮೇಲೆ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ಈ ಆರು ಮಂದಿಯ ಪೈಕಿ ಒಬ್ಬರ ಪ್ರಯಾಣ ಈ ವಾರಕ್ಕೆ ಅಂತ್ಯಗೊಳ್ಳಲಿದೆ.

ಈ ವಾರ ಮನೆಯಲ್ಲಿ ಅತಿ ಹೆಚ್ಚು ವೋಟ್​ ಪಡೆದು ನಾಮಿನೇಟ್​ ಆದವರು ಮಂಜು ಹಾಗೂ ದಿವ್ಯಾ. ಮಂಜು ಮತ್ತು ದಿವ್ಯಾ ಏಳನೇ ವಾರದ ಟಾಸ್ಕ್​ನಲ್ಲಿ ಮೋಸದ ಹಾದಿ ತುಳಿದಿದ್ದರು. ಇದು ಮನೆಮಂದಿಗೆ ಶಾಕ್​ ನೀಡಿತ್ತು. ಈ ಘಟನೆಯಿಂದ ಮನೆಯ ಸ್ಪರ್ಧಿಗಳು ತುಂಬಾನೇ ಬೇಸರ ಮಾಡಿಕೊಂಡಿದ್ದರು. ಹೀಗಾಗಿ, ಬಹುತೇಕರು ಮಂಜು ಮತ್ತು ದಿವ್ಯಾ ಹೆಸರನ್ನು ತೆಗೆದುಕೊಂಡರು.

ರಘು ವಿರುದ್ಧ ಮಂಜು ಹಾಗೂ ದಿವ್ಯಾ ಸುರೇಶ್​ ವೋಟ್​ ಮಾಡಿದ್ದಾರೆ. ವೈಷ್ಣವಿ ವಿರುದ್ಧ  ಚಕ್ರವರ್ತಿ ಚಂದ್ರಚೂಡ್​ ಹಾಗೂ ಪ್ರಿಯಾಂಕಾ ಮತ ಹಾಕಿದ್ದಾರೆ. ಹೀಗಾಗಿ, ರಘು ಮತ್ತು ವೈಷ್ಣವಿ ಕೂಡ ನಾಮಿನೇಟ್​ ಆಗಿದ್ದಾರೆ. ಕಳೆದ ವಾರದ ಟಾಸ್ಕ್​ನಲ್ಲಿ ಅಷ್ಟು ಉತ್ತಮವಾಗಿ ಆಡಿಲ್ಲ ಎಂಬ ಕಾರಣಕ್ಕೆ ಪ್ರಶಾಂತ್​ ಸಂಬರಗಿಯನ್ನು ನಾಮಿನೇಟ್​ ಮಾಡಲಾಗಿತ್ತು. ನೇರವಾಗಿ ನಾಮಿನೇಟ್​ ಮಾಡುವ ಅವಕಾಶ ಕ್ಯಾಪ್ಟನ್​ ಅರವಿಂದ್​ಗೆ ಇತ್ತು. ಈ ವೇಳೆ ರಾಜೀವ್ ಅವರನ್ನು ನಾಮಿನೇಟ್​ ಮಾಡಿದರು.

ಹೀಗಾಗಿ ಈ ವಾರ ಮಂಜು ಪಾವಗಡ, ದಿವ್ಯಾ ಸುರೇಶ್, ಪ್ರಶಾಂತ್, ವೈಷ್ಣವಿ, ರಘು, ರಾಜೀವ್ ಡೇಂಜರ್ ಝೋನ್‌ನಲ್ಲಿದ್ದಾರೆ. ಮಂಜು ಪಾವಗಡ ಡಲ್​ ಆದರೂ ಅವರ ಟಿಆರ್​ಪಿ ಕುಗ್ಗಿಲ್ಲ. ಹೀಗಾಗಿ, ಅವರು ಮನೆಯಿಂದ ಹೊರ ಹೋಗೋದು ಅನುಮಾನವೇ. ಪ್ರಶಾಂತ್​ ಸಂಬರಗಿ ಮನೆ ಮಂದಿಗೆ ಇಷ್ಟವಾಗದೆ ಇರಬಹುದು ಆದರೆ, ಅವರ ತಂತ್ರಗಾರಿಕೆ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಹೀಗಾಗಿ, ಅವರು ಕೂಡ ಮನೆಯಲ್ಲಿ ಮುಂದುವರಿಯಬಹುದು.

ಅಗ್ನಿಸಾಕ್ಷಿ ಖ್ಯಾತಿಯ ವೈಷ್ಣವಿ ಸೈಲೆಂಟ್​ ಆಗಿದ್ದುಕೊಂಡೇ ಪ್ರೇಕ್ಷಕರನ್ನು ಸೆಳೆಯುತ್ತಿದ್ದಾರೆ. ದಿವ್ಯಾ-ಮಂಜು ಕಹಾನಿ ಎಲ್ಲರ ಗಮನ ಸೆಳೆಯುತ್ತಿದೆ. ಇನ್ನು, ರಘು ಈ ವಾರದ ಕ್ಯಾಪ್ಟನ್​ ಆಗಿದ್ದಾರೆ. ಹೀಗಾಗಿ ಇವರಿಬ್ಬರೂ ಹೋಗೋದು ಡೌಟ್​ ಎನ್ನಲಾಗುತ್ತಿದೆ. ಇನ್ನು ಉಳೀದುಕೊಂಡಿದ್ದು ರಾಜೀವ್​. ಈ ವಾರ ಅವರೇ ಮನೆಯಿಂದ ಹೊರ ಹೋಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸೆಲ್ಫೀ ನೆಪದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಎಲ್ಲರೆದುರೇ ಮುತ್ತಿಟ್ಟ ಅಭಿಮಾನಿ! ಮರುದಿನವೇ ಬಂತು ಕೊರೊನಾ

Published On - 3:18 pm, Sat, 24 April 21

Follow Us
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್